ಬೆಂಗಳೂರು | ಮಳೆಯಿಂದ ಉಂಟಾಗುವ ಸಮಸ್ಯೆ ಬಗೆಹರಿಸಲು ಸಹಾಯವಾಣಿ ತೆರೆದ ಬಿಬಿಎಂಪಿ, ಬೆಸ್ಕಾಂ

Date:

ಕಳೆದ ಎರಡು ಮೂರು ದಿನಗಳಿಂದ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಳೆಯಾಗುತ್ತಿದೆ. ಮಳೆ ಸುರಿದ ಸಮಯದಲ್ಲಿ ನಗರದ ಹಲವಾರು ಕಡೆ ರಸ್ತೆಗಳು ಜಲಾವೃತಗೊಂಡರೇ, ಇನ್ನು ಕೆಲವಡೆ ಮರಗಳು ಧರೆಗುರುಳಿವೆ. ಈ ಹಿನ್ನೆಲೆಯಲ್ಲಿ ಮಳೆಯಿಂದ ಉಂಟಾಗುವ ಸಮಸ್ಯೆಗಳನ್ನು ಪರಿಹಾರ ಮಾಡಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಿಪತ್ತು ನಿರ್ವಹಣಾ ಸಹಾಯವಾಣಿ ತೆರೆದಿದೆ.

ಬೆಂಗಳೂರಿನ 8 ವಲಯಗಳಲ್ಲಿ ಪ್ರತ್ಯೇಕವಾಗಿ ಕಂಟ್ರೋಲ್ ರೂಂ ಓಪನ್ ಮಾಡಿದ್ದು, ಕರೆ ಮಾಡಿದ ತಕ್ಷಣ ಪಾಲಿಕೆ ಸಿಬ್ಬಂದಿ ಘಟನಾ ಸ್ಥಳಕ್ಕೆ ತೆರಳಿ ಸಮಸ್ಯೆ ಬಗೆಹರಿಸುವ ಕೆಲಸ ಮಾಡುತ್ತಿದ್ದಾರೆ. 24/7 ಕಾರ್ಯನಿರ್ವಹಿಸುವ ಉಚಿತ ಸಹಾಯವಾಣಿ ಸಂಖ್ಯೆ 1533 ಜತೆಗೆ ಮಹಾನಗರದ ನಾನಾ ಎಂಟು ವಲಯಗಳಲ್ಲಿ ಪ್ರತ್ಯೇಕವಾಗಿ ಕಂಟ್ರೋಲ್ ರೂಮ್‌ಗಳನ್ನು ಸ್ಥಾಪಿಸಿದೆ.

ವಲಯವಾರು ಕಂಟ್ರೋಲ್ ರೂಮ್‌ಗಳ ಸಂಪರ್ಕ ಸಂಖ್ಯೆ ವಿವರ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೊಮ್ಮನಹಳ್ಳಿ ವಲಯ: 080-25732447,25735642,9480685707

ದಾಸರಹಳ್ಳಿ ವಲಯ: 080-28394909,9480685709

ಪೂರ್ವ ವಲಯ: 080-22975803,9480685702

ಮಹದೇವಪುರ ವಲಯ: 080-28512300,9480685706

ರಾಜರಾಜೇಶ್ವರಿ ನಗರ ವಲಯ: 080-28601851,9480685708

ದಕ್ಷಿಣ ವಲಯ: 9480685704,8026566362,8022975703

ಪಶ್ಚಿಮ ವಲಯ: 080-23463366,23561692,9480685703

ಯಲಹಂಕ ವಲಯ: 080-23636671,22975936,9480685705

ಮಳೆ ಸಂದರ್ಭದಲ್ಲಿ ವಲಯವಾರು ಸಮಸ್ಯೆ ಬಗೆಹರಿಸಲು ಬಿಬಿಎಂಪಿ ಈ ಕ್ರಮಕೈಗೊಂಡಿದ್ದು, ನಾಗರಿಕರು ತುರ್ತು ಸಂದರ್ಭದಲ್ಲಿ ತಮ್ಮ ವ್ಯಾಪ್ತಿಯ ಕಂಟ್ರೋಲ್ ರೂಂಗೆ ಸಂಪರ್ಕಿಸಬಹುದಾಗಿದೆ.

