ವಾಯುಭಾರ ಕುಸಿತದಿಂದಾಗಿ ಸೋಮವಾರ ಮುಂಜಾನೆಯಿಂದಲೇ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆಯಾಗಿದೆ. ಇಂದಿನಿಂದ ಮೇ 22ರವರೆಗೂ ಅಲ್ಲಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದ್ದು ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.
ಮೇ 21ರ ಸುಮಾರಿಗೆ ಕರ್ನಾಟಕ ಕರಾವಳಿಯ ಪೂರ್ವ- ಮಧ್ಯ ಅರೇಬಿಯನ್ ಸಮುದ್ರದ ಮೇಲೆ ಮೇಲ್ಮುಖ ವಾಯು ಚಂಡಮಾರುತವು ರೂಪುಗೊಳ್ಳುವ ಸಾಧ್ಯತೆಯಿದೆ. ಇದರಿಂದಾಗಿ ಮೇ 22ರ ಸುಮಾರಿಗೆ ಅದೇ ಪ್ರದೇಶದ ಮೇಲೆ ಕಡಿಮೆ ಒತ್ತಡದ ಪ್ರದೇಶವು ರೂಪುಗೊಳ್ಳು ಸಾಧ್ಯತೆಯಿದೆ. ನಂತರ ಅದು ಉತ್ತರಕ್ಕೆ ಚಲಿಸುವ ಮತ್ತು ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಇದನ್ನು ಓದಿದ್ದೀರಾ? ರಾಜ್ಯದಲ್ಲಿ ಮಳೆ ಅಬ್ಬರ; ಕರಾವಳಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್
ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆಯಾಗಲಿದೆ ಎಂದು ಈಗಾಗಲೇ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿತ್ತು. ಸೋಮವಾರ ಮುಂಜಾನೆಯೇ ಹಲವು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯಾಗಿದೆ. ಬೆಂಗಳೂರು, ದಕ್ಷಿಣ ಕನ್ನಡ, ಉಡುಪಿ, ರಾಮನಗರ ಮೊದಲಾದ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸೋಮವಾರ ಬೆಳಿಗ್ಗೆಯೇ ಮಳೆ ಶುರುವಾಗಿದೆ.
ಮುಂದಿನ 7 ದಿನಗಳ #ಹವಾಮಾನ #ಮುನ್ಸೂಚನೆ ಮತ್ತು #ಎಚ್ಚರಿಕೆಗಳು: (ಮೂಲ: IMD)
— Karnataka State Natural Disaster Monitoring Centre (@KarnatakaSNDMC) May 19, 2025
ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು, ಮಿಂಚು ಸಹಿತ ಕರಾವಳಿ ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆ, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ, ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮೇ 19 ರಿಂದ 22 ರವರೆಗೆ ಹಾಗೂ pic.twitter.com/OHLsQQ5j6d
ಬೆಂಗಳೂರಿನಲ್ಲಿ ಮಳೆ ಅವಾಂತರ
ಬೆಂಗಳೂರಿನಲ್ಲಿ ರಾಜಾಜಿನಗರ, ಜಯನಗರ, ವಿಜಯನಗರ, ಜೆಪಿ ನಗರ, ಆರ್ ಆರ್ ನಗರ, ನಾಗರಬಾವಿ, ಪೀಣ್ಯ, ಹೆಬ್ಬಾಳ, ಮಲ್ಲೇಶ್ವರಂ,ಮೆಜೆಸ್ಟಿಕ್, ಯಶವಂತಪುರ ಕಡೆಗಳಲ್ಲಿ ಭಾರೀ ಗಾಳಿ ಮಳೆಯಾಗಿದೆ. ಅಲ್ಲಲ್ಲಿ ರಸ್ತೆಗಳು ಜಲಾವೃತವಾಗಿದೆ.
ಇನ್ನು ನಿನ್ನೆ ಸಂಜೆ ಸುರಿದ ಮಳೆಗೆ ಎಂಜಿ ರಸ್ತೆ, ವಿಧಾನಸೌಧ, ಶಾಂತಿನಗರ, ಕೆಆರ್ ಮಾರುಕಟ್ಟೆಯಲ್ಲಿ ರಸ್ತೆಗಳಲ್ಲಿ ಸಂಚಾರಕ್ಕೆ ಅಡೆತಡೆಯಾಗಿದೆ. ಅನಿಲ್ಕುಂಬ್ಳೆ ವೃತ್ತ, ಕೆಆರ್ ಮಾರುಕಟ್ಟೆ ಮೇಲ್ಸೇತುವೆ ಕೆಳಭಾಗದಲ್ಲಿ ನೀರು ತುಂಬಿದೆ. ಇಪ್ಪತ್ತು ಅಧಿಕ ಮರಗಳು, ಅಲ್ಲಲ್ಲಿ ಕೊಂಬೆಗಳು ಧರಶಾಹಿಯಾಗಿದೆ.
ಇದನ್ನು ಓದಿದ್ದೀರಾ? ರಾಜ್ಯದಲ್ಲಿ ಮಳೆ ಅಬ್ಬರ: 23 ಜಿಲ್ಲೆಗಳಲ್ಲಿ ಇನ್ನೂ 4 ದಿನ ಮಳೆ ಆರ್ಭಟ
ಇಂದು, ನಾಳೆಯ ಹವಾಮಾನ ವರದಿ
ಇಂದು ಮತ್ತು ನಾಳೆ(ಮೇ 18, 19) ಕರಾವಳಿ ಕರ್ನಾಟಕದ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಬಿರುಗಾಳಿಯೂ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಒಳನಾಡಿನ ಒಂದೆರಡು ಸ್ಥಳಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ಬೀದರ್, ಹಾವೇರಿ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಒಂದೆರಡು ಸ್ಥಳಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ಉಲ್ಲೇಖಿಸಲಾಗಿದೆ.
ದಕ್ಷಿಣ ಒಳನಾಡಿನ ಒಂದೆರಡು ಸ್ಥಳಗಳಲ್ಲಿ ಬಿರುಗಾಳಿ, ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ವಿಜಯನಗರ ಜಿಲ್ಲೆಗಳಲ್ಲಿ ಕೆಲವೆಡೆ ಭಾರೀ ಮಳೆ, ಕೆಲವೆಡೆ ಹಗುರದಿಂದ ಸಾಧಾರಣ ಗುಡುಗು ಸಹಿತ, ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.





