ಕಾಂಗ್ರೆಸ್‌ ಸರ್ಕಾರಕ್ಕೆ ಪ್ರತಿಯಾಗಿ ಅಧಿವೇಶನದಲ್ಲಿ ನಿರ್ಣಯ ಮಂಡಿಸಿದ ಬಿಜೆಪಿ

Date:

ತೆರಿಗೆ ಅನ್ಯಾಯ ವಿಚಾರವಾಗಿ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ವಿರುದ್ಧ ಖಂಡನಾ ನಿರ್ಣಯ ಅಂಗೀಕರಿಸಿರುವುದನ್ನು ವಿರೋಧಿಸಿದ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಶುಕ್ರವಾರ ಬೆಳಿಗ್ಗೆ ಕಲಾಪ ಆರಂಭವಾಗುತ್ತಿದ್ದಂತೆ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಸಭಾಧ್ಯಕ್ಷರ ಪೀಠದ ಎದುರು ಧರಣಿ ಮುಂದುವರಿಸಿದರು.

ಹತ್ತು ನಿಮಿಷ ಕಲಾಪ ಮುಂದೂಡಿದ ಸಭಾಧ್ಯಕ್ಷ ಯು.ಟಿ. ಖಾದರ್, ತಮ್ಮ ಕಚೇರಿಯಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ಮಧ್ಯೆ ಸಂಧಾನಕ್ಕೆ ಯತ್ನಿಸಿದರು.

ಆದರೆ, ಬಿಜೆಪಿ ಸದಸ್ಯರು ಪಟ್ಟು ಸಡಿಲಿಸದ ಕಾರಣ ಸಂಧಾನ ಯತ್ನ ವಿಫಲವಾಯಿತು. ಪುನಃ ಕಲಾಪ ಆರಂಭವಾದಾಗಲೂ ವಿರೋಧ ಪಕ್ಷಗಳ ಸದಸ್ಯರು ಧರಣಿ‌ ಮುಂದುವರಿಸಿದರು. ಕೇಂದ್ರ ಸರ್ಕಾರದ ವಿರುದ್ಧದ ನಿರ್ಣಯಗಳನ್ನು ವಾಪಸ್ ಪಡೆಯುವಂತೆ ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸದನದ ನಿಯಮಗಳನ್ನ ಗಾಳಿಗೆ ತೂರಿ ರಾಜ್ಯ ಕಾಂಗ್ರೆಸ್‌ ಸರ್ಕಾರ ತಂದ ಏಕಪಕ್ಷೀಯ, ರಾಜಕೀಯ ಪ್ರೇರಿತ ನಿರ್ಣಯ ಮಂಡಿಸಿದೆ” ಎಂದು ಆರೋಪಿಸಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಆರ್‌ ಅಶೋಕ್‌ ನಿರ್ಣಯ ಮಂಡಿಸಿದ್ದಾರೆ.

ಕಳೆದ ಹತ್ತು ವರ್ಷಗಳಲ್ಲಿ ಪ್ರಧಾನಿ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಸಹಕಾರಿ ಒಕ್ಕೂಟ ವ್ಯವಸ್ಥೆಯ ಬಗ್ಗೆ ತೋರಿರುವ ಬದ್ಧತೆ, ಕರ್ನಾಟಕಕ್ಕೆ ನೀಡಿರುವ ಸಹಕಾರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಎನ್ ಡಿಎ ಮೈತ್ರಿಕೂಟದ ವತಿಯಿಂದ ಸದನದಲ್ಲಿ ನಿರ್ಣಯ ಮಂಡಿಸಿರುವ ಪ್ರತಿಯನ್ನು ಆರ್‌ ಅಶೋಕ್‌ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

“ತೆರಿಗೆ ಸಂಗ್ರಹ ಮತ್ತು ಆರ್ಥಿಕ ಬೆಳವಣಿಗೆಯಲ್ಲಿ ವಿಫಲವಾಗಿರುವ ಸಿಎಂ ಸಿದ್ದರಾಮಯ್ಯನವರು ತಮ್ಮ ತಪ್ಪುಗಳನ್ನು ಮರೆಮಾಚುವ ಉದ್ದೇಶದಿಂದ ಕೇಂದ್ರ ಸರ್ಕಾರವನ್ನ ಪದೇ ಪದೇ ದೂಷಿಸುವ ಪ್ರವೃತ್ತಿಯನ್ನು ಕೈಬಿಡಬೇಕೆಂದು ನಿರ್ಣಯದ ಮೂಲಕ ಒತ್ತಾಯ ಮಾಡಲಾಯಿತು” ಎಂದು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...