ಹಾಸನ | ಬಿಜೆಪಿ ಸರ್ಕಾರ ಧರ್ಮವನ್ನು ಮುಂದೆ ತಂದು ಕಾರ್ಮಿಕರ ನಡುವೆ ಒಡೆದಾಳುವ ನೀತಿ ಅನುಸರಿಸುತ್ತಿದೆ: ಸಿಐಟಿಯು ಕೆ ಹೇಮಲತಾ

Date:

ಒಗ್ಗಟ್ಟಾಗುವ ಕಾರ್ಮಿಕರನ್ನು ಚದುರಿಸುವ ಕೆಲಸ ಮಾಡುತ್ತಿದೆ. ಆರ್‌ಎಸ್‌ಎಸ್‌ನ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಬಿಜೆಪಿ ಸರ್ಕಾರ ಧರ್ಮವನ್ನು ಮುಂದೆ ತಂದು ಕಾರ್ಮಿಕರ ನಡುವೆ ಒಡೆದಾಳುವ ನೀತಿಯನ್ನು ಅನುಸರಿಸುತ್ತಿದೆ ಎಂದು ಸಿಐಟಿಯು ರಾಷ್ಟ್ರೀಯ ಅಧ್ಯಕ್ಷೆ ಕೆ ಹೇಮಲತಾ ಹೇಳಿದರು.

ಹಾಸನ ನಗರದಲ್ಲಿ ನಡೆದ ಸಿಐಟಿಯು 16ನೇ ರಾಜ್ಯ ಸಮ್ಮೇಳನದ ಮೂರನೇ ದಿನದ ಬಹಿರಂಗ ಸಭೆಯಲ್ಲಿ ಮಾತನಾಡಿದರು.

ಅಂಗನವಾಡಿ, ಕಾರ್ಮಿಕರು, ಆಶಾ ಕಾರ್ಯಕರ್ತೆಯರು, ಬೀಡಿಕಾರ್ಮಿಕರು ಸೇರಿದಂತೆ ಸ್ವಚ್ಛತೆ ಕಾರ್ಮಿಕರ ವೇತನದ ಹಕ್ಕು, ಸಮಯದ ಹಕ್ಕುಗಳನ್ನು ಕಿತ್ತುಕೊಳ್ಳಲಾಗಿದೆ. ಎಲ್ಲ ಕಾರ್ಮಿಕರ ಬವಣೆಗಳನ್ನು ಚರ್ಚಿಸಲಾಗಿದೆ. ಇದರ ಪರಿಹಾರಕ್ಕೆ ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದನ್ನು ಕಂಡುಕೊಳ್ಳಬೇಕು ಎನ್ನುವ ಚಿಂತನೆಯನ್ನು ನಡೆಸಿದ್ದೇವೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮೂರು ದಿನಗಳ ಕಾಲ ನಿರಂತರ ಚರ್ಚೆ ಮಾಡಿ, ಕಾರ್ಮಿಕ ವರ್ಗದ ಮೇಲೆ, ದುಡಿಯುವ ಜನರ ಮೇಲೆ ನಡೆಯುತ್ತಿರುವ ದಬ್ಬಾಳಿಕೆಯನ್ನು ತಡೆಗಟ್ಟಲು, ಸ್ಥಿತಿ ಗತಿಯನ್ನು ಕುರಿತು ಒಟ್ಟು ಕಾರ್ಮಿಕ ವರ್ಗದ ಅನುಭವಗಳನ್ನು ತಿಳಿದುಕೊಂಡಿದ್ದು, ನಾವು ವರದಿಯನ್ನು ಅಂಗೀಕಾರ ಮಾಡಿಕೊಂಡಿದ್ದೇವೆ” ಎಂದು ಹೇಳಿದರು.

ಸಿಐಟಿಯು ಬಹಿರಂಗ ಸಭೆ 1

“ಇಡೀ ರಾಜ್ಯಗಳು ಸೇರಿದಂತೆ ದೇಶಾದ್ಯಂತ ಕಾರ್ಮಿಕ ವರ್ಗದಲ್ಲಿ ಐಕ್ಯತೆಯನ್ನು ಮೂಡಿಸಬೇಕು. ಜನರನ್ನು ಒಗ್ಗೂಡಿಸಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅನುಸರಿಸುತ್ತಿರುವ ಕಾರ್ಮಿಕ ವಿರೋಧಿ ನೀತಿಗಳ ಬಗ್ಗೆ ಜಾಗೃತಿ ಮೂಡಿಸಬೇಕು” ಎಂದು ಹೇಳಿದರು.

“ಈ ಸಿಐಟಿಯು ಸಮ್ಮೇಳನ ವಿಶಾಖಪಟ್ಟಣಂನಲ್ಲಿ ನಡೆಯುತ್ತಿರುವ ಅಖಿಲ ಭಾರತ ಸಮ್ಮೇಳನಕ್ಕೆ ಪೂರ್ವಭಾವಿಯಾಗಿದೆ. ಇಂತಹ ಹೋರಾಟಗಳಲ್ಲಿ ರೈತ ಕಾರ್ಮಿಕರ ವಿರೋಧಿ ನೀತಿಗಳನ್ನು ಖಂಡಿಸಲಾಗುವುದು. ಅಖಿಲ ಭಾರತ ಸಮ್ಮೇಳನಕ್ಕೆ ಹೋಗುವಷ್ಟರಲ್ಲಿ ಕಟ್ಟಡ ಕಾರ್ಮಿಕರು, ಅಸಂಘಟಿತ ಕಾರ್ಮಿಕರು ಸೇರಿದಂತೆ ಎಲ್ಲ ಕಾರ್ಮಿಕ ಕೂಡ ಹೋರಾಟವನ್ನು ತೀವ್ರಗೊಳಿಸಬೇಕು. ಈ ಮೂಲಕ ಸರ್ಕಾರಗಳನ್ನು ಬಡಿದೆಚ್ಚರಿಸುವ ಕೆಲಸ ಮಾಡಬೇಕು” ಎಂದು ಹೇಳಿದರು.

