ರಾಜ್ಯಪಾಲರಿಗೆ ದೂರು : ಬಿಜೆಪಿ ಲೆಟರ್‌ಹೆಡ್‌ಗೆ ಕುಮಾರಸ್ವಾಮಿ ಸಹಿ, ಕುತೂಹಲ ಕೆರಳಿಸಿದ ನಡೆ

Date:

  • ಸ್ಪೀಕರ್‌ ವಿರುದ್ಧ ಅವಿಶ್ವಾಸ ಮಂಡನೆಗೆ ಅವಕಾಶ ಕೇಳಿದ್ದೇವೆ: ಬೊಮ್ಮಾಯಿ
  • ಕಾಂಗ್ರೆಸ್‌ ನೇತೃತ್ವದ ಸರ್ಕಾರದ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ರಾಜ್ಯಪಾಲರಿಗೆ ದೂರು

2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಿಸುವ ಉದ್ದೇಶದಿಂದ ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್‌ ಮಿತ್ರಪಕ್ಷಗಳ ಸಭೆಯಲ್ಲಿ ಐಎಎಸ್ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಆರೋಪಿಸಿ ಬಿಜೆಪಿ ಮತ್ತು ಜೆಡಿಎಸ್‌ ನಾಯಕರು ಗುರುವಾರ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಮನವಿ ಸಲ್ಲಿಸಿದರು.

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಸಿ ಟಿ ರವಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸುನೀಲ್ ಕುಮಾರ್, ರಮೇಶ್ ಜಾರಕಿಹೊಳಿ ಹಾಗೂ ಪ್ರಭು ಚೌಹಾಣ್ ಸೇರಿದಂತೆ ಬಿಜೆಪಿ ಪರಿಷತ್ ಸದಸ್ಯರು ಸಹ ರಾಜಭವನಕ್ಕೆ ತೆರಳಿ ​ದೂರು ನೀಡಿದರು.

ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ಎಚ್​ ಡಿ ರೇವಣ್ಣ ಸೇರಿದಂತೆ ಜೆಡಿಎಸ್​ ಶಾಸಕರು ಸಹ ಬಿಜೆಪಿ ಜತೆಗೂಡಿ ಕಲಾಪ ಸುಗಮವಾಗಿ, ನಿಷ್ಪಕ್ಷಪಾತವಾಗಿ ನಡೆಸಲು ಸ್ಪೀಕರ್ ವಿಫಲವಾಗಿದ್ದಾರೆ ಎಂದು ಆರೋಪಿಸಿ ರಾಜ್ಯಪಾಲರಿಗೆ ದೂರು ನೀಡಿದರು. ಈ ಸಂದರ್ಭದಲ್ಲಿ ಬಿಜೆಪಿ, ಜೆಡಿಎಸ್ ನ ಶಾಸಕರು ಹಾಗೂ ಪರಿಷತ್ ಸದಸ್ಯರು ಉಪಸ್ಥಿತರಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಐಎಎಸ್ ಅಧಿಕಾರಿಗಳ ದುರ್ಬಳಕೆ ಮಾಡಿಕೊಂಡಿರುವ ರಾಜ್ಯ ಸರ್ಕಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯಪಾಲರಿಗೆ ನೀಡಿರುವ ಬಿಜೆಪಿಯ ಲೆಟರ್ ಹೆಡ್ ಗೆ ಕುಮಾರಸ್ವಾಮಿ ಅವರು ಸಹಿ ಮಾಡಿದ್ದಾರೆ.

H D Kumaraswamy 01

ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಅವರು ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ಅಥವಾ ಹೊರಗಿನಿಂದ ಬೆಂಬಲ ಕುರಿತ ಚರ್ಚೆ ರಾಜಕೀಯ ವಲಯದಲ್ಲಿ ಪ್ರಾರಂಭವಾಗಿರುವ ಬಿನ್ನಲೇ ಬಿಜೆಪಿ ಹೋರಾಟಕ್ಕೆ ಬೆಂಬಲ ನೀಡುತ್ತಿರುವುದು, ಅಧಿಕೃತ ಲೆಟರ್‌ಹೆಡ್‌ಗೆ ಸಹಿ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ.

