ಆರ್‌ಟಿಐ ಅರ್ಜಿದಾರರನ್ನೇ ‘ಕಪ್ಪು ಪಟ್ಟಿ’ಗೆ ಸೇರಿಸಿ, ನಾಗರಿಕರ ಹಕ್ಕು ಹತ್ತಿಕ್ಕಲು ಮುಂದಾದ ಮಾಹಿತಿ ಆಯೋಗ

Date:

​ಮಾಹಿತಿ ಹಕ್ಕು ಕಾಯಿದೆಯಡಿ ಪ್ರಶ್ನೆ ಕೇಳುವ ನಾಗರಿಕರನ್ನು ‘ಕಪ್ಪು ಪಟ್ಟಿ’ಗೆ ಸೇರಿಸುತ್ತಿರುವ ಕರ್ನಾಟಕ ಮಾಹಿತಿ ಆಯೋಗದ ವಿಲಕ್ಷಣ ಮತ್ತು ಕಾನೂನು ಬಾಹಿರವಾಗಿದ್ದು, ಇಂತಹ ನಡವಳಿಕೆಯ ವಿರುದ್ಧ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮಾಹಿತಿ ನೀಡಬೇಕಾದ ಆಯೋಗವೇ ನಾಗರಿಕರ ಹಕ್ಕನ್ನು ಹತ್ತಿಕ್ಕಲು ಮುಂದಾಗಿದೆ ಎಂಬ ಆರೋಪಗಳು ವ್ಯಕ್ತವಾಗಿವೆ.

​​ಇತ್ತೀಚೆಗೆ ಕರ್ನಾಟಕ ಮಾಹಿತಿ ಆಯೋಗವು ನೀಡಿರುವ ಹಿಂಬರಹವೊಂದು(ಸಂಖ್ಯೆ: ಕಮಾಆ/605/ಮಾ.ಮಾ.ಹಿ/2025) ಸ್ವತಃ ಆಯೋಗದ ಮಿತಿಗಳನ್ನು ಬಯಲು ಮಾಡಿದೆ. ದ್ವಿತೀಯ ಮೇಲ್ಮನವಿ ಸಲ್ಲಿಸಿದ ನಂತರ ಅರ್ಜಿದಾರರನ್ನು ಕಪ್ಪು ಪಟ್ಟಿಗೆ ಸೇರಿಸಲು ಅಥವಾ ಒಂದು ಅರ್ಜಿಗೆ ₹1,000 ದಂಡ ವಿಧಿಸಲು ಮಾಹಿತಿ ಹಕ್ಕು ಕಾಯಿದೆ 2005ರ ಯಾವುದೇ ಕಲಂ ಅಥವಾ ಸೆಕ್ಷನ್‌ನಲ್ಲಿ ಅವಕಾಶವಿಲ್ಲ ಎಂದು ಆಯೋಗವೇ ಒಪ್ಪಿಕೊಂಡಿದೆ.

ಹೀಗಿದ್ದರೂ ಕೂಡಾ, ರಾಜ್ಯದ ಹಲವು ಸಾರ್ವಜನಿಕ ಮಾಹಿತಿ ಅಧಿಕಾರಿಗಳು ಅರ್ಜಿದಾರರನ್ನು ಕಪ್ಪು ಪಟ್ಟಿಗೆ ಸೇರಿಸಿರುವುದು ಆಯೋಗದ ವೈಫಲ್ಯವನ್ನು ಎತ್ತಿ ತೋರಿಸುತ್ತದೆ. ​​ಮಾಹಿತಿ ಕೇಳುವವರ ಮೇಲೆ ನಿರ್ಬಂಧ ಹೇರಲು ಹೊರಟಿದ್ದ ಅಧಿಕಾರಿಗಳಿಗೆ ಒರಿಸ್ಸಾ ಉಚ್ಛ ನ್ಯಾಯಾಲಯವು (WP (C) 29216/2025) ತಕ್ಕ ಪಾಠ ಕಲಿಸಿದೆ. ವರ್ಷಕ್ಕೆ ಕೇವಲ 12 ಅರ್ಜಿ ಸಲ್ಲಿಸಬೇಕು ಎಂಬ ಆಯೋಗದ ಆದೇಶವನ್ನು ನ್ಯಾಯಾಲಯವು ವಜಾಗೊಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

