ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿಯ ಪಾಕಿಸ್ತಾನ ಹೇಳಿಕೆ: ಸಾಹಿತಿಗಳ ಖಂಡನೆ

Date:

ಪ್ರಕರಣವೊಂದರ ವಿಚಾರಣೆ ಸಂದರ್ಭದಲ್ಲಿ ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿಯೊಬ್ಬರು ಬೆಂಗಳೂರಿನ ಮುಸ್ಲಿಂ ಸಮುದಾಯ ಹೆಚ್ಚಾಗಿರುವ ಸ್ಥಳವನ್ನು ಭಾರತವಲ್ಲ, ಪಾಕಿಸ್ತಾನ ಎಂದು ಹೇಳಿರುವುದು ವರದಿಯಾಗಿದ್ದು, ಈ ಬೆಳವಣಿಗೆ ಆಘಾತ ಉಂಟು ಮಾಡಿದೆ ಎಂದು ಜಾಗೃತ ಕರ್ನಾಟಕದ ನಾಗರಿಕರ ವೇದಿಕೆ ಖಂಡಿಸಿದೆ.

‘ಸರ್ವ ಧರ್ಮ ಸಮಭಾವದ ಸಂವಿಧಾನವನ್ನು ಒಪ್ಪಿಕೊಂಡಿರುವ ದೇಶ ನಮ್ಮದು. ಈಗಾಗಲೇ ವಿವಿಧ ರೀತಿಯಲ್ಲಿ ಧಾರ್ಮಿಕ ಅಲ್ಪಸಂಖ್ಯಾತರಾಗಿರುವ ಮುಸ್ಲಿಂ ಸಮುದಾಯವನ್ನೇ ಗುರಿಯಾಗಿಸಿರುವ ಹಲವು ದೌರ್ಜನ್ಯಗಳಿಗೆ ದೇಶ ಸಾಕ್ಷಿಯಾಗುತ್ತಿದೆ. ಇಂತಹ ವೇಳೆಯಲ್ಲಿ ನ್ಯಾಯಪೀಠದಿಂದ ಬರುವ ಇಂತಹ ಅಭಿಪ್ರಾಯಗಳು ಜನರ ಮಧ್ಯೆ ಇರುವ ಸಾಮರಸ್ಯ ಹದಗೆಡಿಸಲು ಕಾರಣವಾಗಬಹುದು. ಇಂತಹ ಹೇಳಿಕೆಗಳಿಗೆ ಕಡಿವಾಣ ಹಾಕಬೇಕು,” ಎಂದು ವೇದಿಕೆ ಆಗ್ರಹಿಸಿದೆ.

”ಈ ಹಿಂದೆ ಕರ್ನಾಟಕ ಹೈಕೋರ್ಟ್‌ನ ಮತ್ತೊಬ್ಬ ನ್ಯಾಯಮೂರ್ತಿಯೊಬ್ಬರು, ಪ್ರಕರಣ ಒಂದರ ವಿಚಾರಣೆ ವೇಳೆ ಮನುಸ್ಮೃತಿಯು ಆಚಾರ, ವ್ಯವಹಾರ, ಪ್ರಾಯಃಶ್ಚಿತ್ತ ಬೋಧಿಸುತ್ತದೆ ಎಂದು ಪ್ರಶಂಸಿಸುವ ಹೇಳಿಕೆ ನೀಡಿದ ಕೆಲವೇ ವಾರಗಳಲ್ಲಿ ಪಾಕಿಸ್ತಾನ ಹೇಳಿಕೆ ಕಳವಳಕಾರಿ ಪ್ರಸಂಗ ನ್ಯಾಯಾಲಯದಲ್ಲಿ ವರದಿಯಾಗಿರುವುದು ಆಘಾತಕಾರಿ ವಿದ್ಯಮಾನ. ಇವೆಲ್ಲವೂ ಬಹುತ್ವ ಭಾರತಕ್ಕೆ ಪೆಟ್ಟು ನೀಡುವಂತಿವೆ,” ಎಂದು ಪ್ರೊ. ಕೆ. ಮರುಳಸಿದ್ದಪ್ಪ, ಡಾ. ಜಿ. ರಾಮಕೃಷ್ಣ, ಪ್ರೊ. ಎಸ್‌.ಜಿ. ಸಿದ್ದರಾಮಯ್ಯ, ರುದ್ರಪ್ಪ ಹನಗವಾಡಿ, ಬಿ. ಶ್ರೀಪಾದ ಭಟ್‌, ಡಾ. ಮೀನಾಕ್ಷಿ ಬಾಳಿ, ಕೆ. ಎಸ್‌. ವಿಮಲಾ, ಡಾ. ಎನ್‌. ಗಾಯತ್ರಿ, ಟಿ. ಸುರೇಂದ್ರ ರಾವ್‌, ವಸಂತ್‌ ರಾಜ್‌ ಎನ್‌. ಕೆ., ವಾಸುದೇವ ಉಚ್ಚಿಲ, ಡಾ. ಬಂಜಗೆರೆ ಜಯಪ್ರಕಾಶ್‌, ಡಾ. ವಸುಂಧರಾ ಭೂಪತಿ, ಇಂದಿರಾ ಕೃಷ್ಣಪ್ಪ ಸೇರಿದಂತೆ ಅನೇಕ ಸಾಹಿತಿಗಳು, ಚಿಂತಕರು, ವಿಮರ್ಶಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಒಂದು ದೇಶ ಒಂದು ಚುನಾವಣೆ- ಒಕ್ಕೂಟ ವ್ಯವಸ್ಥೆ ಧ್ವಂಸಕ್ಕೆ ಅಡಿಗಲ್ಲು

