ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯರ ಸೇವಾವಧಿ ವಿಸ್ತರಣೆಗೆ ಚಿಂತನೆ; ಯುವಜನರಿಗೆ ಎಲ್ಲಿದೆ ಅವಕಾಶ?

Date:

ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯರ ನಿವೃತ್ತಿ ವಯಸ್ಸನ್ನು 60ರಿಂದ 65ಕ್ಕೆ ಏರಿಸುವ ಚಿಂತನೆಯನ್ನು ಸರ್ಕಾರ ನಡೆಸಿದೆ. ಜಯದೇವ ಹೃದಯ ರಕ್ತನಾಳ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ವೈದ್ಯರೊಂದಿಗೆ ನಡೆಸಿದ ಸಂವಾದದ ಸಂದರ್ಭದಲ್ಲಿ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಈ ಮಾಹಿತಿಯನ್ನು ನೀಡಿದ್ದಾರೆ.

ಸಂವಾದದ ವೇಳೆ ಹಿರಿಯ ವೈದ್ಯರುಗಳು ಸೇವಾವಧಿ ವಿಸ್ತರಿಸಬೇಕು ಎಂದು ಪ್ರಸ್ತಾಪಿಸಿದರು. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯರಾಗಿ ಕಾರ್ಯನಿರ್ವಹಿಸಲೆಂದು ಹಲವು ವರ್ಷಗಳು ಕಷ್ಟಪಟ್ಟು ಕೆಲಸ ಮಾಡಲಾಗಿರುತ್ತದೆ. ಆದರೆ 20-25 ವರ್ಷ ಕಾಲ ಮಾತ್ರ ಈ ಸೇವೆ ಸಲ್ಲಿಸಲು ಅವಕಾಶ ಸಿಗುತ್ತದೆ. ಈ ನಿಟ್ಟಿನಲ್ಲಿ ಸೇವಾವಧಿ ವಿಸ್ತರಿಸಬೇಕು ಎಂದು ಮನವಿ ಮಾಡಿದರು.

ಇದನ್ನು ಓದಿದ್ದೀರಾ? ಕಳ್ಳರಾದರೇ ಸರ್ಕಾರಿ ವೈದ್ಯರು; ವೈದ್ಯರಿಗೆ 4 ಬಾರಿ ಬಯೋಮೆಟ್ರಿಕ್ ಅಸ್ತ್ರವೇಕೆ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದಕ್ಕೆ ಪ್ರತಿಕ್ರಿಯೆ ನೀಡಿದ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್, ಮುಖ್ಯಮಂತ್ರಿಯೊಂದಿಗೆ ಚರ್ಚಿಸಿ ಸೇವಾವಧಿಯನ್ನು ಐದು ವರ್ಷಗಳ ಕಾಲ ವಿಸ್ತರಿಸುವ ನಿರ್ಧಾರ ಮಾಡಲಾಗುವುದು. ಅನುಭವಿ ವೈದ್ಯರನ್ನು ಹೆಚ್ಚು ಕಾಲ ಉಳಿಸಿಕೊಳ್ಳಲು ನಾವು ಉತ್ಸುಕರಾಗಿದ್ದೇವೆ ಎಂದಿದ್ದಾರೆ. ಆದರೆ ಸದ್ಯ ರಾಜ್ಯ ಸಚಿವರ ಈ ದ್ವಂದ್ವ ನಿಲುವು ಚರ್ಚೆಗೆ ಗ್ರಾಸವಾಗಿದೆ.

