ಸರ್ಕಾರೇತರ ವಾಹನಗಳ ಮೇಲೆ ಸರ್ಕಾರಿ ಲಾಂಛನ, ಚಿಹ್ನೆ; 7 ವಿಶೇಷ ತಂಡ ರಚನೆ, ಕಾರ್ಯಾಚರಣೆಗಿಳಿದ ಇಲಾಖೆ

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಾಹನಗಳನ್ನು ಹೊರತುಪಡಿಸಿ, ಕರ್ನಾಟಕ ಸರ್ಕಾರದ ಹೆಸರು, ಲಾಂಛನ ಹಾಗೂ ಚಿಹ್ನೆ ಬಳಸಲು ಸರ್ಕಾರದ ಅಧೀನದ ಸಂಸ್ಥೆಗಳು, ಖಾಸಗಿ ಸಂಸ್ಥೆಗಳು ಹಾಗೂ ವ್ಯಕ್ತಿಗಳಿಗೆ ಅವಕಾಶವಿರುವುದಿಲ್ಲ. ಆದರೂ, ನಗರದಲ್ಲಿ ಅನಧಿಕೃತವಾಗಿ ಚಿಹ್ನೆ ಹಾಗೂ ಲಾಂಛನ ಬಳಸಿರುವುದು ಕಂಡುಬಂದಿದೆ. ಈ ಹಿನ್ನೆಲೆ, ಇದಕ್ಕೆ ಕಡಿವಾಣ ಹಾಕಿ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ಮುಂದಾಗಿದೆ.

ಈಗಾಗಲೇ ಸಾರಿಗೆ ಇಲಾಖೆಯಲ್ಲಿ ಈ ಬಗ್ಗೆ ನೂರಾರು ಪ್ರಕರಣಗಳು ದಾಖಲಾಗಿದ್ದು, ಇಂತಹ ನೋಂದಣಿ ಫಲಕಗಳನ್ನು ತೆರವುಗೊಳಿಸಲು ರಾಜ್ಯ ಸಾರಿಗೆ ಇಲಾಖೆ ಏಳು ವಿಶೇಷ ತಂಡಗಳನ್ನು ರಚಿಸಿ, ಜೂನ್ ಒಂದರಿಂದ ಕಾರ್ಯಾಚರಣೆ ಆರಂಭಿಸಲು ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ. ಮೊದಲಿಗೆ ₹500, ಎರಡನೇ ಬಾರಿ ₹1,000 ಅದಾದ ನಂತರ ವಾಹನವನ್ನು ಸೀಜ್ ಮಾಡಲು ಇಲಾಖೆ ನಿರ್ಧರಿಸಿದೆ ಎಂದು ವರದಿಗಳು ತಿಳಿಸಿವೆ.

ಸಾರಿಗೆ ಇಲಾಖೆಯ ನಿಯಮದಂತೆ, ಕೇವಲ ಸರ್ಕಾರಿ ವಾಹನಗಳಿಗೆ ಅಂದರೆ, ಜಿ ಸಿರೀಸ್ ಇರೋ ನಂಬರ್ ಪ್ಲೇಟ್ ಇರುವ ವಾಹನಗಳಲ್ಲಿ ಮಾತ್ರ ಕರ್ನಾಟಕ ಸರ್ಕಾರದ ಹೆಸರು, ಲಾಂಛನ ಇರಬೇಕು. ಅದನ್ನು ಹೊರತು ಪಡಿಸಿ, ಸರ್ಕಾರದ ಅಧೀನದಲ್ಲಿ ಬರುವ ಸರ್ಕಾರಿ ನಿಗಮ, ಮಂಡಳಿ, ಸಂಸ್ಥೆ, ಲೋಕಲ್ ಬಾಡಿ, ಮುನ್ಸಿಪಲ್ ವಾಹನಗಳಲ್ಲಿಯೂ ಕೂಡ ಸರ್ಕಾರದ ಲಾಂಛನದ ಬಳಕೆಗೆ ಅವಕಾಶವಿಲ್ಲ‌.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಪೊಲೀಸ್ ಸಿಬ್ಬಂದಿ ದೈಹಿಕ ಮತ್ತು ಮಾನಸಿಕ ಆರೋಗ್ಯ ಸ್ವಾಸ್ಥ್ಯಕ್ಕಾಗಿ ಕ್ರಮ; ಪೊಲೀಸ್ ಆಯುಕ್ತ ಬಿ.ದಯಾನಂದ್

ಉದಾಹರಣೆಗೆ, ಕೆಎಸ್​ಆರ್​ಟಿಸಿ ನಿಗಮವಾದರೂ ಅಧಿಕಾರಿಗಳು ಸರ್ಕಾರದ ಚಿಹ್ನೆ, ಹೆಸರು ಬಳಸುವಂತಿಲ್ಲ. ಅನಧಿಕೃತವಾದ ಲಾಂಛನ ಅಥವಾ ಚಿಹ್ನೆ ಹೊಂದಿರುವ ವಾಹನಗಳ ವಿರುದ್ಧ ಮೋಟಾರು ವಾಹನಗಳ ಕಾಯ್ದೆಯಡಿ ಕ್ರಮ ಕೈಗೊಂಡು, ಪ್ರಕರಣ ದಾಖಲು ಮಾಡುವ ಎಚ್ಚರಿಕೆಯನ್ನು ಸಾರಿಗೆ ಇಲಾಖೆ ನೀಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...