​ನಾಗರಿಕರಿಗೆ ಮಾಹಿತಿ ಕೇಳುವ ಹವ್ಯಾಸವಿದ್ದರೂ ಕೂಡ, ಅವರ ಹಕ್ಕನ್ನು ಕಸಿದುಕೊಳ್ಳುವುದು ಕಾನೂನು ಬಾಹಿರವೆಂದು ನ್ಯಾಯಾಲಯ ಗುಡುಗಿದೆ. ಕರ್ನಾಟಕದ ಅಧಿಕಾರಿಗಳು ಇದೇ ಒರಿಸ್ಸಾ ಆಯೋಗದ ಹಳೆಯ ಆದೇಶವನ್ನು ಮುಂದಿಟ್ಟುಕೊಂಡು ಸಾವಿರಾರು ಅರ್ಜಿಗಳನ್ನು ತಿರಸ್ಕರಿಸುತ್ತಿರುವುದು ಈಗ ಕಾನೂನು ಸಂಕಷ್ಟಕ್ಕೆ ದಾರಿ ಮಾಡಿಕೊಟ್ಟಿದೆ. ​

​ಕರ್ನಾಟಕ ಕಾರ್ಮಿಕ ಕಲ್ಯಾಣ ಪ್ರತಿಷ್ಠಾನದ ಮಧ್ಯ ಕರ್ನಾಟಕ ಪ್ರಾಂತ್ಯದ ಅಧ್ಯಕ್ಷ ಸಿ ಪಿ ತಿಪ್ಪೇಸ್ವಾಮಿ ಈ ಕುರಿತು ರಾಜ್ಯ ಮುಖ್ಯ ಮಾಹಿತಿ ಆಯುಕ್ತರಿಗೆ ಪತ್ರ ಬರೆದು ತೀವ್ರವಾಗಿ ಖಂಡಿಸಿದ್ದು, “ಒರಿಸ್ಸಾ ಉಚ್ಛ ನ್ಯಾಯಾಲಯದ ತೀರ್ಪು ನಾಗರಿಕರ ಹಕ್ಕನ್ನು ಎತ್ತಿ ಹಿಡಿದಿದೆ. ಕರ್ನಾಟಕದಲ್ಲಿ ಮಾಹಿತಿ ಅಧಿಕಾರಿಗಳು ಮನಬಂದಂತೆ ಅರ್ಜಿದಾರರನ್ನು ಕಪ್ಪು ಪಟ್ಟಿಗೆ ಸೇರಿಸಿರುವುದು ಕಾನೂನಿನ ಉಲ್ಲಂಘನೆ. ಕೂಡಲೇ ಇಂತಹ ಎಲ್ಲ ಕಾನೂನು ಬಾಹಿರ ‘ಕಪ್ಪು ಪಟ್ಟಿ’ಗಳನ್ನು ಹಿಂಪಡೆಯಬೇಕು” ಎಂದು ಒತ್ತಾಯಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್ | ಪಾಪನಾಶ ದೇವಸ್ಥಾನ ಪೂಜೆಗೆ ತೆರಳಿದ ಬಿಜೆಪಿ ಮುಖಂಡರು; ಅವಕಾಶ ನೀಡದ ಪೊಲೀಸರು

​ಮಾಹಿತಿ ಕೇಳುವುದು ನಾಗರಿಕರ ಸಾಂವಿಧಾನಿಕ ಹಕ್ಕು. ಅದನ್ನು ಹತ್ತಿಕ್ಕಲು ಕಪ್ಪು ಪಟ್ಟಿಯಂತಹ ಬೆದರಿಕೆ ತಂತ್ರಗಳನ್ನು ಬಳಸುತ್ತಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲೇಬೇಕಿದೆ. ಇಲ್ಲದಿದ್ದರೆ ಆರ್‌ಟಿಐ ಕಾಯಿದೆಯ ಮೂಲ ಆಶಯವೇ ಮಣ್ಣುಪಾಲಾಗಲಿದೆ.

ವರದಿ : ಜಗದೀಶ್‌ ನಗರಕೆರೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...