ಹಾವೇರಿ | ಭೀಕರ ರಸ್ತೆ ಅಪಘಾತ; ಸಂಭವನೀಯ ಕಾರಣಗಳನ್ನು ತಿಳಿಸಿದ ಅಲೋಕ್ ಕುಮಾರ್

Date:

ಪುನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಜೂನ್ 28ರಂದು ಬೆಳಗಿನ ಜಾವ 4ಗಂಟೆಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಹಿಳೆಯರು, ಮಕ್ಕಳು ಸೇರಿದಂತೆ 13 ಜನ ಸಾವನ್ನಪ್ಪಿದ್ದಾರೆ. ಈ ಬಗ್ಗೆ ರಾಜ್ಯ ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ ಹೆಚ್ಚುವರಿ ಪೊಲೀಸ್​ ಮಹಾನಿರ್ದೇಶಕ ಅಲೋಕ್​ ಕುಮಾರ್ ಟ್ವೀಟ್ ಮಾಡಿ ಮೃತಪಟ್ಟ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ.

ಅಪಘಾತಕ್ಕೆ ಸಂಭವನೀಯ ಕಾರಣಗಳನ್ನು ತಿಳಿಸಿದ ಅವರು, “ತಪ್ಪಾದ ಸ್ಥಳದಲ್ಲಿ ಲಾರಿಯನ್ನು ಪಾರ್ಕಿಂಗ್ ಮಾಡಿರಬಹುದು, ತಪ್ಪಾಗಿ ಓವರ್‌ಟೇಕಿಂಗ್ ಮಾಡಿರಬಹುದು. ಅತಿಯಾದ ವೇಗ ಅಥವಾ ಚಾಲಕ ಆಯಾಸಗೊಂಡಿದ್ದರಿಂದ ಅಪಘಾತ ಸಂಭವಿಸಿರಬಹುದು” ಎಂದು ಅಂದಾಜಿಸಿದ್ದಾರೆ.

ಅಲ್ಲದೆ, ಅಪಘಾತ ಸ್ಥಳಕ್ಕೆ ಭೇಟಿ ನೀಡುವುದಾಗಿ ಮಾಹಿತಿ ನೀಡಿದ್ದಾರೆ. ಜಾಗರೂಕತೆಯಿಂದ ವಾಹನ ಚಲಾಯಿಸಿ, ಜೀವ ರಕ್ಷಿಸಿ ಎಂದು ಬರೆದುಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭೀಕರ ಅಪಘಾತ

ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 13 ಜನರು ಸಾವನ್ನಪ್ಪಿದ್ದಾರೆ.

ಮೃತರನ್ನು ಸುಭದ್ರಾ ಬಾಯಿ (65), ಪರಶುರಾಮ (45), ಭಾಗ್ಯ (40), ನಾಗೇಶ್ (50), ವಿಶಾಲಾಕ್ಷಿ (40), ಅರ್ಪಿತಾ (18), ಪುಣ್ಯ (50), ಮಂಜುಳಾ ಬಾಯಿ (62), ಆದರ್ಶ (23), ಮಾನಸ (24), ರೂಪಾ (40), ಮಂಜುಳಾ (50) ಎಂದು ಗುರುತಿಸಲಾಗಿದೆ. ಇನ್ನೂ ಅರ್ಪಿತಾ, ಅರುಣಾ, ಅನ್ನಪೂರ್ಣ ಎನ್ನುವ ಮೂವರು ಗಾಯಾಳುಗಳ ಚಿಕಿತ್ಸೆ ಪಡೆಯುತ್ತಿದ್ದಾರೆ.

ಶಿವಮೂಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಎಮ್ಮೆಹಟ್ಟಿ ಗ್ರಾಮದ ನಿವಾಸಿಗಳಾಗಿದ್ದ ನಾಗೇಶ್​ ಮತ್ತು ವಿಶಾಲಕ್ಷಿ ದಂಪತಿ ಪುತ್ರ ಆದರ್ಶ್ ಹೊಸ ಟಿಟಿ ವಾಹನ ಖರೀದಿ ಮಾಡಿದ್ದರು. ಹಾಗಾಗಿ, ಹೊಸ ಟಿಟಿ ವಾಹನಕ್ಕೆ ಪೂಜೆ ಮಾಡಿಸಲು ನಾಗೇಶ್​, ವಿಶಾಲಾಕ್ಷಿ ​ಮತ್ತು ಪುತ್ರ ಆದರ್ಶ್​ ಸೇರಿಂದತೆ 17 ಜನರು ಜೂ.24ರಂದು ಮಧ್ಯಾಹ್ನ 12 ಗಂಟೆಗೆ ಶಿವಮೊಗ್ಗದಿಂದ ಹೊರಟಿದ್ದಾರೆ.

ಮಹಾರಾಷ್ಟ್ರ ತಿವಾರಿ ಲಕ್ಷ್ಮೀ ದೇವಸ್ಥಾನ ತಲುಪಿ, ಅಲ್ಲಿ ವಾಹನ ಪೂಜೆ ಮಾಡಿಸಿದ್ದಾರೆ. ನಂತರ ತುಳಜಾಭವಾನಿ ದೇವಸ್ಥಾನಕ್ಕೆ ತೆರಳಿ ದೇವಿಯ ದರ್ಶನ ಪಡೆದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಹಾವೇರಿ | ಭೀಕರ ಅಪಘಾತ; ಮೃತರ ಕುಟುಂಬಕ್ಕೆ ತಲಾ ₹2 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಕಲಬುರಗಿ ಜಿಲ್ಲೆಯ ಚಿಂಚೋಳಿಯ ಮಾಯಮ್ಮ ದೇವಸ್ಥಾನಕ್ಕೆ ಹೋಗಿ, ಅಲ್ಲಿಂದ ಬೆಳಗಾವಿ ಜಿಲ್ಲೆ ಸವದತ್ತಿ ರೇಣುಕಾ ಯಲ್ಲಮ್ಮನ ದರ್ಶನ ಪಡೆದು ಮರಳಿ ಊರಿಗೆ ತೆರಳುವಾಗ ನಸುಕಿನ ಜಾವ 4 ಗಂಟೆಗೆ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿಯ ಪುನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಿಂತಿದ್ದ ಲಾರಿಗೆ ಟಿಟಿ ವಾಹನ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ನಾಗೇಶ್​, ವಿಶಾಲಾಕ್ಷಿ ಮತ್ತು ಆದರ್ಶ ಸೇರಿದಂತೆ 13 ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಗೊಂಡ ನಾಲ್ವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವರಾದ ಪ್ರಲ್ಹಾದ್​​ ಜೋಶಿ, ಹೆಚ್​ಡಿ ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸಂತಾಪ ಸೂಚಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...