ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ವಿರುದ್ಧದ ಎಫ್ಐಆರ್ ರದ್ದು ಪಡಿಸಲು ಹೈಕೋರ್ಟ್ ನಕಾರ

Date:

ಶಿಡ್ಲಘಟ್ಟ ಪೌರಾಯುಕ್ತೆ ಜಿ.ಅಮೃತಾ ಗೌಡ ಹಾಗೂ ಸ್ಥಳೀಯ ಜೆಡಿಎಸ್ ಶಾಸಕ ಬಿ.ಎನ್.ರವಿಕುಮಾ‌ರ್ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಬೆದರಿಕೆಯೊಡ್ಡಿದ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಬಿ.ವಿ.ರಾಜೀವ್ ಗೌಡ (46) ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ.

ಸಚಿವ ಜಮೀರ್ ಆಹ್ಮದ್ ಖಾನ್ ಅವರು ಪುತ್ರ ಝೈದ್ ಖಾನ್ ಅಭಿನಯದ ‘ಕಲ್ಟ್’ ಚಿತ್ರದ ಬ್ಯಾನರ್ ಮತ್ತು ಕಟೌಟ್ ಗಳನ್ನು ತೆರವುಗೊಳಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ಶಿಡ್ಲಘಟ್ಟ ಟೌನ್‌ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎರಡು ಪ್ರತ್ಯೇಕ ಎಫ್‌ಐಆರ್‌ಗಳನ್ನು ರದ್ದು ಕೋರಿ ಕಾಂಗ್ರೆಸ್ ಮುಖಂಡ ಬಿ.ವಿ. ರಾಜೀವ್ ಗೌಡ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ಪ್ರಕಟಿಸಿತು.

“ಅಧಿಕೃತವಾಗಿ ಕರ್ತವ್ಯ ನಿರ್ವಹಿಸುವ ಸರ್ಕಾರಿ ಅಧಿಕಾರಿಯೊಬ್ಬರ, ಅದರಲ್ಲೂ ಮಹಿಳೆಗೆ ಧಮಕಿ ಹಾಕಿ ಅವರ ಕರ್ತವ್ಯ ತಡೆಯೊಡ್ಡಿ ಭೀತಿ ಸೃಷ್ಟಿಸಿರುವ ರಾಜೀವ್ ಗೌಡ ಮೇಲ್ನೋಟಕ್ಕೆ ಅಪರಾಧಿಕ ಕೃತ್ಯ ಎಸಗಿರುವುದು ತೋರಿಸುತ್ತದೆ” ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿ : ಶಿಡ್ಲಘಟ್ಟ | ವಿದ್ಯುತ್‌ ಕಡಿತಗೊಳಿಸಿ ಕೇಂದ್ರದ ವಿರುದ್ಧ ಮುಸಲ್ಮಾನರ ಆಕ್ರೋಶ

“ಸರ್ಕಾರಿ ಅಧಿಕಾರಿ ತಮ್ಮ ಕರ್ತವ್ಯವನ್ನು ನಿರ್ವಹಿಸುವಾಗ, ಯಾರೊಬ್ಬರು ಅವರನ್ನು ಬೆದರಿಸಲು ಅಥವಾ ನಿಂದಿಸಲು ಸಾಧ್ಯವೇ ಇಲ್ಲ. ಅಮೃತಾ ಗೌಡ ಅವರು ತಮ್ಮ ಕರ್ತವ್ಯವನ್ನು ಶ್ರದ್ಧೆಯಿಂದ ನಿರ್ವಹಿಸಿದ್ದಾರೆ. ಆದರೆ, ರಾಜೀವ್ ಗೌಡ ದೂರವಾಣಿ ಮೂಲಕ ಅಮೃತಾ ಜೊತೆ ನಡೆಸಿರುವ ಸಂಭಾಷಣೆ ಗಮನಿಸಿದರೆ, ಈತ ಮಹಿಳೆ ಮತ್ತು ಸಾರ್ವಜನಿಕ ಸೇವಕರ ಘನತೆಗೆ ಧಕ್ಕೆ ತರುವ ರೀತಿಯಲ್ಲಿ ಮಾತನಾಡಿರುವುದು ಸುಲಭವಾಗಿ ತಿಳಿಯುತ್ತದೆ” ಎಂದು ತೀರ್ಪಿನಲ್ಲಿ ಉಲ್ಲೇಖಿಸಲಾಸಗಿದೆ.

“ರಾಜೀವ್ ಗೌಡ ಬಳಸಿರುವ ಪದಗಳು ಮತ್ತು ಅವರ ಸ್ವಭಾವ, ಭಾರತೀಯ ನ್ಯಾಯ ಸಂಹಿತಾ-2023ರ ಕಲಂ79 ಮತ್ತು ಭಾರತೀಯ ದಂಡ ಸಂಹಿತೆಯ-1860ರ ಕಲಂ 509ರ ಅಪರಾಧಿಕ ದಂಡನೆಗಳ ವ್ಯಾಪ್ತಿಯಲ್ಲಿನ ತನಿಖೆಗೆ ಅನುಗುಣವಾಗಿದೆ. ಘಟನೆ ದಂಡದ ಪರಿಣಾಮವನ್ನು ಎದುರಿಸಲು ಯೋಗ್ಯವಾಗಿದೆ” ಎಂದು ಹೇಳಿದೆ.

ಏನಿದು ಪ್ರಕರಣ?