ರಾಜ್ಯದಲ್ಲಿ ಚುನಾವಣೆ ಮುಗಿದು ಎರಡು ತಿಂಗಳು ಪೂರೈಸಿದರೂ ಬಿಜೆಪಿ ಇನ್ನೂ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿಲ್ಲ. ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡರೆ ಎಚ್‌ ಡಿ ಕುಮಾರಸ್ವಾಮಿ ಅವರಿಗೆ ವಿಪಕ್ಷ ನಾಯಕ ಸ್ಥಾನ ನೀಡಬಹುದು ಎನ್ನುವ ಮಾತು ಕೂಡ ಹರಿದಾಡುತ್ತಿದೆ.

ಇನ್ನು ಸದನದ ಒಳಗಡೆ ಹಾಗೂ ಹೊರಗೆ ಉಭಯ ಪಕ್ಷಗಳು ಒಗ್ಗಟ್ಟಾಗಿದ್ದು, ಕಾಂಗ್ರೆಸ್ ವಿರುದ್ಧ ಜಂಟಿಯಾಗಿ ಹೋರಾಟಕ್ಕಿಳಿದಿದೆ. ಮೈತ್ರಿಯ ಸುದ್ದಿ ಬೆನ್ನಲ್ಲೇ ಇಬ್ಬರ ಹೊಂದಾಣಿಕೆ ಹೋರಾಟ ಚರ್ಚೆಗೆ ಗ್ರಾಸವಾಗಿದೆ.

ರಾಜ್ಯಪಾಲರಿಗೆ ದೂರು ನೀಡುವ ಮುನ್ನ ಬಿಜೆಪಿ ನಾಯಕರು 10 ಶಾಸಕರನ್ನು ವಿಧಾನಸಭೆಯಿಂದ ಅಮಾನತು ಮಾಡಿರುವುದನ್ನು ಖಂಡಿಸಿ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು.

ಸ್ಪೀಕರ್‌ ವಿರುದ್ಧ ಅವಿಶ್ವಾಸ ಮಂಡನೆಗೆ ಅವಕಾಶ ಕೇಳಿದ್ದೇವೆ: ಬೊಮ್ಮಾಯಿ

ಸ್ಪೀಕರ್ ಆದವರು ರಾಜಕೀಯ ಪಕ್ಷಗಳ ಕಾರ್ಯಕ್ರಮಗಳಲ್ಲಿ ಹಾಜರಾಗಬಾರದು ಎಂಬುದನ್ನು ಪಾಲಿಸಿಕೊಂಡು ಬರಲಾಗಿದೆ. ಇವರು ಕಾಂಗ್ರೆಸ್ ಪಕ್ಷದ ಔತಣಕೂಟಕ್ಕೆ ಹಾಜರಾಗಿ ಊಟ ಮಾಡಿ ಬಂದಿದ್ದಾರೆ. ಅವರ ಮೇಲೆ ವಿಶ್ವಾಸ ಇಲ್ಲ ಎಂದು ನಾವು ಅವಿಶ್ವಾಸ ಮಂಡನೆಗೆ ಅವಕಾಶ ಕೇಳಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ರಾಜ್ಯಪಾಲರ ಭೇಟಿಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ಈ ಸರ್ಕಾರ ತನ್ನ ತಪ್ಪುಗಳನ್ನು ಮುಚ್ಚಿಕೊಳ್ಳಲು ಈ ರೀತಿ ಮಾಡುತ್ತಿದೆ. ಜನರು ಅವರಿಗೆ ಅಧಿಕಾರ ನೀಡಿದ್ದರೆ ಜನರ ಪರವಾಗಿ ಧ್ವನಿ ಎತ್ತಲು ನಮಗೂ ಅವಕಾಶ ಕೊಟ್ಟಿದ್ದಾರೆ ಎಂದು ಹೇಳಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಜೈನ ಮುನಿಗಳ ಹತ್ಯೆಯಿಂದ ಹಿಡಿದು ರಾಜ್ಯದಲ್ಲಿ ನಿರಂತರ ಕೊಲೆ ನಡೆಯುತ್ತಿವೆ. ಬರಗಾಲ ಬಿದ್ದಿದೆ. ಮೂರುವರೆ ಸಾವಿರ ಹಳ್ಳಿಗಳಲ್ಲಿ ಕುಡಿಯುವ ನೀರಿಲ್ಲ. ಇದರ ಬಗ್ಗೆ ಸದನದಲ್ಲಿ ಚೆರ್ಚೆಗೆ ಅವಕಾಶ ಕೊಡಲಿಲ್ಲ ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ರಾಜ್ಯಪಾಲರ ಭೇಟಿ ಮಾಡಿದ ಸ್ಪೀಕರ್ – ಡೆಪ್ಯೂಟಿ ಸ್ಪೀಕರ್: ಸದನದಲ್ಲಿ ನಡೆದ ಘಟನೆ ಬಗ್ಗೆ ವರದಿ ಸಲ್ಲಿಕೆ