ಈ ಸುದ್ದಿ ಓದಿದ್ದೀರಾ? ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮೂವರು ಎನ್‌ಐಎ ವಶಕ್ಕೆ

ವಿದ್ಯುತ್‌ ಸಮಸ್ಯೆ ತ್ವರಿತವಾಗಿ ಪರಿಹರಿಸಲು ಬೆಸ್ಕಾಂ ಸಹಾಯವಾಣಿ

ಮಳೆಗಾಲದಲ್ಲಿ ಗ್ರಾಹಕರ ವಿದ್ಯುತ್‌ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಲು ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳ ಗ್ರಾಹಕರಿಗೆ ವಾಟ್ಸ್‌ಆಪ್‌ ಸಂಖ್ಯೆಗಳನ್ನು ನೀಡಲಾಗಿದೆ. ವಾಟ್ಸ್‌ಆಪ್‌ ಸಂಖ್ಯೆಗಳಿಗೆ ಗ್ರಾಹಕರು ಸಂದೇಶ ಹಾಗೂ ಛಾಯಚಿತ್ರಗಳನ್ನು ತಮ್ಮ ವಿಳಾಸದೊಂದಿಗೆ ಕಳುಹಿಸಿ ತಮ್ಮ ವಿದ್ಯುತ್‌ ಸಂಬಂಧಿತ ಸಮಸ್ಯೆಗಳಿಗೆ ಪರಿಹಾರ ಪಡೆಯಬಹುದಾಗಿದೆ.

ಜತೆಗೆ ಎಸ್‌ಎಂಎಸ್ ಕಳುಹಿಸಲು ಬೆಸ್ಕಾಂ ಬೆಂಗಳೂರು ಮಹಾನಗರ ವ್ಯಾಪ್ತಿಯ ಗ್ರಾಹಕರಿಗೆ 12 ಮೊಬೈಲ್‌ ಸಂಖ್ಯೆಗಳನ್ನು ಕೂಡ ಒದಗಿಸಲಾಗಿದೆ.

ಬೆಸ್ಕಾಂ ವ್ಯಾಪ್ತಿಯಲ್ಲಿ ಕಳೆದ ಮೂರು ದಿನಗಳಿಂದ ಸುರಿದ ಗಾಳಿ-ಮಳೆಗೆ ವಿದ್ಯುತ್‌ ಕಂಬಗಳು ಮುರಿದು, ವಿದ್ಯುತ್‌ ಮೂಲ ಸೌಕರ್ಯಗಳು ಹಾನಿಗೊಳಗಾಗಿವೆ. ಹೀಗಾಗಿ, ಬೆಸ್ಕಾಂ ಸಹಾಯವಾಣಿ 1912ಗೆ ದೂರುಗಳು ಹರಿದು ಬಂದಿದ್ದು, ಕರೆಗಳ ಒತ್ತಡದಿಂದಾಗಿ ಗ್ರಾಹಕರಿಗೆ 1912 ಸಂಪರ್ಕ ಸಾಧ್ಯವಾಗುತ್ತಿಲ್ಲ. ಹೀಗಾಗಿ, ಗ್ರಾಹಕರ ವಿದ್ಯುತ್‌ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಲು ಗ್ರಾಹಕರಿಗೆ ವಾಟ್ಸ್‌ ಆಪ್‌ ಸಂಖ್ಯೆಗಳನ್ನು ನೀಡಲಾಗಿದೆ.

ಜಿಲ್ಲಾವಾರು ವಾಟ್ಸ್‌ ಆಪ್‌ ಸಂಖ್ಯೆಗಳು

ಬೆಂಗಳೂರು ಪೂರ್ವ- 8277884013, ಬೆಂಗಳೂರು ಪಶ್ಚಿಮ- 8277884012, ಬೆಂಗಳೂರು ಉತ್ತರ- 8277884014, ಬೆಂಗಳೂರು ದಕ್ಷಿಣ- 8277884011. ಕೋಲಾರ- 8277884015, ಚಿಕ್ಕಬಳ್ಳಾಪುರ- 8277884016, ಬೆಂಗಳೂರು ಗ್ರಾಮಾಂತರ- 8277884017, ರಾಮನಗರ- 8277884018, ತುಮಕೂರು- 8277884019, ಚಿತ್ರದುರ್ಗ- 8277884020 ಹಾಗೂ ದಾವಣಗೆರೆ- 8277884021. ಸುರಕ್ಷತೆ ಸಂಬಂಧಿಸಿದ ದೂರುಗಳಿಗೆ ವಾಟ್ಸ್‌ ಆಪ್‌ ಸಂಖ್ಯೆ – 9483191212, 9483191222 ಮತ್ತು ಬೆಸ್ಕಾಂ ಸಾಮಾನ್ಯ ವಾಟ್ಸ್‌ ಆಪ್‌ ಸಂಖ್ಯೆ-  9449844640.

ಮೊಬೈಲ್‌ ಸಂಖ್ಯೆಗಳು- ಕೇವಲ ಎಸ್‌ಎಂಎಸ್‌ ಗಳಿಗೆ ಮಾತ್ರ

9480816108, 9480816109, 9480816110, 9480816111, 9480816112, 9480816113, 9480816114, 9480816115, 9480816116, 9480816117, 9480816118 ಮತ್ತು 9480816119.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...