ಬೀದರ್‌ | ಅಲ್ಪಸಂಖ್ಯಾತರಿಗೆ ಪ್ರಚೋದಿಸಿ, ಬಹುಸಂಖ್ಯಾತರ ಮೇಲೆ ದಬ್ಬಾಳಿಕೆ ನಡೆಸಲು ಅವಕಾಶ ನೀಡುವುದು ಹೇಡಿತನ

Date:

ಬೀದರ್‌ ನಗರದ ಗುರುನಾನಕ ದೇವ ಕಾಲೇಜಿನಲ್ಲಿ ಯುವಕರು ಜೈಶ್ರೀರಾಮ ಹಾಡು ಹಾಕಿದಕ್ಕೆ ಮುಸ್ಲಿಂ ವಿದ್ಯಾರ್ಥಿಗಳು ವಿರೋಧಿಸಿ, ಹಿಂದು ಯುವಕರ ಮೇಲೆ ಹಲ್ಲೆ ಮಾಡಿರುವುದು ಅಕ್ಷಮ್ಯ ಅಪರಾಧವಾಗಿದೆ, ಕೂಡಲೇ ಹಲ್ಲೆ ಮಾಡಿರುವ ಎಲ್ಲರನ್ನೂ ಬಂಧಿಸಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಕೇಂದ್ರ ಸಚಿವ ಭಗವಂತ ಖೂಬಾ ಆಗ್ರಹಿಸಿದ್ದಾರೆ.

ರಾಜ್ಯದಲ್ಲಿ ಕಳೆದ ಒಂದು ವರ್ಷದಿಂದ ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತರನ್ನು ಪ್ರಚೋದಿಸಿ, ಬಹುಸಂಖ್ಯಾತರ ಮೇಲೆ ಹಲ್ಲೆ, ಕೊಲೆ, ದಬ್ಬಾಳಿಕೆ ನಡೆಸಲು ಅವಕಾಶ ನೀಡಿ ತನ್ನ ಹೇಡಿತನ ತೋರಿಸುತ್ತಿದೆ. ಬೀದರಿನ ಜಿಎನ್‌ಡಿ ಕಾಲೇಜಿನ ಘಟನೆ, ನ್ಯೂಟೌನ್ ಸಿಪಿಐ ಮೇಲೆ ರೌಡಿ ರಸೂಲ್ ಚಾಕು ಇರಿತ ಮತ್ತು ಚನ್ನಗಿರಿ ಪೋಲಿಸ್ ಸ್ಟೇಷನ್ ಮೇಲೆ ದಾಳಿಯನ್ನು ಕೇಂದ್ರ ಸಚಿವ ಖೂಬಾ ಖಂಡಿಸಿದ್ದಾರೆ.

“ಜಿಲ್ಲಾ ಉಸ್ತುವಾರಿ ಮಂತ್ರಿ ಈಶ್ವರ ಖಂಡ್ರೆ ಹಾಗೂ ಪೌರಾಡಳಿತ ಸಚಿವ ರಹೀಂ ಖಾನ್ ಅವರು ಗುರುನಾನಕ ಕಾಲೇಜಿಗೆ ತೆರಳಿ, ಹಲ್ಲೆ ಮಾಡಿರುವ ವಿದ್ಯಾರ್ಥಿಗಳಿಗೆ ರಕ್ಷಿಸುವಂತೆ ಕಾಲೇಜಿನವರಿಗೆ ತಿಳಿಸಿರುವುದು ನಾಚಿಕೆಗೇಡಿತನ ಮತ್ತು ಪಕ್ಷಪಾತ ಧೋರಣೆ ತೋರಿಸುತ್ತದೆ. ಇವರಿಗೆ ಹಿಂದೂ ಜನರು ಮತ ಹಾಕಿ ಗೆಲ್ಲಿಸಿದ್ದಕ್ಕೆ ಒಳ್ಳೆಯ ಉಪಕಾರ ಮಾಡುತ್ತಿದ್ದಾರೆ” ಎಂದು ಸಚಿವ ಖೂಬಾ ಆಕ್ರೋಶ ಹೊರಹಾಕಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಚಿವರಾದ ಈಶ್ವರ ಖಂಡ್ರೆ ಮತ್ತು ರಹೀಂ ಖಾನ್ ಒತ್ತಡಕ್ಕೆ ಮಣಿದು ಹಲ್ಲೆಗೊಳಗಾದ ಹಿಂದೂ ಯುವಕರ ಮೇಲೂ ಎಫ್‌ಐಆರ್ ಮಾಡಲಾಗಿದ್ದು, ಕೂಡಲೇ ಕೇಸ್‌ ವಾಪಸ್ ಪಡೆಯಬೇಕು. ಜಿಲ್ಲಾಡಳಿತವಾದರೂ ನ್ಯಾಯ ಕೊಡುವ ಕೆಲಸ ಮಾಡಬೇಕೆಂದು ಗುರುವಾರ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ʼಎನ್‌ಎಸ್‌ಯುಐʼ ಕುಮ್ಮಕ್ಕು :

“ಸುಮಾರು ದಿನಗಳಿಂದ ಈ ಕಾಲೇಜಿನಲ್ಲಿ ಹಿಂದೂ ವಿದ್ಯಾರ್ಥಿನಿಯರಿಗೆ ಅನ್ಯ ಕೋಮಿನವರು ಅನಗತ್ಯವಾಗಿ
ಚುಡಾಯಿಸುವುದು, ತೊಂದರೆ ಕೊಡುವುದು ಮಾಡುತ್ತಿದ್ದಾರೆ. ಹಿಂದೂ ಯುವಕರ ಜೊತೆ ವಿನಾಕಾರಣ ಜಗಳಕ್ಕೆ ಇಳಿಯುವುದು ಮಾಡುತ್ತಿದ್ದಾರೆ ಎಂದು ಯುವಕರು ನನ್ನ ಗಮನಕ್ಕೆ ತಂದಿದ್ದಾರೆ, ಇದಕ್ಕೆ ಎನ್‌ಎಸ್‌ಯುಐ ಕುಮ್ಮಕ್ಕು ನೀಡುತ್ತಿದೆ” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಹಾಸನ ಚಲೋ | ಪ್ರಜ್ವಲ್ ಗೆದ್ದರೂ- ಸೋತರೂ ಆತನನ್ನು ಒಪ್ಪಿಕೊಳ್ಳಬೇಡಿ: ಹೋರಾಟಗಾರ್ತಿ ಕೆ ನೀಲಾ

ಇಂತಹ ಘಟನೆಗಳಿಗೆ ಕಾಲೇಜು ಆಡಳಿತ ಮಂಡಳಿ ಆಸ್ಪದ ನೀಡಬಾರದು. ಹಲ್ಲೆ ಮಾಡಿರುವ ವಿದ್ಯಾರ್ಥಿಗಳನ್ನು ಕೂಡಲೇ ಕಾಲೇಜಿನಿಂದ ಹೊರಹಾಕಬೇಕು. ಇಂತಹ ಘಟನೆಗಳು ಮರುಕಳಿಸದಂತೆ ಎಲ್ಲಾ ಪೋಷಕರಿಗೆ ತಿಳಿಸಲು ಕಾಲೇಜು ಆಡಳಿತ ಮಂಡಳಿ ಕ್ರಮ ತೆಗೆದುಕೊಳ್ಳಬೇಕೆಂದು ಎಂದು ಖೂಬಾ ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...