ಇತ್ತೀಚೆಗಷ್ಟೇ ಸರ್ಕಾರಿ ವೈದ್ಯರು ತಮ್ಮ ಕೆಲಸದ ಅವಧಿಯಲ್ಲಿ 4 ಬಾರಿ ಬಯೋಮೆಟ್ರಿಕ್ ನೀಡಬೇಕು ಎಂದು ಸರ್ಕಾರ ನಿಯಮ ರೂಪಿಸಿದೆ. ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರು ಸರಿಯಾಗಿ ಕಾರ್ಯನಿರ್ವಹಿಸಲ್ಲ, ಬೆಳಿಗ್ಗೆ ಹಾಜರಾತಿ ಹಾಕಿ ಬಳಿಕ ಖಾಸಗಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುವ ಆರೋಪಗಳಿವೆ. ಈ ಆರೋಪ ನಿಜವೂ ಹೌದು. ಸರ್ಕಾರಿ ವೈದ್ಯರ ಸೇವೆಯ ಮೇಲೆ ನಿಗಾ ವಹಿಸುವ ನಿಟ್ಟಿನಲ್ಲಿ ಸರ್ಕಾರ ನಾಲ್ಕು ಬಾರಿ ಬಯೋಮೆಟ್ರಿಕ್ ನೀಡಬೇಕು ಎಂದು ಸೂಚಿಸಿದೆ.

ಇದನ್ನು ಓದಿದ್ದೀರಾ? ಮಂಗಳೂರು | ಬಾಲಕನ ಎದೆಗೆ ಹೊಕ್ಕಿದ್ದ ತೆಂಗಿನ ಗರಿ ಹೊರತೆಗೆದು ಜೀವ ಉಳಿಸಿದ ವೆನ್ಲಾಕ್ ಆಸ್ಪತ್ರೆಯ ವೈದ್ಯರು

ಈಗ ಅದೇ ಸರ್ಕಾರ ಈ ವೈದ್ಯರುಗಳ ಸೇವಾವಧಿಯನ್ನು ವಿಸ್ತರಿಸುವ ನಿರ್ಧಾರವನ್ನು ಮಾಡಿದೆ. ಒಂದೆಡೆ ಸರ್ಕಾರಿ ವೈದ್ಯರು ವೇತನ ಪಡೆಯುತ್ತಾರೆ, ಆದರೆ ಸರಿಯಾಗಿ ಕಾರ್ಯನಿರ್ವಹಿಸುವುದಿಲ್ಲ ಎಂಬ ಕಾರಣಕ್ಕೆ ಕ್ರಮ ಕೈಗೊಳ್ಳುವುದು. ಮತ್ತೊಂದೆಡೆ ಅದೇ ವೈದ್ಯರಿಗೆ ಇನ್ನೂ ಐದು ವರ್ಷಗಳ ಕಾಲ ವೇತನ ಪಡೆಯಲು ಅವಕಾಶ ನೀಡಿ ಸೇವಾವಧಿ ವಿಸ್ತರಣೆ ಮಾಡುವುದು!

ವೃತ್ತಿಪರರಿಗೆ, ನುರಿತರಿಗೆ ಅವಕಾಶ ನೀಡಬೇಕೆಂಬುದು ಸರಿ. ಆದರೆ ಯುವಜನರಿಗೆ, ಮುಂದಿನ ಪೀಳಿಗೆಗೆ ಕಲಿಕೆಯ ಅವಕಾಶ ಎಲ್ಲಿದೆ? ವೈದ್ಯಕೀಯ ಶಿಕ್ಷಣ ಪಡೆದ ಲಕ್ಷಾಂತರ ವಿದ್ಯಾರ್ಥಿಗಳು ಇಂದಿಗೂ ಉದ್ಯೋಗದ ಹುಡುಕಾಟದಲ್ಲಿದ್ದಾರೆ. ಈ ಯುವಜನರಿಗೆ ಸರಿಯಾದ ತರಬೇತಿ ನೀಡಿ, ಉದ್ಯೋಗವಕಾಶ ಕಲ್ಪಿಸಬೇಕಾಗಿದ್ದು ಸರ್ಕಾರದ ಜವಾಬ್ದಾರಿಯಾಗಿದೆ. ಆದರೆ ಯುವಜನರಿಗೆ ಅವಕಾಶ ನೀಡದೆ 60 ವರ್ಷ ದಾಟಿದ ಹಿರಿಯ ನಾಗರಿಕರಿಗೆ ಮತ್ತಷ್ಟು ಅವಕಾಶ ನೀಡುವುದು ಹೇಗೆ ಸರಿ? ಈ ಹಿರಿಯ ವೈದ್ಯರನ್ನು ಯುವಕರಿಗೆ ತರಬೇತಿ ನೀಡಲು ನೇಮಿಸಬಹುದಲ್ಲವೇ?

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...