ಅಬುಧಾಬಿಗೆ ತೆರಳಲು ಡಾ.ಬಿ.ಆರ್.ಶೆಟ್ಟಿಗೆ ಹೈಕೋರ್ಟ್ ಅನುಮತಿ

Date:

ಉಡುಪಿ ಮೂಲದ ದುಬೈ ನಿವಾಸಿ ಉದ್ಯಮಿ ಹಾಗೂ ಎನ್‌ಎಂಸಿ ಹೆಲ್ತ್​​ ಸಂಸ್ಥಾಪಕ ಡಾ.ಬಿ.ಆರ್.ಶೆಟ್ಟಿ ಚಿಕಿತ್ಸೆಗೆ ಅಬುಧಾಬಿಗೆ ತೆರಳಲು ಹೈಕೋರ್ಟ್ ಅನುಮತಿ ನೀಡಿದೆ.

ಬಿ ಆರ್ ಶೆಟ್ಟಿ ಅವರು ನಾನಾ ಬ್ಯಾಂಕ್​ಗಳಿಂದ ಸುಮಾರು ₹2,800 ಕೋಟಿ ಸಾಲ ಪಡೆದಿದ್ದರು. ಪಡೆದಿದ್ದ ಸಾಲವನ್ನು ತೀರಿಸದೇ ಇರುವ ಹಿನ್ನೆಲೆ, ಬ್ಯಾಂಕುಗಳ ಮನವಿ ಮೇರೆಗೆ ಉದ್ಯಮಿ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿಯಾಗಿತ್ತು. ಹೀಗಾಗಿ, ಅವರು ವಿದೇಶಕ್ಕೆ ತೆರಳಲು ಅನುಮತಿ ಇರಲಿಲ್ಲ.

ಅಬುಧಾಬಿಗೆ ಪ್ರಯಾಣಿಸಲು ಶೆಟ್ಟಿಗೆ ಅನುಮತಿ ನೀಡಿರಲಿಲ್ಲ. ಇದನ್ನು ಪ್ರಶ್ನಿಸಿ ಶೆಟ್ಟಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ವಕೀಲ ಬಿ.ವಿ.ಆಚಾರ್ಯ, ಪ್ರಭುಲಿಂಗ್ ನಾವದಗಿ ಶೆಟ್ಟಿ ಪರವಾಗಿ ನ್ಯಾಯಾಲಯದ ಮುಂದೆ ವಾದ ಮಂಡಿಸಿದ್ದರು. ನ್ಯಾ.ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಹೈಕೋರ್ಟ್ ಪೀಠ ಅರ್ಜಿ ವಿಚಾರಣೆ ನಡೆಸಿ ಆದೇಶಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

”ಶೆಟ್ಟಿ ಅವರು ಭಾರತೀಯ ಪ್ರಜೆ. ಅವರಿಗೆ 80 ವರ್ಷ ವಯಸ್ಸಾಗಿದೆ. ಡಾ.ಬಿ.ಆರ್‌.ಶೆಟ್ಟಿ ವಿರುದ್ಧ ಯಾವುದೇ ಕ್ರಿಮಿನಲ್ ಪ್ರಕರಣಗಳಿಲ್ಲ. ನ್ಯಾಯಾಲಯದ ಆದೇಶದಂತೆ, ಸಾಲ ವಸೂಲಾತಿ ಪ್ರಕ್ರಿಯೆ ಜಾರಿಯಲ್ಲಿದೆ. ಹೀಗಾಗಿ, ಅವರು ಚಿಕಿತ್ಸೆ ಪಡೆಯಲು ಅಬುಧಾಬಿಗೆ ತೆರಳಲು ಅನುಮತಿ ನೀಡಬೇಕು” ಎಂದು ನ್ಯಾಯಾಲಯದ ಮುಂದೆ ವಾದ ಮಂಡಿಸಿದ್ದರು.

