ಕಟ್ಟಿ ಬೆಳೆಸಿದ ಪಕ್ಷಕ್ಕೆ ರಾಜೀನಾಮೆ ನೀಡಲು ನೋವಾಗುತ್ತಿದೆ ; ಕುತೂಹಲ ಸೃಷ್ಟಿಸಿದ ಜಗದೀಶ್‌ ಶೆಟ್ಟರ್ ಮಾತು

Date:

  • ಶಾಸಕ ಸ್ಥಾನಕ್ಕೆ ರಾಜೀನಾಮೆಯನ್ನು ಇಂದು ಸಭಾಧ್ಯಕ್ಷ ಕಾಗೇರಿಗೆ ಸಲ್ಲಿಸಿದ್ದ ಜಗದೀಶ್‌ ಶೆಟ್ಟರ್
  • ಬಿಜೆಪಿ ಪ್ರಾಥಮಿಕ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ ಎನ್ನುವ ಮೂಲಕ ಕುತೂಹಲ ಸೃಷ್ಟಿ

ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿಯ ಹಿರಿಯ ನಾಯಕ ಜಗದೀಶ್‌ ಶೆಟ್ಟರ್ ಅವರು ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಳಿಕ ಅವರ ಮುಂದಿನ ನಡೆ ಮತ್ತಷ್ಟು ರಹಸ್ಯವಾಗಿ ಉಳಿದಿದೆ.

ಭಾನುವಾರ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಶಿರಸಿ ಕಚೇರಿಗೆ ತಮ್ಮ ಬೆಂಬಲಿಗರ ಜೊತೆಗೂಡಿ ತೆರಳಿದ್ದ ಶೆಟ್ಟರ್ ಅವರು ತಮ್ಮ ರಾಜೀನಾಮೆ ಸಲ್ಲಿಸಿ, ಇಂದೇ ಕಾಂಗ್ರೆಸ್‌ ಸೇರಲಿದ್ದಾರೆ ಎನ್ನುವ ಮಾತುಗಳು ಹೆಚ್ಚು ಕೇಳಿಬಂದಿದ್ದವು.

ಆದರೆ, ಜಗದೀಶ್‌ ಶೆಟ್ಟರ್‌ ಬೆಂಗಳೂರಿಗೆ ಆಗಮಿಸಿ ದ್ವಂದ್ವ ಹೇಳಿಕೆ ನೀಡುವ ಮೂಲಕ ತಮ್ಮ ಮುಂದಿನ ನಡೆಯನ್ನು ಇನ್ನೂ ‌ನಿಗೂಢವಾಗಿಯೇ ಉಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಶೆಟ್ಟರ್‌, “ಶಾಸಕ ಸ್ಥಾನಕ್ಕೆ ಮಾತ್ರ ರಾಜೀನಾಮೆ ನೀಡಿರುವೆ. ಬಿಜೆಪಿ ಪ್ರಾಥಮಿಕ ಸ್ಥಾನಕ್ಕೆ ಇನ್ನೂ ರಾಜೀನಾಮೆ ನೀಡಿಲ್ಲ” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬಿಜೆಪಿ 60 ದಾಟದು, ಕಾಂಗ್ರೆಸ್‌ ಕನಿಷ್ಠ 130 ಸ್ಥಾನ ಗೆಲ್ಲಲಿದೆ: ವೀರಪ್ಪ ಮೊಯ್ಲಿ

“ನಾನು ಬಿಜೆಪಿ ಕಟ್ಟಿ ಬೆಳೆಸಿದ ವ್ಯಕ್ತಿ, ಹೀಗಾಗಿ ಪಕ್ಷಕ್ಕೆ ರಾಜೀನಾಮೆ ನೀಡೋದು ಸ್ವಲ್ಪ ನೋವಾಗುತ್ತಿದೆ” ಎನ್ನುವ ಮೂಲಕ ಮತ್ತಷ್ಟು ಕುತೂಹಲ ಸೃಷ್ಟಿಸಿದ್ದಾರೆ.

ಕಾಂಗ್ರೆಸ್‌ನವರು ತಮ್ಮನ್ನು ಬೆಂಗಳೂರಿಗೆ ಬರಮಾಡಿಕೊಳ್ಳಲು ವಿಶೇಷ ಹೆಲಿಕ್ಯಾಪ್ಟರ್‌ ಕಳುಹಿಸಿದ್ದಾರೆಯೆ ಎಂಬ ಪ್ರಶ್ನೆಗೆ ಉತ್ತರಿಸಿ, “ಶಾಮನೂರು ಅವರು ಈ ಹೆಲಿಕ್ಯಾಪ್ಟರ್‌ ಕಳುಹಿಸಿದ್ದಾರೆ. ಅವರು ನನಗೆ ಬೀಗರು ಆಗಬೇಕು. ಹುಬ್ಬಳಿಗೆ ಶ್ಯಾಮನೂರು ಗಣೇಶ್‌ ಬಂದಿದ್ದರು. ಅವರ ಜೊತೆ ಬೆಂಗಳೂರಿಗೆ ಬಂದಿದ್ದೇನೆ” ಎಂದರು.

ಇದೆ ವೇಳೆ ಕಾಂಗ್ರೆಸ್ ಪಕ್ಷಕ್ಕೆ ಏನಾದರೂ ಸೇರುತ್ತೀರಾ ಎಂದು ಕೇಳಿದ್ದಕ್ಕೆ ಪ್ರತಿಕ್ರಿಯಿಸಿದ ಶೆಟ್ಟರ್, “ನಾನಿನ್ನು ರಾಜೀನಾಮೆ ನೀಡಿಲ್ಲ, ನೀಡಿದ ಮೇಲೆ ಕಾಂಗ್ರೆಸ್‌ನವರನ್ನು ಭೇಟಿಯಾಗೋದು.ಆದರೆ ಇದುವರೆಗೆ ನಾನು ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿಲ್ಲ. ಇನ್ನೂ ಎರಡು ದಿನದಲ್ಲಿ ತೀರ್ಮಾನ ತೊಗೋತೀನಿ” ಎಂದರು.

ಕಾಂಗ್ರೆಸ್‌ ನಾಯಕರ ಸ್ವಾಗತ

ರಾಜೀನಾಮೆ ನೀಡಿ ಶಿರಸಿಯಿಂದ ಆಗಮಿಸಿದ ಜಗದೀಶ್‌ ಶೆಟ್ಟರ್‌ ಅವರಿಗೆ ಕಾಂಗ್ರೆಸ್‌ ಕಾರ್ಯಕರ್ತರು ಹುಬ್ಬಳ್ಳಿಯಲ್ಲಿ ರುದ್ರಾಕ್ಷಿ ಹಾರ ಹಾಕಿ ಸ್ವಾಗತಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...