ಕ್ರೀಡಾ ಸಾಹಿತ್ಯಕ್ಕೆ ಕೇಶವಮೂರ್ತಿಯವರ ಕೊಡುಗೆ ಅನನ್ಯ: ಬಿ.ಎಸ್. ಚಂದ್ರಶೇಖರ್

Date:

ವಿಶ್ವಮಾನ್ಯ ಕ್ರಿಕೆಟ್ ಅಂಕಿ ಅಂಶ ತಜ್ಞ ಚನ್ನಗಿರಿ ಕೇಶವಮೂರ್ತಿ ಅವರು ಕ್ರಿಕೆಟ್ ಕುರಿತು ಪುಸ್ತಕಗಳ ರಚನೆ ಮಾಡಿರುವುದು ಕ್ರೀಡಾ ಸಾಹಿತ್ಯಕ್ಕೆ ಅನನ್ಯ ಕೊಡುಗೆಗಳಾಗಿವೆ ಎಂದು ವಿಶ್ವ ವಿಖ್ಯಾತ ಕ್ರಿಕೆಟ್‌ನ ಸ್ಪಿನ್ ಮಾಂತ್ರಿಕ ಬಿ.ಎಸ್. ಚಂದ್ರಶೇಖರ್ ತಿಳಿಸಿದರು.

ಚನ್ನಗಿರಿ ಕೇಶವಮೂರ್ತಿ ಅವರ ಜೀವನ ಸಾಧನೆಯ ‘ಸಾಹಿತ್ಯವೇ ಹಸಿರು ಕ್ರಿಕೆಟೇ ಉಸಿರು’ ಯಶೋಗಾಥೆ ಪುಸ್ತಕವನ್ನು ಬಿ.ಎಸ್. ಚಂದ್ರಶೇಖರ್ ಅವರು ಜಯನಗರದ ತಮ್ಮ ಸ್ವಗೃಹದಲ್ಲಿ ಭಾನುವಾರ ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದರು.

ಚನ್ನಗಿರಿ ಕೇಶವಮೂರ್ತಿ ಅವರ ಸಾಹಿತ್ಯ ಮತ್ತು ಕ್ರಿಕೆಟ್ ಸೇವೆ ಮಾದರಿಯಾಗಿದ್ದು, ಅವರೊಬ್ಬ ಶ್ರೇಷ್ಠ ಕ್ರಿಕೆಟ್ ಅಂಕಿ ಅಂಶ ತಜ್ಞರಾಗಿರುವುದು ನಮ್ಮ ಕರ್ನಾಟಕದ ಹೆಮ್ಮೆ ಎಂದು ಅವರು ಪ್ರಶಂಸಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೇಶವಮೂರ್ತಿ ಕುರಿತ ‘ಸಾಹಿತ್ಯವೇ ಹಸಿರು ಕ್ರಿಕೆಟೇ ಉಸಿರು’ ಪುಸ್ತಕ ಸಾಹಿತ್ಯ ಹಾಗೂ ಕ್ರಿಕೆಟ್ ಆಸಕ್ತರಿಗೆ ಮಾರ್ಗದರ್ಶಿಯಾಗಿದೆ ಎಂದು ಅವರು ತಿಳಿಸಿದರು.

ಪತ್ತೇದಾರಿ ಕಾದಂಬರಿಗಳನ್ನೂ ಬರೆದಿರುವ ಕೇಶವಮೂರ್ತಿ ಅವರು ಕ್ರಿಕೆಟ್ ಕುರಿತು ಪುಸ್ತಕಗಳ ರಚನೆ ಮಾಡಿರುವುದು ಕ್ರೀಡಾ ಸಾಹಿತ್ಯಕ್ಕೆ ಅನನ್ಯ ಕೊಡುಗೆಗಳಾಗಿವೆ ಎಂದು ಸಂಧ್ಯಾ ಚಂದ್ರಶೇಖರ್ ಹೇಳಿದರು.

85ರ ಇಳಿವಯಸ್ಸಿನಲ್ಲೂ ಚನ್ನಗಿರಿ ಕೇಶವಮೂರ್ತಿ ಅವರು ಇವತ್ತಿಗೂ ಕ್ರಿಕೆಟ್ ಅಂಕಿ ಅಂಶ ದಾಖಲು ಮಾಡುತ್ತಿರುವುದು ಅಪರೂಪ ಎಂದು ಚಂದ್ರಶೇಖರ್ ದಂಪತಿಗಳು ಶುಭ ಹಾರೈಸಿದರು.

ಪುಸ್ತಕದ ಸಂಪಾದಕ ಕಗ್ಗೆರೆ ಪ್ರಕಾಶ್, ಸಿಕೆಎಂ ಮಗ ಸಂಜಯ್ ಚನ್ನಗಿರಿ, ಮಗಳು ಸವಿತಾ ಉಪಸ್ಥಿತರಿದ್ದರು.

ಕಗ್ಗೆರೆ ಪ್ರಕಾಶ್
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...