ಕರ್ನಾಟಕ ಮಾಧ್ಯಮ ಅಕಾಡೆಮಿಗೆ ಪತ್ರಕರ್ತೆ ಆಯೇಷಾ ಖಾನಂ ಅಧ್ಯಕ್ಷರಾಗಿ ನೇಮಕ

Date:

ಕರ್ನಾಟಕ ಮಾಧ್ಯಮ ಅಕಾಡೆಮಿಗೆ ಹಿರಿಯ ಪತ್ರಕರ್ತೆ ಆಯೇಷಾ ಖಾನಂ ಅವರನ್ನು ಅಧ್ಯಕ್ಷರನ್ನಾಗಿ ಸರ್ಕಾರ ನೇಮಿಸಿದೆ.

ಇವತ್ತಿನವರೆಗೂ ಮಾಧ್ಯಮ ಅಕಾಡೆಮಿಗೆ ಅಲ್ಪಸಂಖ್ಯಾತ ಸಮುದಾಯದವರನ್ನು ಮತ್ತು ಮಹಿಳೆಯನ್ನು ಯಾವ ಮುಖ್ಯಮಂತ್ರಿಗಳೂ ನೇಮಿಸಿರಲಿಲ್ಲ. ಈ ಕೊರತೆಯನ್ನು ಸಿಎಂ ಸಿದ್ದರಾಮಯ್ಯ ಅವರು ನೀಗಿಸಿದ್ದಾರೆ.

ಆಯೇಷಾ ಅವರು ಕಲ್ಯಾಣ ಕರ್ನಾಟಕದ ಕಲಬುರಗಿ ಜಿಲ್ಲೆಯವರಾಗಿರುವುದರಿಂದ ಸಾಮಾಜಿಕ ನ್ಯಾಯ, ಪ್ರಾದೇಶಿಕ ನ್ಯಾಯ, ಲಿಂಗ ಸಮಾನತೆಗೂ ಮಾನ್ಯತೆ ಕೊಟ್ಟಂತಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜನಪರ ಹೋರಾಟದಿಂದಲೇ ಪತ್ರಿಕೋದ್ಯಮಕ್ಕೆ ಪ್ರವೇಶಿಸಿ ಸಾಮಾಜಿಕ ಕಾಳಜಿಗಳನ್ನಿಟ್ಟುಕೊಂಡು ವೃತ್ತಿಯಲ್ಲಿ ತೊಡಗಿರುವ ಚಿತ್ರದುರ್ಗದ ಅಹೋಬಳಪತಿ ಅವರ ಜೊತೆಗೆ ಬೆಂಗಳೂರಿನ ಪತ್ರಿಕಾ ಛಾಯಾಗ್ರಾಹಕರಾದ ಕೆ.ವೆಂಕಟೇಶ್ ಮತ್ತು ಕೊಪ್ಪಳದ ಹಿರಿಯ ಪತ್ರಕರ್ತ ಕೆ.ನಿಂಗಜ್ಜ ಅವರನ್ನು ಅಕಾಡೆಮಿ ಸದಸ್ಯರನ್ನಾಗಿ ನೇಮಿಸಲಾಗಿದ್ದು. ಇಲ್ಲೂ ಕೂಡ ಪ್ರಾದೇಶಿಕ ಮತ್ತು ಸಾಮಾಜಿಕ ನ್ಯಾಯಕ್ಕೆ ಮನ್ನಣೆ ನೀಡಲಾಗಿದೆ.

ಈ ಮೂಲಕ ಇದೇ ಮೊದಲ ಬಾರಿಗೆ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಸ್ಥಾನವನ್ನು ನಿರಂತರವಾಗಿ ವೃತ್ತಿಪರತೆ ಕಾಪಾಡಿಕೊಂಡು ಬಂದಿರುವ ಅಲ್ಪಸಂಖ್ಯಾತ ಸಮುದಾಯದ ಹಿರಿಯ ಮಹಿಳಾ ಪ್ರತಿನಿಧಿಯೊಬ್ಬರು ಅಲಂಕರಿಸಿದ್ದಾರೆ.

ಹಿರಿಯ ಪತ್ರಕರ್ತೆ ಮತ್ತು ಸುದ್ದಿ ನಿರೂಪಕಿಯಾಗಿರುವ ಆಯೇಷಾ ಖಾನಂ ಅವರು ದೂರದರ್ಶನ ದಕ್ಷಿಣ ಭಾರತದ ಮುಖ್ಯ ವರದಿಗಾರರಾಗಿದ್ದರು. ಜು.9ರಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಆಯೇಷಾ ಖಾನಂ ಅವರು 26 ವರ್ಷಗಳ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸಿದ್ದು, ಈ ಹಿಂದೆ ಏಷ್ಯನ್ ಏಜ್, ಆಜ್‌ತಕ್‌, ಸ್ಟಾರ್ ನ್ಯೂಸ್‌ನಲ್ಲಿ ಕೆಲಸ ಮಾಡಿದ್ದಾರೆ. ಅವರು ಶ್ರೀಲಂಕಾ ಸಂಘರ್ಷ, 11 ರಾಜ್ಯಗಳ ಚುನಾವಣೆ ಹಾಗೂ 5 ಸಾರ್ವತ್ರಿಕ ಲೋಕಸಭಾ ಚುನಾವಣೆಗಳಲ್ಲಿ ಪರಿಣಾಮಕಾರಿ ವರದಿಗಾರಿಗೆ ಮಾಡಿ ಖ್ಯಾತಿ ಗಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...