“ಪ್ರಜ್ವಲ್‌ ರೇವಣ್ಣ ಸೆಕ್ಸ್‌ ವಿಡಿಯೋ ಪ್ರಕರಣ ನನ್ನ ಗಮನಕ್ಕೆ ಬಂದಿಲ್ಲ” ಎಂದು ಮುಜುಗರಕ್ಕೆ ಒಳಗಾದ ಜಿ ಟಿ ದೇವೇಗೌಡ

Date:

“ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರ ಪೆನ್‌ಡ್ರೈವ್‌ ಪ್ರಕರಣ ನನ್ನ ಗಮನಕ್ಕೆ ಬಂದಿಲ್ಲ. ಅವೆಲ್ಲ ಊಹಾಪೋಹ” ಎಂದು ಹೇಳುವ ಮೂಲಕ ಜೆಡಿಎಸ್‌ ಪಕ್ಷದ ಹಿರಿಯ ಮುಖಂಡ ಜಿ ಟಿ ದೇವೇಗೌಡ ಅವರು ಮಾಧ್ಯಮಗಳ ಮುಂದೆ ಮುಜುಗರಕ್ಕೆ ಒಳಗಾದರು. ಅಷ್ಟೇ ಅಲ್ಲ ಮಾಧ್ಯಮಗಳ ತೀಕ್ಷ್ಣ ಪ್ರಶ್ನೆಗಳಿಗೆ ತಬ್ಬಿಬ್ಬಾದ ಪ್ರಸಂಗ ನಡೆಯಿತು.

ಭಾನುವಾರ ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಜಿ ಟಿ ದೇವೇಗೌಡ, ಮಾಧ್ಯಮಗಳ ಪ್ರಶ್ನೆಗೆ ಆರಂಭದಲ್ಲಿ ಹಾರಿಕೆಯ ಉತ್ತರ ನೀಡಿದರು. ಚುನಾವಣೆಯ ಸಮಯದಲ್ಲಿ ಇಂತಹ ಷಡ್ಯಂತ್ರಗಳು ನಡೆಯುತ್ತವೆ. ಎದುರಾಳಿಯನ್ನು ಸೋಲಿಸಲು ಏನು ಬೇಕೋ ಅದನ್ನು ಮಾಡುತ್ತಾರೆ ಎಂದು ಹೇಳುತ್ತಾ ತೇಪೆ ಹಚ್ಚುವ ಪ್ರಯತ್ನ ಮಾಡಿದರು. ನಂತರ “ತನಿಖಾ ಸಂಸ್ಥೆಗಳು, ಸಿಐಡಿ, ಎಸ್‌ಐಟಿ ಎಲ್ಲವೂ ನಿಮ್ಮ ಕೈಯಲ್ಲಿದೆ. ಯಾವ ತನಿಖೆ ನಡೆಸಿದರೂ ನಾವು ಸ್ವಾಗತ ಮಾಡುತ್ತೇವೆ” ಎಂದು ಸಮಜಾಯಿಷಿ ನೀಡಿದರು.

“ಪ್ರಜ್ವಲ್‌ ರೇವಣ್ಣ ಅವರ ಸೆಕ್ಸ್‌ ವಿಡಿಯೊ ಬಹಿರಂಗಗೊಂಡು ಸಾವಿರಾರು ಹೆಣ್ಣುಮಕ್ಕಳ ಮಾನಹಾನಿ ಆಗಿದೆ. ಅದರಲ್ಲಿ ಜೆಡಿಎಸ್‌, ಬಿಜೆಪಿ ಪಕ್ಷದ ಕಾರ್ಯಕರ್ತರೂ ಇದ್ದಾರೆ. ಒಕ್ಕಲಿಗ ಹೆಣ್ಣುಮಕ್ಕಳೂ ಇದ್ದಾರೆ ಅವರ ಮಾನಹಾನಿ ತಡೆಯುವ ಸಂಬಂಧ ನಿಮ್ಮ ಪಕ್ಷ ಯಾವ ಕ್ರಮ ಕೈಗೊಳ್ಳಲಿದೆ” ಎಂಬ ಪ್ರಶ್ನೆಗೆ, “ನಾವು ಪ್ರತಿಯೊಬ್ಬ ಹೆಣ್ಣುಮಕ್ಕಳನ್ನು ಗೌರವಿಸುತ್ತೇವೆ. ನಾನು ಕೋರ್‌ ಕಮಿಟಿ ಅಧ್ಯಕ್ಷನಾಗಿ ನನ್ನ ಇತಿಮಿತಿಯಲ್ಲಿ ಏನು ಮಾತಾಡಬಹುದೋ ಅಷ್ಟು ಮಾತನಾಡುತ್ತೇನೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಕ್ಷದ ಸಂಸದನ ಬಗ್ಗೆ ಇಷ್ಟು ದೊಡ್ಡ ಆರೋಪ ಬಂದಿದ್ದರೂ ಪಕ್ಷದ ಕಡೆಯಿಂದ ಒಂದೇ ಒಂದು ಹೇಳಿ ಬಂದಿಲ್ಲವಲ್ಲ? ಉಚ್ಛಾಟನೆ ಮಾಡ್ತೀರಾ ಎಂಬ ಪ್ರಶ್ನೆಗೆ, ಪಕ್ಷದ ಸಭೆಯಲ್ಲಿ ಕೂತು ಚರ್ಚಿಸಿ ಶಿಸ್ತು ಕ್ರಮ ಜರುಗಿಸುವ ಬಗ್ಗೆ ತೀರ್ಮಾನಿಸುತ್ತೇವೆ. ನಮಗೂ ಒಂದು ಹೈಕಮಾಂಡ್‌ ಇದೆ ಎಂದರು.

