ಗೃಹಜ್ಯೋತಿ | ಉಚಿತ ವಿದ್ಯುತ್ ಬಿಲ್​ನಿಂದ ಆಧಾರ್ ಡೀಲಿಂಕ್ ಮಾಡುವುದು ಹೇಗೆ?

Date:

ರಾಜ್ಯದ ಜನರಿಗೆ ವಿಧಾನಸಭಾ ಚುನಾವಣೆ ಪೂರ್ವ ನೀಡಿದ ಗ್ಯಾರಂಟಿಗಳನ್ನು ಅಸ್ತಿತ್ವಕ್ಕೆ ತರುವಲ್ಲಿ ಕಾಂಗ್ರೆಸ್ ಸರ್ಕಾರ ಯಶಸ್ವಿಯಾಗಿದೆ. ಐದು ಗ್ಯಾರಂಟಿ ಯೋಜನೆಗಳ ಪೈಕಿ ಗೃಹಜ್ಯೋತಿ ಯೋಜನೆಯ ಲಾಭವನ್ನು ಕೋಟ್ಯಾಂತರ ಜನರು ಉಪಯೋಗಿಸುತ್ತಿದ್ದಾರೆ. ಪ್ರತಿ ಮನೆಗೂ 200 ಯೂನಿಟ್ ಉಚಿತ ವಿದ್ಯುತ್ ನೀಡುವುದು ಈ ಯೋಜನೆಯಾಗಿದೆ.

ಜನರು ಈ ಯೋಜನೆಯ ಲಾಭ ಪಡೆಯಲು ಕಡ್ಡಾಯವಾಗಿ ಪ್ರತಿ ಬೆಸ್ಕಾಂ ಖಾತೆಗೂ ತಮ್ಮ ಆಧಾರ್‌ ಲಿಂಕ್ ಮಾಡಿಸಲೇಬೇಕು. ಆಗ ಮಾತ್ರ ಗ್ರಾಹಕರು ‘ಗೃಹ ಜ್ಯೋತಿ’ ಯೋಜನೆಯ ಲಾಭ ಪಡೆಯಬಹುದು. ಮನೆ ಮಾಲೀಕರು ಹೀಗೆ ಲಾಭ ಪಡೆದರೇ, ಸಮಸ್ಯೆಇಲ್ಲ. ಆದರೆ, ಬಾಡಿಗೆದಾರರು ಸಾಮಾನ್ಯವಾಗಿ ಒಂದು-ಮನೆಯಿಂದ ಬೇರೆ ಮನೆಗೆ ಸ್ಥಳಾಂತರವಾಗುತ್ತಾರೆ. ಅವರು ಒಂದು ಬಾರಿ ಬಾಡಿಗೆ ಇರುವ ಮನೆಗೆ ಆಧಾರ ಲಿಂಕ್ ಮಾಡಿಸಿ, ಗೃಹಜ್ಯೋತಿ ಯೋಜನೆ ಪಡೆದುಕೊಂಡರೆ, ಮುಂದೆ ಈ ಮನೆ ಬಿಟ್ಟು ಬೇರೆ ಮನೆಗೆ ಹೋದಮೇಲೆ ಹೇಗೆ ಮತ್ತೆ ಯೋಜನೆಯ ಲಾಭ ಪಡೆಯುವುದು ಎಂಬುದು ಚಿಂತೆಗೀಡು ಮಾಡಿತ್ತು.

ಇದೇ, ವಿಚಾರವಾಗಿ ಬಹಳಷ್ಟು ಬಾಡಿಗೆದಾರರು ಪರಿತಪಿಸುತ್ತಿದ್ದಾರೆ. ಇದೀಗ, ಗ್ರಾಹಕರ ಚಿಂತೆಗೆ ಒಂದು ಪರಿಹಾರ ದೊರತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಾಡಿಗೆದಾರರ ಸಮಸ್ಯೆಗಳ ಬಗ್ಗೆ ಅರಿತಿರುವ ಸರ್ಕಾರ ಮತ್ತು ಎಸ್ಕಾಂ ಗೃಹಜ್ಯೋತಿ ಯೋಜನೆಯಲ್ಲಿ ವಿದ್ಯುತ್ ಬಿಲ್‌ನಿಂದ ಆಧಾರ್ ಲಿಂಕ್‌ ಅನ್ನು ಡೀಲಿಂಕ್ ಮಾಡುವ ಅವಕಾಶ ಕಲ್ಪಿಸಿದೆ.

