ಹಾಸನ | ಎಲ್ಲಿ ದ್ವಂದ್ವ ವಾದ ಇರುವುದಿಲ್ಲವೋ ಅಲ್ಲಿ ಪ್ರಗತಿ ಸಾಧ್ಯವಿಲ್ಲ: ಟಿಯುಸಿಸಿ ಜಿ ಆರ್ ಶಿವಶಂಕರ್

Date:

‌ದ್ವಂದ್ವ ವಾದದ ಬಗ್ಗೆ ವಿಶ್ವಾಸವಿಟ್ಟಿರುವ ಜನ ನಾವು. ಎಲ್ಲಿ ದ್ವಂಧ್ವವಾದ ಇರುವುದಿಲ್ಲ, ಅಲ್ಲಿ ಪ್ರಗತಿ ಸಾಧ್ಯವಿಲ್ಲ. ಆದರೆ ಆ ದ್ವಂದ್ವ ವಾದವನ್ನು ಯಾವ ರೀತಿಯಲ್ಲಿ ಕೊಂಡೊಯ್ಯಬೇಕು ಎಂಬುದನ್ನು ಅರಿಯಬೇಕು ಎಂದು ಟಿಯುಸಿಸಿ ರಾಷ್ಟ್ರೀಯ ಅಧ್ಯಕ್ಷ ಜಿ ಆರ್ ಶಿವಶಂಕರ್ ಹೇಳಿದರು.

ಹಾಸನದಲ್ಲಿ 13, 14, 15 ಒಟ್ಟು ಮೂರು ದಿನಗಳ ಕಾಲ ಸಿಐಟಿಯು ವತಿಯಿಂದ 16ನೇ ರಾಜ್ಯ ಸಮ್ಮೇಳನ ನಡೆಯುತ್ತಿದ್ದು, ಇಂದು ಮೊದಲ ದಿನದ ಕಾರ್ಯಕ್ರಮದಲ್ಲಿ ಮಾತನಾಡಿದರು.

“ದ್ವಂದ್ವ ವಾದವನ್ನು ಒಟ್ಟಿಗೆ ಕೊಂಡೊಯ್ಯುವುದಕ್ಕೆ ನಾನಾ ರೀತಿಯ ಭಿನ್ನಾಭಿಪ್ರಾಯವಿದೆ. ಆದರೆ ಕಾಲಕಾಲಕ್ಕೆ ವಿಷಯಗಳನ್ನು ಮಂಡಿಸಬೇಕು. ಉದಾಹರಣೆಗೆ ಅಮೆರಿಕದಲ್ಲಿ ನ್ಯೂಯಾರ್ಕ್‌ನ ಮೇಯರ್‌ ಆದರು. ಹಾಗೆಯೇ ಈ ವ್ಯವಸ್ಥೆಯಲ್ಲಿ ಆಶಾಭಾವನೆ ಇನ್ನೂ ಉಳಿದಿದೆ” ಎಂದು ಆಶಾಭಾವ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಮ್ಮ ಸೈದ್ಧಾಂತಿಕ ವಿಚಾರಧಾರೆಗಳನ್ನು ಕಾಲಕಾಲಕ್ಕೆ ಮಾರ್ಪಾಟು ಮಾಡಿ, ಮುಂದೆ ಕೊಂಡೊಯ್ಯುವ ವ್ಯವಸ್ಥೆ ಮಾಡುವಲ್ಲಿ ಎಡವಿದ್ದೇವೆ. ಈ ದೇಶದ ಎಲ್ಲ ಕ್ಷೇತ್ರಗಳೂ ಇವತ್ತು ಅಸಂಘಟಿತ ವ್ಯವಸ್ಥೆಯಾಗಿದೆ. ಸಂಘಟಿತ ವ್ಯವಸ್ಥೆಗಳು ಕಣ್ಮರೆಯಾಗುತ್ತಿವೆ” ಎಂದು ಕಳವಳ ವ್ಯಕ್ತಪಡಿಸಿದರು.

“ಬೆಂಗಳೂರು ನಗರವೆಂದರೆ ಸಾರ್ಜನಿಕ ಉದ್ದಿಮೆಗಳ ಒಂದು ದೊಡ್ಡ ನಗರವಾಗಿತ್ತು. ಇವತ್ತು ಅವೆಲ್ಲವೂ ಮುಚ್ಚಿವೆ. ಇದಕ್ಕೆ ಟ್ರೇಡ್‌ ಯೂನಿಯನ್‌ ಮೂವ್‌ಮೆಂಟ್‌ ತಪ್ಪಾ? ವ್ಯವಸ್ಥೆ ವಿರುದ್ಧ ಹೋರಾಡುವುದರಲ್ಲಿ ನಾವು ಫೇಲ್ಯೂರ್‌ ಆಗಿದ್ದೇವಾ? ಈ ವ್ಯವಸ್ಥೆ ಯಾಕೆ ಹೀಗಾಗುತ್ತಿದೆ ಎಂಬ ವಿಷಯಗಳನ್ನು ಕ್ರೋಢೀಕರಣ ಮಾಡುವ ಒಂದು ವ್ಯವಸ್ಥೆಯನ್ನು ನಾವು ಮಾಡಿಕೊಂಡಿಲ್ಲ” ಎಂದು ಹೇಳಿದರು.