ವಾದ ಆಲಿಸಿದ ನ್ಯಾಯಪೀಠ, ”ಡಾ.ಬಿ.ಆರ್.ಶೆಟ್ಟಿ ಅವರ ವಿರುದ್ಧ ಬೇರೆ ಪ್ರಕರಣಗಳಿಲ್ಲದಿದ್ದರೆ ಅವರು ಚಿಕಿತ್ಸೆಗೆ ಅಬುಧಾಬಿಗೆ ತೆರಳಬಹುದು. ಆದರೆ, ಶೆಟ್ಟಿ ಅವರು ಕೋರ್ಟ್​ಗೆ ಪ್ರಮಾಣಪತ್ರ ಸಲ್ಲಿಸಬೇಕು. ₹1 ಕೋಟಿ ಶ್ಯೂರಿಟಿ ನೀಡಬೇಕು. ಅಲ್ಲದೇ, ಪ್ರಪಂಚದ ಯಾವುದೇ ಭಾಗದ ಆಸ್ತಿಗಳ ಪರಭಾರೆ ಮಾಡಬಾರದು. ಎಲ್ಒಸಿ ನೀಡುವ ಅಧಿಕಾರ ಹಸ್ತಾಂತರಿಸುವಂತಿಲ್ಲ” ಎಂದು ಪೀಠ ಆದೇಶಿಸಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | 2025ಕ್ಕೆ ಕಾಳೇನ ಅಗ್ರಹಾರದಿಂದ ನಾಗವಾರದವರೆಗಿನ ನಮ್ಮ ಮೆಟ್ರೋ ಕಾಮಗಾರಿ ಪೂರ್ಣ

ಯಾರಿದು ಬಿ.ಆರ್‌.ಶೆಟ್ಟಿ? ಏನಿದು ಪ್ರಕರಣ?

ಬಾವಗುತ್ತು ರಘುರಾಮ ಶೆಟ್ಟಿ ಅವರು ಉಡುಪಿಯ ಕಾಪುವಿನಲ್ಲಿ 1942ರಲ್ಲಿ ಹುಟ್ಟಿದರು. ಫಾರ್ಮಾಸಿಸ್ಟ್ ಆದ ಅವರು ಉಡುಪಿಯಲ್ಲಿ ಫಾರ್ಮಾ ಕಂಪನಿಯೊಂದರ ಡಿಸ್ಟ್ರಿಬ್ಯುಟರ್ ಆಗಿದ್ದರು. ತಮ್ಮ ಸೋದರಿಯ ಮದುವೆಗೆ ಬ್ಯಾಂಕ್ ಸಾಲ ಮಾಡಿದ್ದರು. ಸಾಲ ತೀರಿಸಲು ದಾರಿ ಕಾಣದಾಗ ಶೆಟ್ಟಿ ಅವರು ಕೇವಲ 8 ಡಾಲರ್ ಅಂದರೆ, ಆಗಿನ ಲೆಕ್ಕಾಚಾರದಲ್ಲಿ ಸುಮಾರು ₹56 ರೂ.ಗಳನ್ನು ಇಟ್ಟುಕೊಂಡು ಅಬುಧಾಬಿ ನಗರಕ್ಕೆ ಕಾಲಿಟ್ಟು, ಕೆಲವೇ ದಿನಗಳಲ್ಲಿ ಬಿಲಿಯನೇರ್ ಆದರು.

ನಂತರ ಶೆಟ್ಟಿ ಅವರ ಸಾಮ್ರಾಜ್ಯ ಪತನವಾಯಿತು. ಸಾಲದ ಸುಳಿಯಲ್ಲಿ ಸಿಲುಕಿದ್ದ ಶೆಟ್ಟಿಯವರು 2 ಬ್ಯಾಂಕ್​ಗಳಿಂದ ಸುಮಾರು ₹2,800 ಕೋಟಿ ಸಾಲ ಪಡೆದಿದ್ದರು. ಪಡೆದ ಸಾಲ ತೀರಿಸದ ಕಾರಣಕ್ಕೆ ಉದ್ಯಮಿ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿಯಾಗಿತ್ತು. ಹೀಗಾಗಿ, ಅಬುಧಾಬಿಗೆ ಪ್ರಯಾಣಿಸಲು ಶೆಟ್ಟಿಗೆ ಅನುಮತಿ ನೀಡಿರಲಿಲ್ಲ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...