ಹಾಸನ | ಬಾಡೂಟ ವಶಕ್ಕೆ ಪಡೆದು ರಸ್ತೆಗೆ ಬಿಸಾಡಿದ ಎಫ್‌ಎಸ್‌ಟಿ ತಂಡ: ಚೆಲ್ಲಿದ ಊಟವನ್ನೇ ತಿಂದ ಜನರು

Date:

ಕಾಂಗ್ರೆಸ್ ಅಭ್ಯರ್ಥಿ ಪ್ರಚಾರಕ್ಕೆ ಬರುವ ಹಿನ್ನೆಲೆ, ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಕೋಡಿಹಳ್ಳಿ ಗ್ರಾಮದಲ್ಲಿ ಭರ್ಜರಿ ಬಾಡೂಟ ಏರ್ಪಡಿಸಲಾಗಿತ್ತು. ಈ ಬಗ್ಗೆ ಮಾಹಿತಿ ಪಡೆದ ಫ್ಲೈಯಿಂಗ್ ಸ್ಕ್ವಾಡ್ ತಂಡ ದಾಳಿ ನಡೆಸಿದ್ದು, ಆಹಾರವನ್ನು ವಶಕ್ಕೆ ಪಡೆದುಕೊಂಡಿದೆ. ಆದರೆ, ವಶಕ್ಕೆ ಪಡೆದ ಆಹಾರವನ್ನ ರಸ್ತೆಗೆ ಚೆಲ್ಲಿದೆ. ರಸ್ತೆಗೆ ಚೆಲ್ಲಿದ್ದ ಆಹಾರವನ್ನೇ ಕೆಲವರು ತಿಂದ ಘಟನೆ ನಡೆದಿದೆ.

ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್‌ ಪಟೇಲ್ ಕೋಡಿಹಳ್ಳಿ ಗ್ರಾಮಕ್ಕೆ ಚುನಾವಣೆ ಪ್ರಚಾರಕ್ಕೆ ಆಗಮಿಸುತ್ತಿದ್ದರು. ಇವರು ಬರುವ ಹಿನ್ನೆಲೆ, ಪ್ರಚಾರ ಸಭೆಗೆ ಬರುವ ಜನರಿಗಾಗಿ ಕಾಂಗ್ರೆಸ್‌ ಮುಖಂಡರು ಭರ್ಜರಿ ಬಾಡೂಟ ಮಾಡಿಸಿದ್ದರು. ಈ ವಿಚಾರ ತಿಳಿದ ಎಫ್‍ಎಸ್‍ಟಿ ತಂಡ ಗ್ರಾಮಕ್ಕೆ ಭೇಟಿ ನೀಡಿ ದಾಳಿ ನಡೆಸಿದೆ.

ಅಲ್ಲದೇ, ಪರಿಶೀಲನೆ ನಡೆಸಿದಾಗ ಬಾಡೂಟ ವ್ಯವಸ್ಥೆ ಮಾಡಿರುವುದು ಬೆಳಕಿಗೆ ಬಂದಿದೆ. ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆ ಬಾಡೂಟ ವಶಕ್ಕೆ ಪಡೆದುಕೊಂಡು ನಂತರ ಬಾಡೂಟವನ್ನು ರಸ್ತೆಗೆ ಸುರಿದು ನಾಶಪಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಳಿಕ ಘಟನೆ ಸಂಬಂಧ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಗ್ರಾಮದ ಓರ್ವ ಕಾಂಗ್ರೆಸ್ ಮುಖಂಡನ ವಿರುದ್ಧ ದೂರು ದಾಖಲಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ | ಇಬ್ಬರು ಶಂಕಿತರನ್ನು ಪಶ್ಚಿಮ ಬಂಗಾಳದ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದ ಎನ್​ಐಎ

ಹುಟ್ಟುಹಬ್ಬದ ಅಂಗವಾಗಿ ನಾನ್‍ವೆಜ್ ಊಟ ಮಾಡಿಸಲಾಗಿತ್ತು ಎಂದು ಗ್ರಾಮಸ್ಥರು ಹೇಳುತ್ತಿದ್ದು, ವೀಡಿಯೋ ಮಾಡಿ ಮಾಜಿ ಸಚಿವ ಎಚ್.ಡಿ.ರೇವಣ್ಣ ಹಾಗೂ ಪೊಲೀಸರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಫ್ಲೈಯಿಂಗ್ ಸ್ಕ್ವಾಡ್ ಬಾಡೂಟ ವಶಕ್ಕೆ ಪಡೆದು ಬಳಿಕ ರಸ್ತೆಯ ಬದಿ ಚೆಲ್ಲಿ ಹೋಗಿದ್ದರು. ಆದರೆ, ನಾನ್‌ವೆಜ್ ಚೆಲ್ಲಿದ ಸ್ಥಳಕ್ಕೆ ಹೋಗಿರುವ ಗ್ರಾಮಸ್ಥರು ರಸ್ತೆಗೆ ಚೆಲ್ಲಿದ ಬಾಡೂಟವನ್ನೇ ತಟ್ಟೆಗೆ ಹಾಕಿಕೊಂಡು ತಿಂದಿದ್ದಾರೆ. ಇನ್ನೂ ಕೆಲವರು ನೇರವಾಗಿ ಅಲ್ಲಿಯೇ ನೆಲದ ಮೇಲೆ ಬಿದ್ದ ಅನ್ನ ಬಾಡೂಟ ಸವಿದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...