ಪೆನ್‌ಡ್ರೈವ್ ಪ್ರಕರಣ| ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು

Date:

ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್‌ ಪಕ್ಷದಿಂದ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.

ನೂರಾರು ಮಹಿಳೆಯರ ಮೇಲೆ ಪ್ರಜ್ವಲ್ ರೇವಣ್ಣ ದೌರ್ಜನ್ಯ ಎಸಗಿದ್ದಾರೆ ಎನ್ನಲಾದ ವಿಡಿಯೋಗಳು ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ. ಪಕ್ಷದ ಘನತೆ ಮತ್ತು ಗೌರವಗಳಿಗೆ ಹಾಗೂ ಮುಖಂಡತ್ವಕ್ಕೆ ಸಾಕಷ್ಟು ಧಕ್ಕೆ ಉಂಟಾಗಿರುತ್ತದೆ ಎಂದು ಜೆಡಿಎಸ್‌ ಹೇಳಿದೆ.

ಇದನ್ನು ಓದಿದ್ದೀರಾ?  ಪೆನ್‌ಡ್ರೈವ್‌ ಕೇಸು| ಮಹತ್ವದ ತಿರುವು: ಬಿಜೆಪಿ ನಾಯಕನ ವಿರುದ್ಧ ಎಚ್‌ಡಿಕೆ ಆರೋಪ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಮಾನತು ಆದೇಶ ಹೊರಡಿಸಿರುವ ಜೆಡಿಎಸ್‌ ಮಹಾಕಾರ್ಯದರ್ಶಿ ಕೆ.ಆರ್ ಶಿವಕುಮಾರ್, “ಮಹಿಳೆಯರ ಮೇಲೆ ದೌರ್ಜನ್ಯ ಎಸಲಾಗಿದೆ ಎಂದು ಹೇಳಲಾಗಿರುವ ಚಿತ್ರಗಳು ಮತ್ತು ವಿಡಿಯೋಗಳ ಬಗ್ಗೆ ತನಿಖೆ ನಡೆಸಲು ರಾಜ್ಯ ಕಾಂಗ್ರೆಸ್ ಸರ್ಕಾರ ಎಸ್‌ಐಟಿ ತಂಡವನ್ನು ರಚಿಸಿದ್ದು, ಈ ತಂಡವು ಈಗಾಗಲೇ ಕಾರ್ಯ ಆರಂಭಿಸಿದೆ. ಈ ಕಾರಣದಿಂದಾಗಿ ಜನತಾದಳ (ಜಾತ್ಯತೀತ) ಪಕ್ಷದ ಸಂವಿಧಾನ ಮತ್ತು ನಿಯಮಾವಳಿಗಳ ಅಡಿಯಲ್ಲಿ ಹಾಸನ ಲೋಕಸಭಾ ಕ್ಷೇತ್ರದ ಸದಸ್ಯರಾದ ಪ್ರಜ್ವಲ್ ರೇವಣ್ಣರವರನ್ನು ತತ್‌ಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದಿಂದ ಅಮಾನತುಗೊಳಿಸಲಾಗಿದೆ” ಎಂದು ತಿಳಿಸಿದ್ದಾರೆ.

ಇನ್ನು ಸೋಮವಾರ ಸುದ್ದಿ ಸಂಸ್ಥೆ ಎಎನ್‌ಐ ಜೊತೆ ಮಾತನಾಡಿದ ಎಚ್‌ ಡಿ ಕುಮಾರಸ್ವಾಮಿ “ಚುನಾವಣೆಗೂ ಮುನ್ನ ಬಿಜೆಪಿ ನಾಯಕರೊಬ್ಬರು ಸೇರಿದಂತೆ ವಿರೋಧ ಪಕ್ಷದ ನಾಯಕರು ಹಾಸನದಲ್ಲಿ ತಾವು ಗೆಲ್ಲಲು ಸಾಧ್ಯವಿಲ್ಲ ಎಂದು ತಿಳಿದ ಬಳಿಕ ಪೆನ್‌ಡ್ರೈವ್‌ ಅನ್ನು ಹಂಚಿದ್ದಾರೆ” ಎಂಬ ಗಂಭೀರ ಆರೋಪ ಮಾಡಿದ್ದಾರೆ. ಕುಮಾರಸ್ವಾಮಿಯವರು ರಾಷ್ಟ್ರೀಯ ಸುದ್ದಿಸಂಸ್ಥೆಗೆ ನೀಡಿರುವ ಈ ಹೇಳಿಕೆಯಿಂದ ಬಿಜೆಪಿ ಜೊತೆಗಿನ ಮೈತ್ರಿಯಲ್ಲಿ ಬಿರುಕು ಉಂಟಾಗುವ ಸಾಧ್ಯತೆ ಕಂಡು ಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...