ಸಿದ್ದರಾಮಯ್ಯ ಸರ್ಕಾರ ಬಂದರೆ ಕಿಸಾನ್ ಸಮ್ಮಾನ್‌ ಯೋಜನೆ ಸೇರಿ ಹಲವು ಯೋಜನೆ ಬಂದ್‌: ಜೆ ಪಿ ನಡ್ಡಾ

Date:

ಕರ್ನಾಟಕದಲ್ಲಿ ಈ ಬಾರಿ ಬಿಜೆಪಿ ಸೋತರೆ ಕೇಂದ್ರ ಸರ್ಕಾರದಿಂದ ಬರುವ ಎಲ್ಲ ಯೋಜನೆಗಳು ರಾಜ್ಯಕ್ಕೆ ಬಂದ್‌ ಆಗಲಿವೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅಭಿಪ್ರಾಯ ಪಟ್ಟಿದ್ದಾರೆ.

ವಿಜಯನಗರ ಜಿಲ್ಲೆಯ ಹರಪನಹಳ್ಳಿ ಪಟ್ಟಣದ ಪ್ರವಾಸಿ ಮಂದಿರ ವೃತ್ತದಲ್ಲಿ ಭಾನುವಾರ ಬಿಜೆಪಿ ಅಭ್ಯರ್ಥಿ ಜಿ. ಕರುಣಾಕರ ರೆಡ್ಡಿ ಪರ ರೋಡ್ ಶೋ ನಡೆಸಿದ ಬಳಿಕ ಬಹಿರಂಗ ಸಭೆಯಲ್ಲಿ ಅವರು ಈ ಮಾತು ಹೇಳಿದರು.

“ಸಿದ್ದರಾಮಯ್ಯ ಸರ್ಕಾರ ಬಂದಿದ್ದೇ ಆದಲ್ಲಿ ಕಿಸಾನ್ ಸಮ್ಮಾನ್‌ ಯೋಜನೆ ಸೇರಿ ಹತ್ತು ಹಲವು ಯೋಜನೆಗಳು ರಾಜ್ಯದ ಜನರಿಗೆ ತಲುಪುವುದಿಲ್ಲ. ಹೀಗಾಗಿ ಕೇಂದ್ರ ಮತ್ತು ರಾಜ್ಯದಲ್ಲಿ ಡಬಲ್ ಎಂಜಿನ್ ಸರ್ಕಾರ ತರಲು ಬಿಜೆಪಿ ಬೆಂಬಲಿಸಿ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪರಿಶಿಷ್ಟರಿಗೆ ಒಳಮೀಸಲಾತಿಯನ್ನು ಬಿಜೆಪಿ ಸರ್ಕಾರ ಕೊಟ್ಟಿದೆ. ಪರಿಶಿಷ್ಟ ಪಂಗಡ, ಲಿಂಗಾಯತರು, ಒಕ್ಕಲಿಗರ ಮೀಸಲಾತಿಯನ್ನೂ ಹೆಚ್ಚಿಸಿದೆ. ಆದರೆ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಈಗ ಹೆಚ್ಚಿಸಿರುವ ಮೀಸಲಾತಿ ರದ್ದು ಮಾಡುತ್ತೇವೆ ಎಂದು ಹೇಳಿದೆ. ಇಂತಹವರಿಗೆ ಬುದ್ದಿ ಕಲಿಸಬೇಕು” ಎಂದು ಕರೆ ಕೊಟ್ಟರು.

“ಕಾಂಗ್ರೆಸ್‌ನವರು ತಾವು ಭ್ರಷ್ಟಾಚಾರ ಮಾಡಿ, ಮತ್ತೊಬ್ಬರ ಮೇಲೆ ಆರೋಪ ಮಾಡುವುದನ್ನು ಕೈಬಿಡಬೇಕು. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಡಿ ಕೆ ಶಿವಕುಮಾರ ಅವರೆಲ್ಲ ಭ್ರಷ್ಟಾಚಾರ ಮಾಡಿ ಬೇಲ್ ಮೇಲೆ ಹೊರಗಿದ್ದಾರೆ. ಅವರ ಮೇಲಿನ ಆರೋಪಗಳು ಸಾಬೀತಾದರೆ ಜೈಲಿಗೆ ಹೋಗುವುದು ತಪ್ಪುವುದಿಲ್ಲ” ಎಂದು ನಡ್ಡಾ ತಿಳಿಸಿದರು.

ಭಾಷಣದ ಕೊನೆಗೆ ಭಜರಂಗ ದಳ ನಿಷೇಧ ಕುರಿತು ವಿಷಯ ಪ್ರಸ್ತಾಪಿಸಿ, ʼಭಜರಂಗ ಬಲಿ ಕೀ ಜೈʼ ಎಂದು ಕೂಗಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...