ಜನಾಗ್ರಹ ಸಭೆ | ಬಾಲನ್ಯಾಯ ಕಾಯ್ದೆ(JJ Act)ತಿದ್ದುಪಡಿಗೆ ಕೊಲೆಯಾದ ಪ್ರಬುದ್ಧ ತಾಯಿ ಸೌಮ್ಯ ಆಗ್ರಹ

Date:

“ನನ್ನ ಮಗಳನ್ನು ಕೊಲೆ ಮಾಡಿರುವ ಅಪ್ರಾಪ್ತನಿಗೆ ಶಿಕ್ಷೆ ಕೊಡಿಸುವ ಮೂಲಕ ಬಾಲನ್ಯಾಯ ಕಾಯ್ದೆ ತಿದ್ದುಪಡಿಯಾಗಬೇಕು” ಎಂದು ಇತ್ತೀಚೆಗೆ ಕೊಲೆಗೀಡಾದ ವಿದ್ಯಾರ್ಥಿನಿ ಪ್ರಬುದ್ಧಳ ತಾಯಿ ಸೌಮ್ಯ ಕೆ ಆರ್‌ ಒತ್ತಾಯಿಸಿದರು.

ಬುಧವಾರ ಫ್ರೀಡಂ ಪಾರ್ಕಿನಲ್ಲಿ ಹೆಣ್ಣುಮಕ್ಕಳ ಕೊಲೆಗಳ ವಿರುದ್ಧ ಪ್ರಗತಿಪರ ಸಂಘಟನೆಗಳು ಆಯೋಜಿಸಿದ್ದ ಹಕ್ಕೊತ್ತಾಯ ಸಭೆಯಲ್ಲಿ ಅವರು ಭಾವುಕರಾಗಿ ಮಾತನಾಡಿದರು.

“ನನಗೆ ಸಾಮಾಜಿಕ ನ್ಯಾಯ ಸಿಕ್ಕಿಲ್ಲ. ಕಾನೂನಿನ ಲೋಪದೋಷದಿಂದಾಗಿ ಇಂದು ನಾನು ಕಾನೂನು ಹೋರಾಟ ಮಾಡುವಂತಾಗಿದೆ. ಕೊಲೆಗಾರನನ್ನು ಕೊಲೆಗಾರ ಎನ್ನುವಂತೆ ಇಲ್ಲ. ಕೊಲೆಗಾರನ ಕುಟುಂಬದವರ ಹೆಸರೆತ್ತುವಂತಿಲ್ಲ. ಬಾಲಕ, ಅಪ್ರಾಪ್ತ ಎಂಬುದು ನಂಬರ್‌ ಅಷ್ಟೇ. ಆತನಿಗೆ ಕೊಲೆಯನ್ನು ಆತ್ಮಹತ್ಯೆ ಎಂದು ಬಿಂಬಿಸುವ ಮನಸ್ಥಿತಿಯಿದೆ ಎಂಬುದನ್ನು ನೋಡಿದರೆ ಆತ ದೊಡ್ಡವರು ಮಾಡುವ ಅಪರಾಧ ಮಾಡಿದ್ದಾನೆ. ಆತನಿಗೆ ಕಾನೂನಿನ ಅಡಿಯಲ್ಲಿ ಶಿಕ್ಷೆ ಆಗಬೇಕು. ತಪ್ಪಿಸಿಕೊಳ್ಳಲು ಅವಕಾಶ ನೀಡಬಾರದು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಗಳ ಸಾವಿನ ನೋವು ಒಂದು ಕಡೆ, ಮತ್ತೊಂದು ಕಡೆ ಮಗಳ ಕೊಲೆಗಾರನಿಗೆ ಶಿಕ್ಷೆ ಕೊಡಿಸಲಾರದೇ ಒದ್ದಾಡುತ್ತಿದ್ದೇನೆ. ಅಪ್ರಾಪ್ತರು ಅಪಘಾತ ಮಾಡಿದಾಗ ಪೋಷಕರನ್ನು ಬಂಧಿಸುತ್ತಾರೆ. ನನ್ನ ಮಗಳನ್ನು ಕೊಲೆ ಮಾಡಿದವನಿಗೆ ಹತ್ತೇ ದಿನದಲ್ಲಿ ಜಾಮೀನು ಕೊಟ್ಟಿದ್ದಾರೆ. ಹಾಗಿದ್ದರೆ ಸಮಾಜಕ್ಕೆ ಯಾವ ಸಂದೇಶ ಕೊಟ್ಟಿದ್ದೇವೆ. ಆರೋಪಿಯ ಹಿಂದೆ ಯಾರಿದ್ದಾರೆ ಎಂದು ಪೊಲೀಸರು ತನಿಖೆ ಮಾಡಬೇಕು. ಕಳ್ಳತನ ಮಾಡಿದ್ದನ್ನು ಪೋಷಕರಿಗೆ ತಿಳಿಸುತ್ತೇನೆ ಎಂದ ಮಾತ್ರಕ್ಕೆ ಕೊಂದುಬಿಡುವುದಾ? ಹಾಗಿದ್ದರೆ, ಆ ಬಾಲಕನ ಪೋಷಕರು ಎಂತಹ ಸಂಸ್ಕಾರ ಕೊಟ್ಟಿದ್ದಾರೆ? ” ಎಂದು ಪ್ರಶ್ನಿಸಿದರು.