”ವೈಯಕ್ತಿಕ ನೆಲೆಯಲ್ಲಿ ನಡೆಯಬೇಕಾದ ಪೂಜೆ, ಹಬ್ಬಗಳು ಸಾರ್ವಜನಿಕ ಪ್ರಚಾರ ಸಾಧನವಾಗುವುದು ಮತ್ತು ನ್ಯಾಯಾಂಗದಲ್ಲಿ ಇರುವವರು ರಾಜಕೀಯ ವ್ಯಕ್ತಿಗಳಿಂದ ದೂರ ಇರಬೇಕು ಎಂಬ ಸದಾಶಯ ಇಂದು ಗಡಿ ಮೀರಿದೆ. ಪ್ರಧಾನ ಮಂತ್ರಿಗಳು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿಗಳ ಮನೆಯ ವ್ಯಕ್ತಿಗತ ಗಣೇಶ ಪೂಜೆಯಲ್ಲಿ ಪಾಲ್ಗೊಂಡು, ವಿಡಿಯೋ ಹಂಚಿಕೆಯಾಗುವುದೆಲ್ಲವೂ ಬಹುತ್ವ ಭಾರತದ ಅಡಿಗಲ್ಲು ಸಡಿಲವಾಗುತ್ತಿದೆಯೇ ಎಂಬ ಅನುಮಾನಕ್ಕೆ ಕಾರಣವಾಗಿವೆ. ಬಹುತ್ವ ಭಾರತದ ಸಾಂಸ್ಕೃತಿಕ ನೆಲೆಯಲ್ಲಿ ಬದುಕುತ್ತಿರುವ ನಾವೆಲ್ಲ ಇಂತಹ ಸ್ಥಿತಿಗಳು ಮರುಕಳಿಸದಂತೆ ಗಮನಹರಿಸುವ ಅಗತ್ಯವಿದೆ,” ಎಂದು ಒತ್ತಾಯಿಸಿದ್ದಾರೆ.

ಬೆಂಗಳೂರಿನ ಮುಸ್ಲಿಂ ಬಾಹುಳ್ಯದ ಪ್ರದೇಶವಾಗಿರುವ ಗೋರಿಪಾಳ್ಯದಲ್ಲಿನ ಕ್ರಿಮಿನಲ್‌ಗಳ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸರು ಹಿಂದೇಟು ಹಾಕುತ್ತಿದ್ದಾರೆ. ಅದು ಮಿನಿ ಪಾಕಿಸ್ತಾನವಾಗಿ ಬದಲಾಗಿದೆ ಎಂದು ಹೈಕೋರ್ಟ್ ನ್ಯಾಯಮೂರ್ತಿ ವಿ ಶ್ರೀಶಾನಂದ ಅವರು ಇತ್ತೀಚೆಗೆ ಹೇಳಿದ್ದರು.

ಮೈಸೂರು ರಸ್ತೆಯ ಫ್ಲೈಓವರ್‌ನಲ್ಲಿ ನೋಡಿದರೆ ಪ್ರತಿ ಆಟೋ ರಿಕ್ಷಾದಲ್ಲಿಯೂ ಹತ್ತು ಜನರನ್ನು ತುಂಬಿಸಿರುತ್ತಾರೆ. ಮೈಸೂರು ರಸ್ತೆಯ ಮೇಲ್ಸೇತುವೆ ಸಾಗುವ ಗೋರಿಪಾಳ್ಯದಿಂದ ಮಾರುಕಟ್ಟೆವರೆಗಿನ ಪ್ರದೇಶ ಭಾರತದಲ್ಲಿ ಇಲ್ಲ. ಅದು ಪಾಕಿಸ್ತಾನದಲ್ಲಿದೆ. ಇದು ವಾಸ್ತವ” ಎಂದಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...