ಪಿಂಚಣಿ ನೀಡಲೂ ಸರ್ಕಾರದ ಬಳಿ ಹಣವಿಲ್ಲ: ಆರ್‌ ಅಶೋಕ್‌ ವಾಗ್ದಾಳಿ

Date:

“ರಾಜ್ಯದ ಬೊಕ್ಕಸ ಬರಿದಾಗಿಲ್ಲ, ರಾಜ್ಯದ ಖಜಾನೆ ಖಾಲಿಯಾಗಿಲ್ಲ ಎಂದು ತಮ್ಮ ಕಿತ್ತೋಗಿರುವ ಸರ್ಕಾರಕ್ಕೆ ತೇಪೆ ಹಾಕುವ ಕೆಲಸ ಮಾಡುತ್ತೀರಲ್ಲ ಸಿಎಂ ಸಿದ್ದರಾಮಯ್ಯನವರೇ, ಕಳೆದ ಆರು ತಿಂಗಳಿಂದ ವೃದ್ಧಾಪ್ಯ, ವಿಧವಾ, ವಿಕಲಚೇತನರ ಮಾಸಾಶನ ನೀಡಿಲ್ಲವೇಕೆ” ಎಂದು ವಿಧಾನಸಭಾ ವಿರೋಧ ಪಕ್ಷದ ನಾಯಕ ಆರ್‌ ಅಶೋಕ ಪ್ರಶ್ನಿಸಿದ್ದಾರೆ.

ಸಾಮಾಜಿಕ ಭದ್ರತಾ ಯೋಜನೆ ಅಡಿಯಲ್ಲಿ ಸಂಧ್ಯಾ ಸುರಕ್ಷಾ, ವೃದ್ಧಾಪ್ಯ ವೇತನ, ವಿಧವಾ ವೇತನ, ವಿಕಲಚೇತನರಿಗೆ ರಾಜ್ಯ ಸರ್ಕಾರ ಮಾಸಾಶನ ನೀಡುತ್ತಿದೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಕ್ಷೇತ್ರದಲ್ಲೇ ಕಳೆದ ಐದಾರು ತಿಂಗಳುಗಳಿಂದ ಫಲಾನುಭವಿಗಳಿಗೆ ಮಾಸಾಶನ ತಲುಪಿಲ್ಲ ಎಂಬ ಆರೋಪ ಕೇಳಿಬಂದಿದೆ. ಈ ವಿಚಾರವಾಗಿ ಆರ್​. ಅಶೋಕ್ ಟ್ವೀಟ್‌ ಮಾಡಿ ಮುಖ್ಯಮಂತ್ರಿಗಳ ವಿರುದ್ಧ ಹರಿಹಾಯ್ದಿದ್ದಾರೆ.

“ಭ್ರಷ್ಟಾಚಾರ, ಕಮಿಷನ್, ಅವೈಜ್ಞಾನಿಕ ನೀತಿಗಳಿಂದ ರಾಜ್ಯದ ತೆರಿಗೆ ಹಣವನ್ನ ಲೂಟಿ ಮಾಡಿರುವ ರಾಜ್ಯ ಸರ್ಕಾರ ಸಾಮಾಜಿಕ ಭದ್ರತಾ ಪಿಂಚಣಿ ನೀಡಲೂ ಹಣವಿಲ್ಲದ ಶೋಚನೀಯ ಪರಿಸ್ಥಿತಿಯಲ್ಲಿದೆ” ಎಂದು ಟೀಕಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೇರಳದ ವ್ಯಕ್ತಿಗೆ ಪರಿಹಾರ

ರಾಜ್ಯದಲ್ಲಿ ಸೆರೆಹಿಡಿಯಲಾದ ಆನೆಯಿಂದ ಕೊಲ್ಲಲ್ಪಟ್ಟ ಕೇರಳದ ವ್ಯಕ್ತಿಯ ಕುಟುಂಬಕ್ಕೆ ಕರ್ನಾಟಕ ಸರ್ಕಾರವು ಪರಿಹಾರವಾಗಿ ₹15 ಲಕ್ಷವನ್ನು ಮಂಜೂರು ಮಾಡಿದೆ. ಕನ್ನಡಿಗರ ತೆರಿಗೆ ಹಣವನ್ನ ಕೇರಳ ಸಂಸದರಾದ ರಾಹುಲ್ ಗಾಂಧಿ ಹಾಗೂ ಕೆ.ಸಿ. ವೇಣುಗೋಪಾಲ್‌ ಅವರ ಅಣತಿಯಂತೆ ಬಿಡುಗಡೆ ಮಾಡಲು ಕರ್ನಾಟಕವೇನು ಕಾಂಗ್ರೆಸ್ ಪಕ್ಷದ ಆಸ್ತಿ ಅಂದುಕೊಂಡಿದ್ದೀರಾ, ಅರಣ್ಯ ಸಚಿವ ಈಶ್ವರ ಖಂಡ್ರೆ ಅವರೇ”
ಆರ್‌ ಅಶೋಕ್ ಪ್ರಶ್ನೆ ಮಾಡಿದ್ದಾರೆ.‌

“ಕನ್ನಡಿಗರ ತೆರಿಗೆ ರಾಹುಲ್ ಗಾಂಧಿ ಜೇಬಿಗೆ ಎಂದು ಕುಟುಕಿದ ಅಶೋಕ್, ಸಿಎಂ ಸಿದ್ದರಾಮಯ್ಯನವರೇ, ಇದು ನಮ್ಮ ತೆರಿಗೆ, ನಮ್ಮ ಹಕ್ಕು’ ಅಂತ ನಿಮ್ಮ ಪಕ್ಷದ ಹೈಕಮಾಂಡ್ ನಾಯಕರ ಬಳಿ ‘ಧೈರ್ಯವಾಗಿ ಪ್ರಶ್ನಿಸಲು’ ನಿಮ್ಮ ಸಚಿವರಿಗೆ ತಾಕತ್ತಿಲ್ಲವೇ?” ಎಂದು ಕಿಡಿಕಾರಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...