ಜ್ಯುವಿನಲ್‌ ಜಸ್ಟಿಸ್‌ ಕಾಯ್ದೆ (J J Act) ಪ್ರಕಾರ ಅಪ್ರಾಪ್ತ ಅಪರಾಧಿಗಳನ್ನು ಬಂಧಿಸಬಾರದು, ಶಿಕ್ಷಿಸಬಾರದು. ಆದಿವಾಸಿ ಮಕ್ಕಳಿಗೆ ತೊಂದರೆಯಾಗುತ್ತದೆ ಎಂಬ ಕಾರಣಕ್ಕೆ ಕಾಯ್ದೆಯಲ್ಲಿ ಕೆಲವು ತಿದ್ದುಪಡಿ ಮಾಡಲಾಗಿದೆ. ಆದರೆ, ಇದರಿಂದ ಸಮಾಜಕ್ಕೆ ಯಾವ ಸಂದೇಶ ಹೋಗುತ್ತದೆ? ಬಾಲಕರು ಕೊಲೆ, ಅತ್ಯಾಚಾರ ಏನೇ ಆದರೂ ಮಾಡಬಹುದಾ? ಇದರಿಂದ ಪ್ರೇರಣೆಯಾಗಿ ಹದಿನಾರು ವರ್ಷದೊಳಗಿನ ಬಾಲಕರಿಂದ ಕೊಲೆ ಮಾಡಿಸಬಹುದು. ನನ್ನ ಮಗಳ ಕೊಲೆಗಾರನಿಗೆ ಶಿಕ್ಷೆ ಆಗಲೇ ಬೇಕು. ಯಾವುದೇ ಕಾರಣದಿಂದ ಬಿಡುವ ಹಾಗಿಲ್ಲ. ಆ ಮೂಲಕವೇ ಕಾನೂನು ತಿದ್ದುಪಡಿಯಾಗಬೇಕು. ಅದಕ್ಕಾಗಿ ಹೋರಾಟ ಮಾಡೋಣ” ಎಂದು ಸೌಮ್ಯ ಒತ್ತಾಯಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

BREAKING NEWS | ಸೌಜನ್ಯ ಅತ್ಯಾಚಾರ-ಕೊಲೆ ಪ್ರಕರಣ: ರಾಜ್ಯ ಸರ್ಕಾರ, ಸಿಬಿಐಗೆ ಸುಪ್ರೀಂ ನೋಟಿಸ್‌

ದೇಶವನ್ನೇ ಬೆಚ್ಚಿ ಬೀಳಿಸಿದ್ದ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಸಮಾಜ ಸ್ಪಂದನಶೀಲೆ- ಸೌಭಾಗ್ಯ ಸಿ. 

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಮಹಿಳೆಯರ ವಿರುದ್ಧ ಸೈಬರ್ ಕ್ರೈಮ್: ಐದು ವರ್ಷಗಳಲ್ಲಿ ದುಪ್ಪಟ್ಟು

ಮಹಿಳೆಯರ ವಿರುದ್ಧದ ಸೈಬರ್ ಕ್ರೈಮ್ ಪ್ರಕರಣಗಳು ಕಳೆದ ಐದು ವರ್ಷಗಳಲ್ಲಿ ದುಪಟ್ಟಾಗಿದೆ....

ಅಮಾನತುಗೊಂಡಿದ್ದ ಇನ್‌ಸ್ಪೆಕ್ಟರ್ ಸಂದೇಶ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು

ಈ ಹಿಂದೆ ಇಬ್ಬರು ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಅಮಾನತುಗೊಂಡಿದ್ದ...