ಶಾಲಾ ಆರಂಭದ ಮೊದಲ ದಿನವೇ ಕತ್ತಲಾದ ಸರ್ಕಾರಿ ಶಾಲೆಗಳು

Date:

ಕರ್ನಾಟಕದಾದ್ಯಂತ 2024-25ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳು ಮೇ 29ರಿಂದ ಆರಂಭವಾಗಿವೆ. ಬೇಸಿಗೆ ರಜೆ ಮುಗಿಸಿ ಮಕ್ಕಳು ಶಾಲೆ ಕಡೆಗೆ ಮುಖ ಮಾಡಿದ್ದಾರೆ. ಶಾಲೆಗಳನ್ನು ಸ್ವಚ್ಛಗೊಳಿಸಿ, ಮೂಲಭೂತ ಸೌಕರ್ಯದ ಬಗ್ಗೆ ಕಾಳಜಿವಹಿಸಿ ‘ಶಾಲಾ ಪ್ರಾರಂಭೋತ್ಸವ’ ಆಚರಣೆ ಮಾಡಿ ಮಕ್ಕಳಿಗೆ ಸಿಹಿ ನೀಡಿ ಅವರನ್ನು ಬರಮಾಡಿಕೊಳ್ಳಬೇಕು. ಆದರೆ, ವಿದ್ಯಾರ್ಥಿಗಳಿಗೆ ಬೆಳಕು ನೀಡಬೇಕಾದ ರಾಜ್ಯದ ಬಹುತೇಕ ಸರ್ಕಾರಿ ಶಾಲೆಗಳಲ್ಲಿ ಪ್ರಾರಂಭದ ದಿನವೇ ಕತ್ತಲೇ ಆವರಿಸಿತ್ತು. ಶಾಲೆಗಳಲ್ಲಿ ವಿದ್ಯುತ್ ಕಡಿತವಾಗಿತ್ತು. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಘೋಷಣೆ ಮಾಡಿದ್ದ ಸರ್ಕಾರಿ ಶಾಲೆಗೆ ಉಚಿತ ನೀರು, ವಿದ್ಯುತ್ ಇನ್ನು ಜಾರಿಯಾಗದೇ ಇರುವುದೇ ಇದಕ್ಕೆ ಕಾರಣವೆಂದು ಹೇಳಲಾಗುತ್ತಿದೆ.

ಸರ್ಕಾರಿ ಶಾಲೆ ಆರಂಭದ ದಿನವಾದ ಮೇ 29ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣಾ ಕ್ಷೇತ್ರದ ಸರ್ಕಾರಿ ಶಾಲೆಗೆ ಕತ್ತಲೆ ಭಾಗ್ಯ ದೊರೆತಿದೆ. ವರುಣಾದ ಹಳ್ಳಿಯೊಂದರ ಸರ್ಕಾರಿ ಶಾಲೆಯಲ್ಲಿ ವಿದ್ಯುತ್ ಬಿಲ್ ಪಾವತಿ ಬಾಕಿ ಇದೆ ಎಂಬ ಕಾರಣಕ್ಕೆ ಚೆಸ್ಕಾಂ ಸಿಬ್ಬಂದಿ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿದ್ದರು. ಪರಿಣಾಮ, ಶಾಲಾ ಆರಂಭದ ಮೊದಲ ದಿನವೇ ಮಕ್ಕಳು ಕತ್ತಲೆಯಲ್ಲಿ ಕಳೆಯುವಂತಾಯಿತು.

2023ರ ನವೆಂಬರ್ 1ರಂದು ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಮುಖ್ಯಮಂತ್ರಿ ಸಿದ್ಧರಾಮಯ್ಯ, “2023ರ ನವೆಂಬರ್ 1ರಿಂದಲೇ ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಿಗೆ ಉಚಿತವಾಗಿ ವಿದ್ಯುತ್ ಹಾಗೂ ಕುಡಿಯುವ ನೀರು ಪೂರೈಕೆ ಮಾಡಲಾಗುವುದು. ಕರ್ನಾಟಕದ ಎಲ್ಲ ಸರ್ಕಾರಿ ಶಾಲೆಗಳಲ್ಲಿ 2024ರ ಮಾರ್ಚ್ ವರೆಗೆ ವಿದ್ಯುತ್ ಮತ್ತು ನೀರಿನ ಶುಲ್ಕವನ್ನು ಸರ್ಕಾರವೇ ಭರಸುತ್ತದೆ” ಎಂದು ಹೇಳಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದಾದ ಬಳಿಕ, ಶಾಲೆಗಳೇ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆ (ಎಸ್ಎಸ್ಕೆ) ಅನುದಾನ ಬಳಸಿಕೊಂಡು ವಿದ್ಯುತ್, ಕುಡಿಯುವ ನೀರಿನ ಶುಲ್ಕ ಭರಿಸಬೇಕು ಎಂದು ಸರ್ಕಾರ ಸುತ್ತೋಲೆ ಹೊರಡಿಸಿತ್ತು. ಬಳಿಕ, ಮತ್ತೊಂದು ಆದೇಶದಲ್ಲಿ, ಸರ್ಕಾರಿ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ 2024-2025ನೇ ಆರ್ಥಿಕ ವರ್ಷದಲ್ಲಿ ಏಪ್ರಿಲ್ 1ರಿಂದ ಉಚಿತ ವಿದ್ಯುತ್ ಹಾಗೂ ನೀರು ಪೂರೈಕೆಯ ವಾರ್ಷಿಕ ವೆಚ್ಚವನ್ನು ಇಂಧನ ಹಾಗೂ ನಗರಾಭಿವೃದ್ಧಿ ಇಲಾಖೆಗಳೇ ನೇರವಾಗಿ ಪಾವತಿಸಲಿವೆ ಎಂದು ಹೇಳಲಾಗಿತ್ತು.