“ಈ ಹಿಂದೆ ಆರ್‌ಎಸ್‌ಎಸ್‌ ಬಗ್ಗೆ ತಿಳಿದುಕೊಳ್ಳುವ ಅಗತ್ಯವಿರಲ್ಲಿ ಎಂದುಕೊಂಡಿದ್ದೆವು. ಪ್ರಚಲಿತದಲ್ಲಿ ಬೇಡವೆಂದರೂ ಕಾರ್ಮಿಕ ಸಂಘಟನೆಗಳು ಆರ್‌ಎಸ್‌ಎಸ್‌ ಅಂದ್ರೆ ಏನು? ಎಂಬುದನ್ನು ಚರ್ಚಿಸಲೇಬೇಕಾಗಿದೆ. ಆಗಿನ ಕಾಲದಲ್ಲಿ ಅದು ಕೇವಲ ಬ್ರಾಹ್ಮಣರ ಒಂದು ಗುಂಪು ಇರಬಹುದೇನೋ ಅಂದುಕೊಂಡಿದ್ದೆವು. ಎಸ್‌ ಆರ್‌ ಭಟ್‌ ಆಗಲೇ ಆರ್‌ಎಸ್‌ಎಸ್‌ ಅಂದ್ರೆ ಏನು? ಎಂಬ ಒಂದು ಪುಸ್ತಕ ಬರೆದಿದ್ದರು. ಆರ್‌ಎಸ್‌ಎಸ್‌ ಬಗ್ಗೆ ಎಲ್ಲವನ್ನೂ ಹೇಳುತ್ತಿದ್ದರು” ಎಂದರು.

ಸಿಐಟಿಯು ಕೂಡ ದೇಶದಲ್ಲಿ ಕಾರ್ಮಿಕರ ಪರವಾಗಿ ಹೋರಾಟ ಮಾಡುತ್ತಿರುವಂತಹ ಒಂದು ಬಹುದೊಡ್ಡ ಸಂಘಟನೆಯಾಗಿರುವುದರಿಂದ ಟಿಯುಸಿಸಿ ಕೂಡ ಬೆಂಬಲವಾಗಿ ನಿಂತಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಹಾಸನ | ಐಕ್ಯತೆ ಕಾಪಾಡದೇ ಹೋದರೆ, ಪ್ರಗತಿಪರ ಚಳವಳಿಗಳಿಗೆ ಹಿನ್ನಡೆಯಾಗುತ್ತದೆ: ಎಐಟಿಯುಸಿ ಅಮ್ಜದ್‌

ಪ್ಲಾಂಟೇಶನ್ ಕಾರ್ಮಿಕರು, ಅಂಗನವಾಡಿ ನೌಕರರು, ಗ್ರಾಮ ಪಂಚಾಯಿತಿ ನೌಕರರು, ಫ್ಯಾಕ್ಟರಿ ಕಾರ್ಮಿಕರು, ಬಿಸಿಯೂಟ ಕಾರ್ಮಿಕರು, ಗುತ್ತಿಗೆ ಹಾಗೂ ಹೊರಗುತ್ತಿಗೆ ಕಾರ್ಮಿಕರು ಸೇರಿದಂತೆ ಅಸಂಘಟಿತ ಕಾರ್ಮಿಕರ ನೇತೃತ್ವ ವಹಿಸಿರುವ ಮುಖ್ಯ ಅತಿಥಿಗಳಾದ ಸಿಐಟಿಯು ರಾಷ್ಟ್ರೀಯ ಅಧ್ಯಕ್ಷೆ ಹೇಮಲತಾ, ರಾಷ್ಟ್ರೀಯ ಕಾರ್ಯದರ್ಶಿ ಕೆ ಎನ್‌ ಉಮೇಶ್‌, ರಾಜ್ಯ ಉಪಾಧ್ಯಕ್ಷ ವಿಜೆಕೆ ನಾಯರ್‌, ರಾಜ್ಯ ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸುಂದರಂ, ಅಧ್ಯಕ್ಷತೆ ರಾಜ್ಯ ಅಧ್ಯಕ್ಷೆ ಎಸ್‌ ವರಲಕ್ಷ್ಮಿ, ಸ್ವಾಗತ ಎಚ್‌ ಎನ್‌ ಪರಮಶಿವಯ್ಯ ಸೇರಿದಂತೆ ಇತರ ಮುಖಂಡರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...