ರಾಜ್ಯಪಾಲರು ತಮ್ಮ ಭಾಷಣ ಓದಿರುವುದು ಸಂವಿಧಾನದ ಉಲ್ಲಂಘನೆ: ಸಿಎಂ ಸಿದ್ದರಾಮಯ್ಯ

Date:

ವಿಶೇಷ ಅಧಿವೇಶನದಲ್ಲಿ ರಾಜ್ಯಪಾಲರು ತಾವು ಸಿದ್ಧಪಡಿಸಿದ ಭಾಷಣ ಓದಿರುವುದು ಸಂವಿಧಾನದ ಸ್ಪಷ್ಟ ಉಲ್ಲಂಘನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಧಾನಸೌಧದ ನಡೆದ ವಿಶೇಷ ಅಧಿವೇಶನದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ತಾವು ಸಿದ್ಧಪಡಿಸಿದ ಎರಡು ಸಾಲುಗಳ ಭಾಷಣ ಓದಿ ಹೊರನಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

“ನೂತನ ಸರ್ಕಾರ ರಚನೆಯಾದಾಗ ಹಾಗೂ ವಿಶೇಷ ಅಧಿವೇಶನಗಳ ಸಂದರ್ಭಗಳಲ್ಲಿ ಜಂಟಿ ಸದನವನ್ನು ಉದ್ದೇಶಿಸಿ ಸಚಿವ ಸಂಪುಟ ಸಿದ್ದಪಡಿಸಿದ ಭಾಷಣ ಮಾಡಬೇಕಿರುವುದು ಸಂವಿಧಾನದ ನಿಯಮ ಹಾಗೂ ರಾಜ್ಯಪಾಲರ ಕರ್ತವ್ಯ. ಸಂವಿಧಾನದ 176 ಹಾಗೂ 163ನೇ ವಿಧಿಗಳು ಈ ಬಗ್ಗೆ ಸ್ಪಷ್ಟವಾಗಿ ಹೇಳುತ್ತವೆ. ರಾಜ್ಯಪಾಲರು ತಾವೇ ತಯಾರಿಸಿದ ಭಾಷಣಗಳನ್ನು ಓದುವಂತಿಲ್ಲ” ಎಂದು ಸಿಎಂ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ರಾಜ್ಯಪಾಲರು ಕೇಂದ್ರದ ಕೈಗೊಂಬೆಯಲ್ಲ- ಆಯಾ ರಾಜ್ಯದ ಜನಾದೇಶ ಧಿಕ್ಕರಿಸುವ ನಡೆ ಸಂವಿಧಾನಬಾಹಿರ

“ಸರ್ಕಾರದ ಸಚಿವ ಸಂಪುಟ ಏನು ಸಿದ್ಧಪಡಿಸುತ್ತದೆಯೋ ಆ ಭಾಷಣವನ್ನು ಓದಲೇಬೇಕು. ಇದು ನೂತನ ವರ್ಷದ ಮೊದಲನೇ ಜಂಟಿ ಅಧಿವೇಶನ. ಸರ್ಕಾರ ವಿಶೇಷ ಅಧಿವೇಶನ ಕೂಡ ಕರೆಯಲಾಗಿದೆ. ಮನರೇಗ ಯೋಜನೆಯನ್ನು ರದ್ದು ಮಾಡಿ ವಿ ಬಿ ರಾಮ್‌ ಜಿ ಎಂದು ಬದಲಿಸಲಾಗಿದೆ. ಇದಕ್ಕೆ ನಮ್ಮ ಸರ್ಕಾರದ ತೀವ್ರ ವಿರೋಧವಿದೆ. ಈ ಯೋಜನೆಯಲ್ಲಿ ಮಹಾತ್ಮ ಗಾಂಧಿ ಹೆಸರು ತೆಗೆದು ಹಾಕಲಾಗಿದೆ. ಈ ಬಗ್ಗೆ ಹೋರಾಟ ನಡೆಸುವ ಸಲುವಾಗಿಯೇ ವಿಶೇಷ ಅಧಿವೇಶನ ಕರೆಯಲಾಗಿದೆ” ಎಂದು ಹೇಳಿದರು.

“20 ವರ್ಷಗಳ ಹಿಂದೆ ಅಂದಿನ ಪ್ರಧಾನಿಯಾಗಿದ್ದ ಮನಮೋಹನ್‌ ಸಿಂಗ್‌ ಅವರು ರಾಜ್ಯ ನಿರ್ದೇಶಿಕ ತತ್ವಗಳ ಅಡಿಯಲ್ಲಿ ಕೆಲಸದ ಹಕ್ಕು, ಶಿಕ್ಷಣದ ಹಕ್ಕು, ಮಾಹಿತಿಯ ಹಕ್ಕು, ಜೀವಿಸುವ ಹಕ್ಕುಗಳಡಿ ಮನರೇಗ ಕಾಯ್ದೆಯನ್ನು ಜಾರಿಗೊಳಿಸಿದ್ದರು. ಹಳ್ಳಿಗಾಡಿನಲ್ಲಿರುವ ಬಡ ಕಾರ್ಮಿಕರಿಗೆ ಕನಿಷ್ಠ 100 ದಿನಗಳ ಕಾಲ ಉದ್ಯೋಗವನ್ನು ನೀಡಬೇಕೆನ್ನುವುದು ಇದರ ಉದ್ದೇಶವಾಗಿತ್ತು” ಎಂದು ಸಿಎಂ ವಿವರಿಸಿದರು.

“ದಲಿತರು, ಕಾರ್ಮಿಕರು, ಸಣ್ಣ ರೈತರು, ಬಡವರು ಮನರೇಗ ಯೋಜನೆಯಡಿ ಉದ್ಯೋಗ ನೀಡಲಾಗುತ್ತದೆ. ಶೇ. 53 ಮಹಿಳೆಯರು, ಶೇ.28 ದಲಿತರು ಈ ಯೋಜನೆಯಡಿ ಉದ್ಯೋಗ ಪಡೆದಿದ್ದರು. ಸ್ಥಳೀಯ ಗ್ರಾಮ ಪಂಚಾಯಿತಿ ಮನರೇಗ ಉದ್ಯೋಗದ ಕ್ರಿಯಾ ಯೋಜನೆಯನ್ನು ನಿರ್ಧರಿಸುತ್ತಿದ್ದವು. ಆದರೆ ಈಗ ಮಹತ್ವಾಕಾಂಕ್ಷಿ ಯೋಜನೆಯನ್ನು ರದ್ದು ಮಾಡಲಾಗಿದೆ. ಈಗ ಜಾರಿಗೊಳಿಸಲಾಗಿರುವ ವಿಬಿ ರಾಮ್‌ಜಿ ಕಾಯ್ದೆ ಅನ್ವಯ ಕೇಂದ್ರವೇ ಉದ್ಯೋಗ ಎಲ್ಲಿ ನೀಡಬೇಕು ಎಂಬುದನ್ನು ನಿರ್ಧರಿಸಬೇಕಿದೆ. ಕೇಂದ್ರದ ನೂತನ ಕಾಯ್ದೆಯಿಂದ ಬಹುತೇಕರು ಉದ್ಯೋಗ ಕಳೆದುಕೊಳ್ಳಲಿದ್ದಾರೆ”ಎಂದು ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...