ದಿನಕ್ಕೆ 14 ಗಂಟೆ ಕೆಲಸಕ್ಕೆ ಕರ್ನಾಟಕ ಐಟಿ ಕಂಪನಿಗಳಿಂದ ಪ್ರಸ್ತಾಪ; ಉದ್ಯೋಗಿಗಳಿಂದ ಆಕ್ರೋಶ

Date:

ಕರ್ನಾಟಕದ ಐಟಿ ಕಂಪನಿಗಳು ತಮ್ಮ ಉದ್ಯೋಗಿಗಳಿಂದ 14 ಗಂಟೆ ಕೆಲಸ ನಿರ್ವಹಿಸುವ ನೂತನ ಪ್ರಸ್ತಾಪವನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದೆ. ಕಂಪನಿಗಳ ಈ ನಡೆಗೆ ಕಾರ್ಮಿಕ ಸಂಘಗಳಿಂದ ಭಾರಿ ವಿರೋಧ ವ್ಯಕ್ತವಾಗಿದ್ದು, ಇದೊಂದು ಅಮಾನವೀಯ ನಡೆಯಾಗಿದೆ. ಇದರಿಂದ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ಅಲ್ಲದೆ ಉದ್ಯೋಗ ಕಡಿತಗೊಳಿಸುವ ಕಾರಣದಿಂದ ಈ ಯೋಜನೆ ಜಾರಿಗೊಳಿಸಲಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೂಲಗಳ ಪ್ರಕಾರ 1961ರ ಕರ್ನಾಟಕ ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆಯನ್ವಯ ರಾಜ್ಯ ಸರ್ಕಾರವು ತಿದ್ದುಪಡಿಯನ್ನು ಜಾರಿಗೊಳಿಸಲು ಮುಂದಾಗಿದೆ. ಈ ತಿದ್ದುಪಡಿಯಲ್ಲಿ ಐಟಿ ಕಂಪನಿಗಳು ದಿನಕ್ಕೆ 14 ಗಂಟೆ ಕಾರ್ಯನಿರ್ವಹಿಸುವ(12 ಗಂಟೆ ಕೆಲಸ ಹಾಗೂ 2 ಗಂಟೆ ಹೆಚ್ಚುವರಿ ಕೆಲಸ) ಪ್ರಸ್ತಾಪವನ್ನು ಸೇರಿಸಲು ಉದ್ದೇಶಿಸಿದೆ.

ಪ್ರಸ್ತುತ ಕಾರ್ಮಿಕ ಕಾನೂನಿನ ಅನ್ವಯ ಹೆಚ್ಚುವರಿ ಒಂದು ಗಂಟೆ ಒಳಗೊಂಡು 9 ಗಂಟೆಗಳ ಕಾಲ ಕೆಲಸ ನಿರ್ವಹಿಸಲು ಅನುಮತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿಯ ‘ಭಗವಂತ’ನಿಗೇ ಎಚ್ಚರಿಕೆ ಕೊಟ್ಟರೆ ಭಾಗವತ್?

ಐಟಿ ವಲಯದ ನೂತನ ಪ್ರಸ್ತಾಪವು, “ಐಟಿ/ಐಟಿಇಎಸ್/ಬಿಪಿಒ ವಲಯಗಳಲ್ಲಿ ದಿನಕ್ಕೆ 12 ಗಂಟೆಗಳಿಗೂ ಹೆಚ್ಚು ಸಮಯ ಹಾಗೂ ನಿರಂತರ ಮೂರು ನಿರಂತರ ತಿಂಗಳುಗಳಲ್ಲಿ 125 ಗಂಟೆಗಳು ಮೀರಬಾರದು” ಎಂದು ತಿಳಿಸಲಾಗಿದೆ.

ಐಟಿ ಕಂಪನಿಗಳ ಪ್ರಸ್ತಾಪದ ಬಗ್ಗೆ ರಾಜ್ಯ ಸರ್ಕಾರ ಚರ್ಚಿಸಿ ಶೀಘ್ರದಲ್ಲೆ ಮುಂದಿನ ತೀರ್ಮಾನ ಕೈಗೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ. ಈ ಪ್ರಸ್ತಾಪವು ಸಂಪುಟದಲ್ಲಿ ಚರ್ಚೆಯಾಗುವ ಸಂಭವವಿದೆ.

ರಾಜ್ಯ ಐಟಿ ಕಂಪನಿಗಳ 14 ಗಂಟೆ ಕೆಲಸದ ಪ್ರಸ್ತಾಪಕ್ಕೆ ಕರ್ನಾಟಕ ರಾಜ್ಯ ಐಟಿ/ಐಟಿಇಎಸ್ ಉದ್ಯೋಗಿಗಳ ಸಂಘ(ಕೆಐಟಿಯು) ಭಾರಿ ವಿರೋಧ ವ್ಯಕ್ತಪಡಿಸಿದೆ. ಈ ತಿದ್ದುಪಡಿಯು ಪ್ರಸ್ತುತ ಮೂರು ಪಾಳಿಗಳಲ್ಲಿರುವ ಪದ್ಧತಿಯ ಬದಲಿಗೆ ಎರಡು ಪದ್ಧತಿಯನ್ನು ಅನುಮತಿಸುವುದಾಗಿದೆ. ಇದರಿಂದ ಮೂರನೇ ಒಂದು ಭಾಗದಷ್ಟು ಕಾರ್ಮಿಕರನ್ನು ವಜಾಗೊಳಿಸುವ ಹುನ್ನಾರವಾಗಿದೆ ಎಂದು ಕೆಐಟಿಯು ತಿಳಿಸಿದೆ.

ಕೆಸಿಸಿಐ ವರದಿಯ ಪ್ರಕಾರ ಐಟಿ ವಲಯದ ಶೇ.45 ರಷ್ಟು ಉದ್ಯೋಗಿಗಳು ಒತ್ತಡದಂತ ಮಾನಸಿಕ ಸಮಸ್ಯೆಗಳನ್ನು ಅನುಭವಿಸುತ್ತಿದ್ದಾರೆ. ಶೇ.55 ರಷ್ಟು ಮಂದಿ ದೈಹಿಕ ಸಮಸ್ಯೆಗಳಿಗೆ ತುತ್ತಾಗುತ್ತಿದ್ದಾರೆ. ಈಗ ಜಾರಿಗೆ ತರಲು ಹೊರಟಿರುವ ತಿದ್ದುಪಡಿ ಉದ್ಯೋಗಿಗಳನ್ನು ಮತ್ತಷ್ಟು ಆಘಾತಕ್ಕೆ ದೂಡುತ್ತದೆ ಎಂದು ಕೆಐಟಿಯು ತಿಳಿಸಿದೆ.

ಕೆಐಟಿಯು ಪತ್ರಿಕಾ ಪ್ರಕಟಣೆ: KITU Press Release _ 14hrWorkDay

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...