ನಿನ್ನೆ ನಡೆದ ಸದನದ ಘಟನೆ ಪಕ್ಷಾತೀತವಾಗಿ ತಲೆತಗ್ಗಿಸುವ ವಿಚಾರ: ಜೆಡಿಎಸ್‌ ಶಾಸಕ ಜಿ ಟಿ ದೇವೇಗೌಡ

Date:

ಸಭಾಧ್ಯಕ್ಷರ ಪೀಠದ ಹತ್ತಿರ ಹೋಗಿ ಅವರ ಮುಖದ ಮೇಲೆ ಪೇಪರ್ ಎಸೆಯುವುದು ತಪ್ಪು. ನಿನ್ನೆ ನಡೆದ ಘಟನೆ ಪಕ್ಷಾತೀತವಾಗಿ ತಲೆತಗ್ಗಿಸುವಂತ ವಿಚಾರ. ಇನ್ನು ಮುಂದಾದರೂ ಈ ರೀತಿಯ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಬೇಕು ಎಂದು ಬಿಜೆಪಿ ಸದಸ್ಯರಿಗೆ, ಜೆಡಿಎಸ್ ಶಾಸಕ ಜಿ ಟಿ ದೇವೇಗೌಡ ಕಿವಿಮಾತು ಹೇಳಿದ್ದಾರೆ.

ಗುರುವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಇಡೀ ರಾಷ್ಟ್ರದಲ್ಲಿ ಕೆಂಗಲ್ ಹನುಮಂತಯ್ಯ ಕಟ್ಟಿರುವ ವಿಧಾನಸೌಧಕ್ಕೆ ದೊಡ್ಡ ಗೌರವ ಇದೆ. ವಿಧಾನಸೌಧ ಪ್ರವೇಶಿಸುವಾಗ ತಲೆಬಾಗಿ ನಮಸ್ಕಾರ ಮಾಡಿ, ಒಳಗಡೆ ಹೋಗುತ್ತೇವೆ. ಸದನದಿಂದ ಅಮಾನತ್ತಾಗಿರುವ ಕೆಲವು ಶಾಸಕರಿಗೆ ವಿಧಾನಸಭೆಯೊಳಗೆ ಸುದೀರ್ಘ ಅನುಭವ ಇದೆ. ನಿನ್ನೆ ನಡೆದಿರುವ ಘಟನೆ ಪಕ್ಷಾತೀತವಾಗಿ ಎಲ್ಲರೂ ತಲೆತಗ್ಗಿಸುವ ಘಟನೆ. ಇಂಥ ಘಟನೆ ನಡೆಯಬಾರದಿತ್ತು” ಎಂದು ವಿಷಾದ ವ್ಯಕ್ತಪಡಿಸಿದರು.

“ಬಸನಗೌಡ ಪಾಟೀಲ್ ಯತ್ನಾಳ್‌ಗೆ ಏನಾದರೂ ಸ್ವಲ್ಪ ತೊಂದರೆ ಆಗಿದ್ದರೆ ಯಾರು ಹೊಣೆಯಾಗುತ್ತಿದ್ದರು? ಹೆಚ್ಚುಕಡಿಮೆ ಆಗಿದ್ದರೆ 2023ರಲ್ಲಿ ಕೆಟ್ಟ ಘಟನೆಯೊಂದು ದಾಖಲಾಗಿ ಹೋಗುತ್ತಿತ್ತು. ಐಎಎಸ್ ಅಧಿಕಾರಿಗಳು ಶಿಷ್ಟಾಚಾರ ಪಾಲನೆ ಉಲ್ಲಂಘಿಸಿದ್ದಾರೆ ಎಂದು ಬಿಜೆಪಿಯವರು ಹೇಳುತ್ತಾರೆ. ಹಿಂದೆ ಕೂಡಾ ಈ ರೀತಿ ಘಟನಾವಳಿಗಳು ನಡೆದಿವೆ. ಕಾಂಗ್ರೆಸ್ ವಿಷಾದ ವ್ಯಕ್ತಪಡಿಸಿದ್ದರೆ ಈ ಘಟನೆ ನಡೆಯುತ್ತಿರಲಿಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಜೆಪಿ ಜೊತೆ ಮೈತ್ರಿ; ನಾಯಕರಿಂದ ತೀರ್ಮಾನ

ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಜೆಡಿಎಸ್ ನಾಯಕರು ಸಭೆ ಮಾಡಿ ತೀರ್ಮಾನ ತೆಗೆದುಕೊಳ್ಳುತ್ತಾರೆ. ಇಂದು ಸಂಜೆ ಎಚ್ ಡಿ ದೇವೇಗೌಡರು ಊಟಕ್ಕೆ ಕರೆದಿದ್ದಾರೆ. ಸಂಜೆ ದೇವೇಗೌಡ ಜೊತೆ ಸೇರಿ ಚರ್ಚೆ ಬಳಿಕ ತೀರ್ಮಾನ ಮಾಡಲಾಗುತ್ತದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಕಲಾಪದಿಂದ ಸದಸ್ಯರ ಅಮಾನತು ಖಂಡಿಸಿ ಬಿಜೆಪಿ ಪ್ರತಿಭಟನೆ

ಅಮಾನತಾದವರ ಪಟ್ಟಿ ಮಾರ್ಷಲ್‌ಗಳಿಗೆ

ಅಮಾನತ್ತಾದ ಬಿಜೆಪಿ ಶಾಸಕರು ವಿಧಾನಸಭೆ ಪ್ರವೇಶಿಸುವ ಸಾಧ್ಯತೆ ಇರುವುದರಿಂದ, ಹತ್ತು ಶಾಸಕರ ಹೆಸರಿನ ಪಟ್ಟಿಯನ್ನು ಸ್ಪೀಕರ್ ಯು ಟಿ ಖಾದರ್ ಅವರು ಮಾರ್ಷಲ್‌ಗಳಿಗೆ ನೀಡಿದ್ದಾರೆ. ಬುಧವಾರ ಸದನದಲ್ಲಿ ಉಂಟಾದ ಗದ್ದಲದ ಕಾರಣಕ್ಕೆ ಬಿಜೆಪಿಯ 10 ಶಾಸಕರನ್ನು ಅಮಾನತು ಮಾಡಲಾಗಿತ್ತು. ಅಮಾನತ್ತಾದ ನಂತರವೂ ಸದಸ್ಯರು ಸದನದ ಬಾವಿಯಲ್ಲೇ ಕುಳಿತಿದ್ದರು. ಮಾರ್ಷಲ್‌ಗಳ ಮುಖಾಂತರ ಬಿಜೆಪಿ ಸದಸ್ಯರನ್ನು ಹೊರಗೆ ಹಾಕಿಸಿದ್ದರು. ಅಮಾನತ್ತಾದ ಶಾಸಕರನ್ನು ವಿಧಾನಸಭೆ ಪ್ರವೇಶದ್ವಾರದಲ್ಲೇ ತಡೆಯುವಂತೆ ಖಾದರ್ ಇಂದು ಸೂಚನೆ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...