ಪ್ರಸ್ತುತ ಲಭ್ಯವಿರುವ ಮಾಹಿತಿಗಳ ಪ್ರಕಾರ, ಸರ್ಕಾರಿ ಶಾಲಾ ಕಾಲೇಜುಗಳ ವಿದ್ಯುತ್ ಮತ್ತು ನೀರಿನ ಶುಲ್ಕ ಭರಿಸಲು ವಾರ್ಷಿಕ ₹24 ಕೋಟಿ ಅವಶ್ಯಕತೆ ಇದೆ. ಆದರೆ, ಇತ್ತೀಚಿನ ವರ್ಷಗಳಲ್ಲಿ ಈ ಮೊತ್ತವನ್ನು ಪಾವತಿಸಲು ಶಾಲೆಗಳ ಬಳಿ ಹಣ ಇರಲಿಲ್ಲ. ವಿದ್ಯುತ್ ಮತ್ತು ನೀರು ಅತ್ಯಾವಶ್ಯಕವಾಗಿದ್ದು, ಅದೆಷ್ಟೋ ಶಾಲೆಗಳಲ್ಲಿ ಶಿಕ್ಷಕರೇ ತಮ್ಮ ಸಂಬಳದಿಂದ ಭರಿಸುತ್ತಿದ್ದ ನಿದರ್ಶನಗಳಿವೆ. ಪ್ರತಿ ಶಾಲೆಗೆ ವಾರ್ಷಿಕ 8000-40,000 ರೂವರೆಗೆ ಶುಲ್ಕದ ಅವಶ್ಯಕತೆ ಇದೆ.

ಸರ್ಕಾರದ ಆದೇಶ ಸರಿಯಾಗಿ ಜಾರಿಗೆ ಬಾರದ ಕಾರಣ, ಸರ್ಕಾರಿ ಶಾಲೆಗಳ ವಿದ್ಯುತ್ ಶುಲ್ಕ ಪಾವತಿ ಆಗದೇ ಉಳಿದಿದೆ. ಪರಿಣಾಮವಾಗಿ ಸರ್ಕಾರಿ ಶಾಲೆಗಳು ಕತ್ತಲೆಯಲ್ಲಿ ನಡೆಯುವಂತಾಗಿದೆ. ಇದಕ್ಕೆ, ವರುಣಾ ಕ್ಷೇತ್ರದ ಶಾಲೆಯೇ ಉದಾಹರಣೆಯಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಫಾರ್ಮ್‌ಹೌಸ್‌ನಲ್ಲಿ ರೇವ್ ಪಾರ್ಟಿ; ಹೆಚ್ಚಿನ ಜನರಿಗೆ ನೋಟಿಸ್ ಜಾರಿ ಮಾಡಿದ ಸಿಸಿಬಿ

ಈ ಬಗ್ಗೆ ಈ ದಿನ.ಕಾಮ್ ಜತೆಗೆ ಸ್ಥಳೀಯರೊಬ್ಬರು ಮಾತನಾಡಿ, “ಸಿದ್ಧರಾಮಯ್ಯ ಅವರ ವರುಣಾ ಕ್ಷೇತ್ರದಲ್ಲಿರುವ ಸರ್ಕಾರಿ ಶಾಲೆಯೊಂದರಲ್ಲಿ ವಿದ್ಯುತ್ ಬಿಲ್ ಬಾಕಿ ಇದೆ ಎಂದು ಶಾಲೆ ಆರಂಭದ ದಿನವಾದ ಮೇ 29ರಂದು ಕರೆಂಟ್ ಕಟ್ ಮಾಡಿದ್ದಾರೆ. ಬಿಲ್ ಕಟ್ಟಿದ ಮೇಲೆ ನಂತರ ವಿದ್ಯುತ್ ಪೂರೈಕೆ ಮಾಡಿದರು. ಆಗ ಶಾಲಾ ಸಿಬ್ಬಂದಿಯೊಬ್ಬರು ಸಿಎಂ ಸಿದ್ಧರಾಮಯ್ಯ ಅವರು ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಮತ್ತು ನೀರು ಪೂರೈಕೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ ಎಂದು ಕೇಳಿದಾಗ, ಚೆಸ್ಕಾಂ ಸಿಬ್ಬಂದಿಯೊಬ್ಬರು ನಮಗಿನ್ನು ಈ ಬಗ್ಗೆ ಆದೇಶ ಬಂದಿಲ್ಲ ಎಂದು ಹೇಳಿದ್ದಾರೆ. ಶಾಲೆಗಳಲ್ಲಿ ಕರೆಂಟ್ ಇಲ್ಲದ ಕಾರಣ ನೀರು ಕೂಡ ಇರಲಿಲ್ಲ” ಎಂದು ವಿವರಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...