ಬೇಡಿಕೆ ಈಡೇರಿಸದಿದ್ದರೆ ಪುರುಷ ಪ್ರಯಾಣಿಕರಿಗೂ ಶಕ್ತಿ ಯೋಜನೆಯ ಉಚಿತ ಟಿಕೆಟ್‌ ಹಂಚಿ ಪ್ರತಿಭಟನೆ: ಸರಕಾರಕ್ಕೆ ಎಚ್ಚರಿಕೆ

Date:

ಕರ್ನಾಟಕ ರಾಜ್ಯದ ಸಾರಿಗೆ ನಿಗಮಗಳ ನೌಕರರ ವೇತನ ಪರಿಷ್ಕರಣೆ ಮತ್ತು ಇತರ ಬೇಡಿಕೆಗಳ ಈಡೇರಿಕೆಗೆ ರಾಜ್ಯ ಸರಕಾರ ಯಾವುದಾದರೂ ಒಂದು ತೀರ್ಮಾನ ಮಾಡದಿದ್ದರೆ ಜೂನ್‌ 1ರಂದು ರಾಜ್ಯದ ಎಲ್ಲಾ ಪುರುಷ ಪ್ರಯಾಣಿಕರಿಗೂ ಶಕ್ತಿ ಯೋಜನೆಯ ಉಚಿತ ಟಿಕೆಟ್‌ ವಿತರಿಸಲಾಗುವುದು ಎಂದು ಕೆ.ಎಸ್‌.ಆರ್‌.ಟಿ.ಸಿ. ಮತ್ತು ಬಿ.ಎಂ.ಟಿ.ಸಿ. ಯುನೈಟೆಡ್‌ ಎಂಪ್ಲಾಯೀಸ್‌ ಯೂನಿಯನ್‌ ಸಂಘದ ಅಧ್ಯಕ್ಷ ಕೆ.ಆರ್.ವಿಜಯ ಕುಮಾರ್ ಹೇಳಿದ್ದಾರೆ.

ಬೆಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಸಾರಿಗೆ ಸಂಸ್ಥೆಗಳ ಹಲವು ಕಾರ್ಮಿಕ ಸಂಘಟನೆಗಳು ಎರಡು ಬಣಗಳಾಗಿ ಎರಡು ಪ್ರತ್ಯೇಕ ಬೇಡಿಕೆಗಳನ್ನು ಸರಕಾರದ ಮುಂದಿಟ್ಟು ನಮ್ಮ ಬೇಡಿಕೆಯನ್ನೇ ಮಾನ್ಯ ಮಾಡಬೇಕೆಂದು ಹಠಕ್ಕೆ ಬಿದ್ದಿವೆ. ಇದರಿಂದಾಗಿ ಸರಕಾರ, ಸಾರಿಗೆ ನೌಕರರ ಬೇಡಿಕೆಗಳನ್ನು ಈಡೇರಿಸಲು ಯಾವುದೇ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗದೆ ಕೈಚೆಲ್ಲಿ ಕುಳಿತುಕೊಂಡಿದೆ ಎಂದು ಅವರು ತಿಳಿಸಿದರು.

ನಮ್ಮ ಬೇಡಿಕೆಗಳನ್ನೇ ಈಡೇರಿಸಬೇಕು ಎಂದು ಕಾರ್ಮಿಕ ಸಂಘಟನೆಗಳು ಹಠಕ್ಕೆ ಬಿದ್ದಿರುವುದು ಮತ್ತು ಸಾರಿಗೆ ನೌಕರರ ಬೇಡಿಕೆಗಳನ್ನು ಈಡೇರಿಸಲು ಯಾವುದೇ ನಿರ್ಧಾರ ತೆಗೆದುಕೊಳ್ಳದೆ ಸರಕಾರ ಕೈಚೆಲ್ಲಿ ಕುಳಿತುಕೊಂಡಿರುವುದರಿಂದ ನೌಕರರಿಗೆ ಅನ್ಯಾಯವಾಗುತ್ತಿದೆ. ಇನ್ನೂ ದಿನ ಮುಂದೂಡದೆ ಎರಡೂ ಬಣಗಳ ಬೇಡಿಕೆಯ ಬಗ್ಗೆ ಮುಖ್ಯಮಂತ್ರಿ, ಸಾರಿಗೆ ಸಚಿವರು ಹಾಗೂ ಸಂಬಧಿಸಿದ ಅಧಿಕಾರಿಗಳು ಒಟ್ಟು ಸೇರಿ ಯಾವುದಾದರೂ ಒಂದು ತೀರ್ಮಾನ ತೆಗೆದುಕೊಳ್ಳಬೇಕು. ಯಾವುದೇ ತೀರ್ಮಾನ ತೆಗೆದುಕೊಂಡರೂ ಅದಕ್ಕೆ ನಾವು ಬದ್ಧರಾಗಿದ್ದೇವೆ. ತೀರ್ಮಾನದಿಂದ ಯಾವುದಾದರೂ ಲೋಪ ಕಂಡ ಬಂದರೆ ಬಳಿಕ ಸಂಬಂಧಿಸಿದವರನ್ನು ಭೇಟಿ ಮಾಡಿ ಚರ್ಚೆ ನಡೆಸುತ್ತೇವೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಾರಿಗೆ ನೌಕರರ ವೇತನ ಪರಿಷ್ಕರಣೆ ಮತ್ತು ಇತರ ಬೇಡಿಕೆಗಳ ಈಡೇರಿಕೆ ಬಗ್ಗೆ ಯಾವುದಾದರೂ ತೀರ್ಮಾನ ಮಾಡಲು ಮೇ 31ರ ವರೆಗೆ ಸರಕಾರಕ್ಕೆ ಗಡುವು ನೀಡುತ್ತಿದ್ದೇವೆ. ಇದಕ್ಕೆ ತಪ್ಪಿದಲ್ಲಿ ಜೂನ್‌ 1ರಂದು ರಾಜ್ಯದ ಎಲ್ಲಾ ಪುರುಷ ಪ್ರಯಾಣಿಕರಿಗೂ ಶಕ್ತಿ ಯೋಜನೆಯ ಉಚಿತ ಟಿಕೆಟ್‌ ಅನ್ನು ವಿತರಿಸುವ ಮೂಲಕ ಪ್ರತಿಭಟನೆ ನಡೆಸಲಿದ್ದೇವೆ ಎಂದು ಅವರು ಸರಕಾರಕ್ಕೆ ಎಚ್ಚರಿಕೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಸಿ.ರಾಜಶೇಖರ್‌, ಕಾರ್ಯಾಧ್ಯಕ್ಷ ಬಿ.ಸಿ.ಮಹೇಶ್‌, ಉಪಾಧ್ಯಕ್ಷ ಎಂ.ರಾಮು, ಕಾರ್ಯದರ್ಶಿ ಶ್ಯಾಮರಾವ್‌ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...