ರಾಜಕೀಯ ಪಕ್ಷದ ಕಾರ್ಯಕ್ರಮಕ್ಕೆ ಬೇರೆ ರಾಜ್ಯಗಳ ನಾಯಕರ ಸ್ವಾಗತಕ್ಕೆ ಐಎಎಸ್ ಅಧಿಕಾರಿಗಳನ್ನು ಕಳುಹಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ನಮ್ಮ ಪಕ್ಷದ ಹತ್ತು ಮಂದಿ ಸದಸ್ಯರನ್ನು ಅಮಾನತು ಮಾಡಿದ್ದಾರೆ. ಇಂತ ಕೆಟ್ಟ ನಿರ್ಧಾರ ಇತಿಹಾಸದಲ್ಲಿ ಆಗಿಲ್ಲ. ರಾಜಕೀಯ ಲಾಭಕ್ಕೆ ಕಾಂಗ್ರೆಸ್ ಸ್ಪೀಕರ್ ಹುದ್ದೆ ಬಳಕೆ ಮಾಡಿಕೊಳ್ಳುತ್ತಿದೆ ಎಂದು ದೂರಿದರು.

ಸದ್ಯ ಸ್ಪೀಕರ್ ಹುದ್ದೆ ದುರುಪಯೋಗ ಆಗುತ್ತಿದೆ‌. ಸ್ಪೀಕರ್ ಅವರು ನಮ್ಮನ್ನು ಕರೆದು ಮಾತನಾಡಿಸಿ ಸಮಸ್ಯೆ ಬಗೆಹರಿಸಬಹುದಿತ್ತು. ಈ ರೀತಿಯ ಪ್ರಕರಣಗಳು ಹಿಂದೆಯೂ ನಡೆದಿವೆ. ಈ ರೀತಿಯ ತೀರ್ಮಾನ ಯಾರೂ ಮಾಡಿರಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಟೆರೆರಿಸ್ಟ್ ಚಟುವಟಿಕೆಗಳು ನಡೆಯುತ್ತಿವೆ. ಅವರ ಬಳಿ ಸಿಕ್ಕಿರುವ ದಾಖಲೆ ನೋಡಿದರೆ ಅವರಿಗೆ ಅಂತಾರಾಷ್ಟ್ರೀಯ ಸಂಪರ್ಕ ಇದೆ. ಹೀಗಾಗಿ ಈ ಪ್ರಕರಣವನ್ನು ಎನ್ಐಎಗೆ ವಹಿಸಬೇಕು ಎಂದು ನಾವು ಆಗ್ರಹಿಸಿದ್ದೇವೆ. ಈ ಎಲ್ಲ ಮಾಹಿತಿಗಳನ್ನು ರಾಜ್ಯಪಾಲರ ಗಮನಕ್ಕೆ ತಂದಿದ್ದೇವೆ. ಅವರು ಕೇಂದ್ರ ಸರ್ಕಾರಕ್ಕೆ ವರದಿ ಕೊಡುವುದಾಗಿ ಹೇಳಿದ್ದಾರೆ ಎಂದರು.

ನಮ್ಮ ಸದಸ್ಯರನ್ನು ಅಮಾನತು ಮಾಡಿರುವುದರಿಂದ ಸದನವನ್ನು ಬಹಿಷ್ಕರಿಸುತ್ತೇವೆ‌. ಈ ಪ್ರಕರಣವನ್ನು ಜಿಲ್ಲಾ ಮಟ್ಟಕ್ಕೆ ತೆಗೆದುಕೊಂಡು ಹೋಗಿ ಹೋರಾಟ ಮಾಡುತ್ತೇವೆ ಎಂದು ಹೇಳಿದರು

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...