ಸಿಐಟಿಯು ಬಹಿರಂಗ ಸಭೆ 2

“ವಿದೇಶಗಳಲ್ಲಿರುವ ಅಮೇಜಾನ್‌ ಎನ್ನುವಂತಹ ಒಂದು ದೊಡ್ಡ ಸಂಸ್ಥೆಯ ಕಾರ್ಮಿಕರೇ ಒಗ್ಗಾಟ್ಟಾಗುತ್ತಿದ್ದಾರೆ. ಹಾಗಾಗಿ ನಮ್ಮ ದೇಶದ ಕಾರ್ಮಿಕರೂ ಕೂಡ ಒಗ್ಗಾಟ್ಟಾಗಬೇಕು. ಈ ಮೂಲಕ ತಮ್ಮ ಹಕ್ಕುಗಳನ್ನು ಗಟ್ಟಿಗೊಳಿಸಿಕೊಳ್ಳಬೇಕು” ಎಂದರು.

“ನ್ಯೂಯಾರ್ಕ್‌ನಲ್ಲಿ ಆಯ್ಕೆಯಾಗಿರುವಂತಹ ಮೇಯರ್‌ ಅವರು ಜನಪರವಾದ ನೀತಿಗಳನ್ನು ಘೋಷಣೆ ಮಾಡಿದ ಕೂಡಲೇ, ಅಧ್ಯಕ್ಷ ಡ್ರೊನಾಲ್ಡ್‌ ಟ್ರಂಪ್‌ ಆ ದೇಶಕ್ಕೆ ಸೇರಬೇಕಾದ ಅನುದಾನವನ್ನು ಕಡಿತಗೊಳಿಸುವುದಾಗಿ ಹೇಳಿದ್ದಾರೆ. ಇಂತಹ ನೀತಿಗಳನ್ನು ನಮ್ಮ ದೇಶದಲ್ಲಿಯೂ ಜಾರಿಗೊಳಿಸಲು ಹೊರಟಿದ್ದಾರೆ. ಹಲವು ಹೋರಾಟಗಳನ್ನು ಮಾಡುವ ಮೂಲಕ ವೇತನ ಹೆಚ್ಚಳ ಸೇರಿದಂತೆ ಹಲವು ಅನುಕೂಲಗಳನ್ನು ಪಡೆದಿದ್ದೇವೆ. ಆದರೂ ಕೂಡ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕಾರ್ಮಿಕರ ಹಕ್ಕುಗಳನ್ನು ಕಸಿಯುತ್ತಿವೆ. ಉದ್ಯೋಗ ನೀಡುವುದನ್ನು ನಿಲ್ಲಿಸಿವೆ. ನಿರುದ್ಯೋಗಿಗಳನ್ನಾಗಿ ಮಾಡುತ್ತಿವೆ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ದೇವರ ಹಿಪ್ಪರಗಿ | ವಿವಿಧತೆಯಲ್ಲಿ ಏಕತೆ ಸಂದೇಶ ಸಾರಿದ ಅಂತರ್ ಧಾರ್ಮಿಕ ಸಮ್ಮೇಳನ

“ಬಂಡವಾಳಶಾಹಿ ವ್ಯವಸ್ಥೆಯಲ್ಲಿ ಕಾರ್ಮಿಕರ ಹಕ್ಕುಗಳನ್ನು ಹೇಗೆ ಕಸಿಯಲಾಗುತ್ತಿದೆ ಎಂಬುದನ್ನು ನಾವೆಲ್ಲರೂ ಕಂಡುಕೊಂಡಿದ್ದೇವೆ. ಇಂತಹ ಕಾರ್ಮಿಕ ವರ್ಗವನ್ನು ಒಡೆದಾಳುವ ನೀತಿಯನ್ನು ಕೇಂದ್ರ ಬಿಜೆಪಿ ಸರ್ಕಾರ ನಡೆಸುತ್ತಿದೆ. ದಲಿತರು, ಮಹಿಳೆಯರು, ಅಲ್ಪಸಂಖ್ಯಾತರ ಮೇಲಿನ ದಾಳಿಗಳನ್ನು ಹತ್ತಿಕ್ಕುವಂತಹ ಕೆಲವು ನಿರ್ಣಯಗಳನ್ನು ಅಂಗೀಕರಿಸಿದ್ದೇವೆ. ಜತೆಗೆ ನಮ್ಮ ನೆರೆಯ ರಾಜ್ಯವಾದ ಕೇರಳದಲ್ಲಿ ಎಡಪಂಥೀಯ ಸರ್ಕಾರ ಆಡಳಿತದಲ್ಲಿದ್ದು, ಅಲ್ಲಿಯ ನೀತಿಗಳನ್ನು ದೇಶಾದ್ಯಂತ ಜಾರಿಗೊಳಿಸಬೇಕು” ಎಂದು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...