ಪ್ರಜ್ವಲ್‌ ರೇವಣ್ಣ ಅವರು ಜರ್ಮನಿಗೆ ಹೋಗಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ಗೊತ್ತಿಲ್ಲ ಎಂದ ಜಿಟಿಡಿ ನಂತರ ಅವರು ಎಲ್ಲೂ ಹೋಗಿಲ್ಲ. ನಿನ್ನೆ ಭವಾನಿ ರೇವಣ್ಣ ಅವರ ಸಹೋದರನ ಸಾವಾಗಿತ್ತು. ಅಲ್ಲಿಗೂ ಬಂದು ಹೋಗಿದ್ದಾರೆ. ನಾವು ಮಂಡ್ಯದ ಮತದಾನ ಮುಗಿದ ನಂತರ ಹುಬ್ಬಳ್ಳಿಯ ಕಡೆ ಪ್ರಚಾರಕ್ಕೆ ಹೊರಟಿದ್ದೇವೆ. ಎಲ್ಲರನ್ನೂ ಕಾಯ್ಕೊಂಡು ಕೂರಲು ಸಾಧ್ಯವಿಲ್ಲ ಎಂದು ಹೇಳಿದರು.

“ತಪ್ಪು ಮಾಡಿದವರಿಗೆ ಶಿಕ್ಷೆ ಆಗಲಿ. ನನ್ನ ಮಗನೇ ಮಾಡಿರಲಿ, ಅಣ್ಣ ತಮ್ಮಂದಿರೇ ಆಗಿರಲಿ ಪ್ರಕರಣ ಮುಚ್ಚಿ ಹಾಕಲು ಹೋಗಲ್ಲ” ಎಂದು ಹೇಳಿದರು.

ಹಾಸನದಲ್ಲಿ ಗೆಲ್ತೀರಾ ಎಂಬ ಪ್ರಶ್ನೆಗೆ ಮೊದಲ ಹಂತದ ಮತದಾನ ಆದ 14 ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಜೆಡಿಎಸ್‌ ಮುಖಂಡ ಟಿ ಎ ಶರವಣ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲ್ಯಾಣ ಕರ್ನಾಟಕ | 3 ವರ್ಷ, 5,100 ಪ್ರಕರಣ; ಮಹಿಳೆಯರ ನಾಪತ್ತೆ ಹಿಂದೆ ಕಳ್ಳಸಾಗಣೆಯ ಕರಿನೆರಳು?!

ನಾಪತ್ತೆಯಾದ ಪ್ರತಿ ಜೀವವೂ ಮರಳಿ ತನ್ನ ಮನೆ ಸೇರುವಂತಾಗಲು ಮತ್ತು ಮುಂದಿನ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಉದ್ದಿಮೆ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ರಸರೆಕ್ಷನ್: ಇಂದ್ರಿಯಗಳ ಮೂಲಕ ಒಂದು ಶತಮಾನದ ಸಿನೆಮಾ ಪಯಣ ಬಿಡಿಸಿಡುವ ಚಿತ್ರ

'ರಸರೆಕ್ಷನ್' ಸಿನಿಮಾ ಅಂತಿಮವಾಗಿ ಹೇಳುವುದೇನೆಂದರೆ ಬದುಕು ಎಷ್ಟೇ ದೀರ್ಘವಾಗಿದ್ದರೂ, ಕನಸುಗಳಿಲ್ಲದಿದ್ದರೆ ಅದು...

ಹಾಸನ ಮಣ್ಣಿನ ಹೆಣ್ಣು ದನಿಗಳು | ಉಡುಪು ಉದ್ಯಮದಲ್ಲಿ ಜಿಲ್ಲೆಯ ಕುಶಲೆಯರು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...