ಸಾರ್ವಜನಿಕರ ದೂರಿನ ಮೇರೆಗೆ ‘ಕಲ್ಟ್’ ಚಲನಚಿತ್ರದ ಬ್ಯಾನರ್ ಮತ್ತು ಕಟೌಟ್ ತೆಗೆಸಿದ್ದಕ್ಕೆ ರಾಜೀವ್ ಗೌಡ ಅವರು ಅವಾಚ್ಯ ಶಬ್ದಗಳಿಂದ ನಿಂದಿಸಿ, ಬೆದರಿಕೆಯೊಡ್ಡಿದ್ದಾರೆ ಎಂದು ಆರೋಪಿಸಿ ಪೌರಾಯುಕ್ತ ಅಮೃತಾ ಅವರು 2026ರ ಜನವರಿ 14ರಂದು ಶಿಡ್ಲಘಟ್ಟ ನಗರ ಠಾಣೆಗೆ ದೂರು ನೀಡಿದ್ದರು.

ಅಮೃತಾ ಅವರ ಜೊತೆ ದೂರವಾಣಿಯಲ್ಲಿ ಮಾತನಾಡುವಾಗ ಜೆಡಿಎಸ್ ಶಾಸಕರಾದ ಬಿ.ಎನ್. ರವಿಕುಮಾ‌ರ್ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಗಲಭೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಜೆಡಿಎಸ್‌ ಶಿಡ್ಲಘಟ್ಟ ತಾಲೂಕು ಉಪಾಧ್ಯಕ್ಷ ಎನ್.ಸಿ. ಶ್ರೀನಿವಾಸ್ ಗೌಡ ಸಹ ದೂರು ನೀಡಿದ್ದರು. ಈ ಎರಡೂ ದೂರುಗಳ ಆಧಾರದಲ್ಲಿ ರಾಜೀವ್ ಗೌಡ ಅವರ ವಿರುದ್ಧ ಶಿಡ್ಲಘಟ್ಟ ಟೌನ್ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಎಫ್‌ಐಆರ್‌ಗಳು ದಾಖಲಾಗಿದ್ದವು.

ಇದನ್ನು ಓದಿ : ಶಿಡ್ಲಘಟ್ಟ | ಪೌರಾಯುಕ್ತೆಗೆ ಬೆದರಿಕೆ: ಕಾಂಗ್ರೆಸ್ ಮುಖಂಡನ ಬಂಧನಕ್ಕೆ ಪೌರಕಾರ್ಮಿಕರ ಆಗ್ರಹ

ಇದರಿಂದ, ಎಫ್‌ಐಆರ್ ರದ್ದು ಕೋರಿ ರಾಜೀವ್ ಗೌಡ ಹೈಕೋರ್ಟ್ ಮೆಟ್ಟಿಲೇರಿದ್ದರು. ಮಂಗಳವಾರ (ಜನವರಿ 20) ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ಮಹಿಳೆ ಎಂದರೆ ಗೌರವವೇ ಇಲ್ಲವೇ? ನಾಲಿಗೆ ಶುದ್ಧವಿರಬೇಕು. ನಾಲಿಗೆಯೇ ಎಲ್ಲವನ್ನೂ ಯಾವಾಗಲೂ ನಾಶ ಮಾಡಿದೆ. ಈಗ ನೀವು ಕ್ಷಮೆ ಕೋರಿದರೂ ಬಿರುಕು ಹಾಗೆ ಉಳಿಯಲಿದೆ ಎನ್ನುವುದು ನಿಮ್ಮ ಗಮನಕ್ಕೆ ಇರಬೇಕು ಎಂದು ರಾಜೀವ್ ಗೌಡ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿತ್ತಲ್ಲದೆ, ಅರ್ಜಿ ಕುರಿತ ತೀರ್ಪನ್ನು ಕಾಯ್ದಿರಿಸಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲ್ಯಾಣ ಕರ್ನಾಟಕ | 3 ವರ್ಷ, 5,100 ಪ್ರಕರಣ; ಮಹಿಳೆಯರ ನಾಪತ್ತೆ ಹಿಂದೆ ಕಳ್ಳಸಾಗಣೆಯ ಕರಿನೆರಳು?!

ನಾಪತ್ತೆಯಾದ ಪ್ರತಿ ಜೀವವೂ ಮರಳಿ ತನ್ನ ಮನೆ ಸೇರುವಂತಾಗಲು ಮತ್ತು ಮುಂದಿನ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಉದ್ದಿಮೆ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ರಸರೆಕ್ಷನ್: ಇಂದ್ರಿಯಗಳ ಮೂಲಕ ಒಂದು ಶತಮಾನದ ಸಿನೆಮಾ ಪಯಣ ಬಿಡಿಸಿಡುವ ಚಿತ್ರ

'ರಸರೆಕ್ಷನ್' ಸಿನಿಮಾ ಅಂತಿಮವಾಗಿ ಹೇಳುವುದೇನೆಂದರೆ ಬದುಕು ಎಷ್ಟೇ ದೀರ್ಘವಾಗಿದ್ದರೂ, ಕನಸುಗಳಿಲ್ಲದಿದ್ದರೆ ಅದು...

ಹಾಸನ ಮಣ್ಣಿನ ಹೆಣ್ಣು ದನಿಗಳು | ಉಡುಪು ಉದ್ಯಮದಲ್ಲಿ ಜಿಲ್ಲೆಯ ಕುಶಲೆಯರು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...