ರಾಜ್ಯದಲ್ಲಿ ಸಿವಿಲ್ ಪ್ರಕ್ರಿಯಾ ಸಂಹಿತೆ ಕಾಯ್ದೆ ಜಾರಿ; ಬಡವರ ವ್ಯಾಜ್ಯ ತ್ವರಿತ ಇತ್ಯರ್ಥ

Date:

ಸಿವಿಲ್ ವ್ಯಾಜ್ಯಗಳಲ್ಲಿ ಬಡವರಿಗೆ ಇನ್ನು ಆರು ತಿಂಗಳೊಳಗೆ ನ್ಯಾಯ ಸಿಗಲಿದೆ. ಬಡವರು, ಸಣ್ಣರೈತರು, ದುರ್ಬಲ ವರ್ಗದವರು ಮತ್ತು ಆರ್ಥಿಕವಾಗಿ ಹಿಂದುಳಿದವರ ವ್ಯಾಜ್ಯಗಳನ್ನು ಆದ್ಯತೆ ಮೇರೆಗೆ ವಿಚಾರಣೆಗೆ ಕೈಗೆತ್ತಿಕೊಳ್ಳಲು ಅವಕಾಶ ಕಲ್ಪಿಸುವ ‘ಸಿವಿಲ್ ಪ್ರಕ್ರಿಯೆ ಸಂಹಿತೆ(ತಿದ್ದುಪಡಿ) ಮಸೂದೆ-2023’ಕ್ಕೆ ರಾಷ್ಟ್ರಪತಿ ಅಂಕಿತ ಹಾಕಿದ್ದು, ಸೋಮವಾರ(ಮಾರ್ಚ್ 4)ರಂದು ರಾಜ್ಯದಲ್ಲಿ ಜಾರಿಗೆ ಬಂದಿದೆ.

ಕಾನೂನು ಸಚಿವ ಎಚ್‌ ಕೆ ಪಾಟಿಲ್ ಇದನ್ನು ಖಚಿತಪಡಿಸಿದ್ದು, “ಕೆಳಹಂತದ ನ್ಯಾಯಾಲಯಗಳಿಂದ ಹಿಡಿದು ಹೈಕೋರ್ಟ್‌ವರೆಗೂ ಇದು ಅನ್ವಯವಾಗುತ್ತದೆ. ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ಬಡವರು, ಸಣ್ಣರೈತರು, ದುರ್ಬಲ ವರ್ಗದವರು ಮತ್ತು ಆರ್ಥಿಕವಾಗಿ ಹಿಂದುಳಿದವರ ವ್ಯಾಜ್ಯಗಳು 5 ರಿಂದ 10 ವರ್ಷಕ್ಕೂ ಹೆಚ್ಚು ಕಾಲದಿಂದ ಇತ್ಯರ್ಥವಾಗದೇ ಬಾಕಿ ಉಳಿದಿವೆ. ಸಕಾಲದಲ್ಲಿ ನ್ಯಾಯದಾನ ಮಾಡದೇ ತಡ ಮಾಡುವುದು ದ್ರೋಹ ಬಗೆಯುವುದಕ್ಕೆ ಸಮ ಎಂಬುದನ್ನು ಗಮನಿಸಿದ ಸರ್ಕಾರ ಈ ಕ್ರಮ ತೆಗೆದುಕೊಂಡಿದೆ” ಎಂದು ಹೇಳಿದರು.

ಸಿವಿಲ್ ಪ್ರಕ್ರಿಯಾ ಸಂಹಿತೆ ಕಾಯ್ದೆ ಪ್ರಕಾರ 6 ತಿಂಗಳ ಒಳಗೆ ನ್ಯಾಯದಾನ ಪಡೆಯಬಹುದಾದ ಫಲಾನುಭವಿಗಳು ಯಾರೆಂಬುದನ್ನು ಸ್ಪಷ್ಟ ವಿವರಣೆಯನ್ನು ಸಿವಿಲ್ ಪ್ರಕ್ರಿಯಾ ಸಂಹಿತೆ ಕಾಯ್ದೆ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
  • ಆರ್ಥಿಕವಾಗಿ ದುರ್ಬಲರು ಅಂದರೆ ಎಲ್ಲ ಮೂಲಗಳು ಸೇರಿ ವಾರ್ಷಿಕ ಆದಾಯ 3 ಲಕ್ಷ ರೂಪಾಯಿ ಮೀರಿರದ ವ್ಯಕ್ತಿ.
  • ಎರಡು ಹೆಕ್ಟೇರ್ ಒಣಬೇಸಾಯ ಭೂಮಿ ಇರುವವರು ಒಂದೂ ಕಾಲು ಹೆಕ್ಟೇರ್ ಮಳೆಯಾಶ್ರಿತ  ಜಮೀನು ಹೊಂದಿರುವವರು.
  • ನೀರಾವರಿ ಬೆಳೆ ಬೆಳೆಯಲು ಅಥವಾ ಕಬ್ಬು, ದ್ರಾಕ್ಷಿ, ತೆಂಗು, ಅಡಕೆ, ರೇಷ್ಮೆ ಬೆಳೆಯುವುದಕ್ಕಾಗಿ ಅರ್ಧ ಎಕರೆ ಭೂಮಿ ಹೊಂದಿರುವವರು.
  • ದೀರ್ಘಕಾಲಿಕ ನೀರಾವರಿ ಸೌಲಭ್ಯ ಹೊಂದಿರುವ ಅಥವಾ ವರ್ಷದಲ್ಲಿ ಒಂದಕ್ಕಿಂತ ಹೆಚ್ಚುವರಿ ನೀರಾವರಿ ಬೆಳೆ ಬೆಳೆಯುವ ಸೌಲಭ್ಯಗಳಿರುವ ಕಾಲು ಹೆಕ್ಟೇರ್ ಭೂಮಿ ಹೊಂದಿರುವವರು ಸಿವಿಲ್ ಪ್ರಕ್ರಿಯಾ ಸಂಹಿತೆ ಕಾಯ್ದೆ ಪ್ರಕಾರ 6 ತಿಂಗಳ ಒಳಗೆ ನ್ಯಾಯದಾನ ಪಡೆಯಬಹುದಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