ಆಧಾರ ಲಿಂಕ್‌ ಅನ್ನು ಡೀಲಿಂಕ್ ಮಾಡಲು ಗ್ರಾಹಕರು ನೇರವಾಗಿ ಎಸ್ಕಾಂ ಕಚೇರಿಗೆ ತೆರಳಿ ಅಗತ್ಯ ದಾಖಲೆಗಳನ್ನು ಸಲ್ಲಿಸಿ ಡೀಲಿಂಕ್ ಮಾಡಿಕೊಳ್ಳಬಹುದು. ಇನ್ನು ಆನ್​ಲೈನ್​ನಲ್ಲಿಯೂ ಕೂಡ ಗ್ರಾಹಕರು ಸೇವಾ ಸಿಂಧು ಪೋರ್ಟಲ್​ನ ಮೂಲಕ ಡೀಲಿಂಕ್‌ ಮಾಡಿಕೊಳ್ಳುವ ಅವಕಾಶ ಆದಷ್ಟೂ ಬೇಗ ಸಿಗಲಿದೆ ಎನ್ನಲಾಗಿದೆ.

ಗ್ರಾಹಕರು ನೇರವಾಗಿ ತಮ್ಮ ಮನೆಯ ಸಮೀಪವಿರುವ ಎಸ್ಕಾಂ ಕಚೇರಿಗೆ ತೆರಳಿ ಆಧಾರ ಡೀಲಿಂಕ್ ಮಾಡಲು ಮನೆಯ ವಿದ್ಯುತ್ ಬಿಲ್, ಲಿಂಕ್ ಆಗಿರುವ ಆಧಾರ್ ಕಾರ್ಡ್ ಪ್ರತಿ, ನಿಮ್ಮ ಭಾವಚಿತ್ರ, ಬಾಡಿಗೆ ಕರಾರು ಪತ್ರಗಳನ್ನು ತೆಗೆದುಕೊಂಡು ಹೋಗಬೇಕು.

ಹಾಗೆಯೇ, ಗೃಹಜ್ಯೋತಿ ಸ್ಕೀಮ್​ಗೆ ಅರ್ಜಿ ಸಲ್ಲಿಸಲಾಗಿದ್ದ ಅಪ್ಲಿಕೇಶನ್ ನಂಬರ್ ಮತ್ತು ಮೊಬೈಲ್ ನಂಬರ್​ನ ಮಾಹಿತಿಯನ್ನು ಕಚೇರಿಯಲ್ಲಿ ತಿಳಿಸಬೇಕಾಗುತ್ತದೆ.

ಈ ಸುದ್ದಿ ಓದಿದ್ದೀರಾ? ಉತ್ತಮ ನಡೆ | ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಸ್ಪೋಕನ್ ಇಂಗ್ಲಿಷ್ ತರಗತಿ

ಸದ್ಯ ಸೇವಾ ಸಿಂಧು ಪೋರ್ಟ್‌ನಲ್ಲಿ ಅಥವಾ ಆನ್‌ಲೈನ್‌ನಲ್ಲಿ ಈ ಯೋಜನೆಯಲ್ಲಿ ಆಧಾರ ಡೀಲಿಂಕ್ ಮಾಡುವ ಸೌಲಭ್ಯ ಸಧ್ಯಕ್ಕೆ ಇಲ್ಲ. ಶೀಘ್ರದಲ್ಲೇ ಇದು ಲಭ್ಯವಾಗಲಿದೆ.

ಆನ್‌ಲೈನ್‌ಲ್ಲಿ ಮುಂದಿನ ದಿನಗಳಲ್ಲಿ ಆಧಾರ ಡೀಲಿಂಕ್ ಆಡಿಸುವುದಾದರೇ, ಆಗ ಸೇವಾ ಸಿಂಧು ವೆಬ್​ಸೈಟ್ sevasindhugs1.karnataka.gov.in/gruhajyothi ​ಗೆ ತೆರಳಿ ಯೋಜನೆ ಕ್ಯಾನ್ಸಲ್ ಮಾಡಬಹುದು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...