“ಕಾನೂನು ತಜ್ಞರು, ವಕೀಲರು ಮತ್ತು ಸಂಬಂಧಿಸಿದ ಇತರ ತಜ್ಞರ ಜತೆ ಸಮಾಲೋಚನೆ ನಡೆಸಿ 2023ರ ಜುಲೈನಲ್ಲಿ ಮಸೂದೆಗೆ ತಿದ್ದುಪಡಿ ತರಲಾಯಿತು. ಆ ಬಳಿಕ ವಿಧಾನ ಮಂಡಲದ ಉಭಯ ಸದನಗಳಲ್ಲಿ ಒಪ್ಪಿಗೆ ಪಡೆದ ಮಸೂದೆಗೆ ರಾಜ್ಯಪಾಲರು ಅಂಕಿತ ಹಾಕದೇ ಅದನ್ನು ರಾಷ್ಟ್ರಪತಿಯವರಿಗೆ ಕಳುಹಿಸಿದ್ದರು. ಈ ಮಸೂದೆಗೆ ರಾಷ್ಟ್ರಪತಿಯವರು ಫೆಬ್ರವರಿಯಲ್ಲಿ ಅಂಕಿತ ಹಾಕಿದ್ದು, ಈಗ ರಾಜ್ಯಪತ್ರದಲ್ಲಿ ಅಧಿಸೂಚನೆ ಹೊರಡಿಸಲಾಗಿದೆ” ಎಂದು ಸಚಿವ ಎಚ್ ಕೆ ಪಾಟೀಲ್ ತಿಳಿಸಿದರು.

“ಕಾಯ್ದೆಯ ಅನುಷ್ಠಾನಕ್ಕೆ ಅಗತ್ಯವಿರುವ ಮಾರ್ಗಸೂಚಿಯೊಂದನ್ನು ಹೊರಡಿಸಲಾಗಿದೆ. ನ್ಯಾಯಾಲಯಗಳು ನಿತ್ಯವೂ ಪ್ರಕರಣಗಳನ್ನು ಕೈಗೆತ್ತಿಕೊಳ್ಳುವ ಸಂದರ್ಭದಲ್ಲಿ ಬಡವರು, ಸಣ್ಣರೈತರು, ದುರ್ಬಲ ವರ್ಗದವರು ಮತ್ತು ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ ಆದ್ಯತೆ ನೀಡಬೇಕಾಗುತ್ತದೆ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಗದಗ | ಮೇವಿನ ಕೊರತೆ; ಜಾನುವಾರುಗಳ ಮಾರಾಟಕ್ಕೆ ಮುಂದಾದ ರೈತರು

“ಈಗ ಹೊಸ ಕಾನೂನು ಜಾರಿಯಾದ ಕಾರಣ ನ್ಯಾಯಾಲಯಗಳ ಮೇಲೆ ಸ್ವಲ್ಪಮಟ್ಟಿಗೆ ಒತ್ತಡ ಆಗಬಹುದು. ತ್ವರಿತ ನ್ಯಾಯದಾನದ ವಿಚಾರದಲ್ಲಿ ಈ ಹೊಸ ಕ್ರಮದ ಅಗತ್ಯವಿತ್ತು. ಸಿವಿಲ್‌ ಪ್ರಕರಣಗಳ ಪೈಕಿ ಸರ್ಕಾರಕ್ಕೆ ಸಂಬಂಧಿಸಿದ್ದು ಶೇ.30 ರಿಂದ ಶೇ.40ರಷ್ಟು ಇದ್ದರೆ, ಕೈಗಾರಿಕೆಗಳು ಮತ್ತು ರಿಯಲ್‌ಎಸ್ಟೇಟ್‌ಗೆ ಸಂಬಂಧಿಸಿದ ಶೇ.25ರಷ್ಟು ಪ್ರಕರಣಗಳಿವೆ” ಎಂದು ಸಚಿವ ಎಚ್ ಕೆ ಪಾಟಿಲ್ ವಿವರಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...