ಕೇತಗಾನಹಳ್ಳಿ ಭೂ ಹಗರಣ: ನ್ಯಾಯಾಂಗ ನಿಂದನೆ ಅರ್ಜಿಯಲ್ಲಿ ಎಚ್‌ ಡಿ ಕುಮಾರಸ್ವಾಮಿಯನ್ನು ಆರೋಪಿಯಾಗಿಸಲು ಹೈಕೋರ್ಟ್‌ ನಿರ್ದೇಶನ

Date:

ರಾಮನಗರ ಜಿಲ್ಲೆ ಬಿಡದಿ ಹೋಬಳಿಯ ಕೇತಗಾನಹಳ್ಳಿಯಲ್ಲಿ ಒತ್ತುವರಿ ತೆರವು ಸಂಬಂಧ ದಾಖಲಾಗಿರುವ ನ್ಯಾಯಾಂಗ ನಿಂದನೆ ಅರ್ಜಿಯಲ್ಲಿ ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಅವರನ್ನು ಆರೋಪಿಯನ್ನಾಗಿಸಿ, ಅರ್ಜಿಗೆ ತಿದ್ದುಪಡಿ ಮಾಡಲು ಕರ್ನಾಟಕ ಹೈಕೋರ್ಟ್‌ ಗುರುವಾರ ಸಮಾಜ ಪರಿವರ್ತನಾ ಸಮುದಾಯಕ್ಕೆ ನಿರ್ದೇಶಿಸಿದೆ.

ಕುಮಾರಸ್ವಾಮಿ ಅವರ ಅರ್ಜಿ ಇತ್ಯರ್ಥಪಡಿಸುವಾಗ ಸುಪ್ರೀಂ ಕೋರ್ಟ್‌ ಮಾಡಿರುವ ಆದೇಶದ ಅನ್ವಯ ನ್ಯಾಯಮೂರ್ತಿಗಳಾದ ಕೆ ಸೋಮಶೇಖರ್‌ ಮತ್ತು ಕೆ ವೆಂಕಟೇಶ್‌ ನಾಯ್ಕ್‌ ಅವರ ವಿಭಾಗೀಯ ಪೀಠವು ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿರುವ ಸಮಾಜ ಪರಿವರ್ತನಾ ಸಮುದಾಯದ ಪರ ಹಿರಿಯ ವಕೀಲ ಎಸ್‌ ಬಸವರಾಜು ಅವರಿಗೆ ಕುಮಾರಸ್ವಾಮಿ ಅವರನ್ನು ಮೂರನೇ ಆರೋಪಿಯನ್ನಾಗಿಸಿ ತಿದ್ದುಪಡಿ ಮಾಡುವಂತೆ ನಿರ್ದೇಶಿಸಿತು. ಅಲ್ಲದೇ, ಕುಮಾರಸ್ವಾಮಿ ಪರ ಹಿರಿಯ ವಕೀಲ ಉದಯ್‌ ಹೊಳ್ಳ ಅವರಿಗೆ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಆದೇಶಿಸಿದ್ದು, ಆನಂತರ ಪ್ರತ್ಯುತ್ತರ ದಾಖಲಿಸಲು ಬಸವರಾಜು ಅವರಿಗೆ ಅನುಮತಿಸಿ, ವಿಚಾರಣೆಯನ್ನು ಜೂನ್‌ 10ಕ್ಕೆ ಮುಂದೂಡಿತು.

ಇದಕ್ಕೂ ಮುನ್ನ, ಕುಮಾರಸ್ವಾಮಿ ಪ್ರತಿನಿಧಿಸಿದ್ದ ಉದಯ್‌ ಹೊಳ್ಳ ಅವರು “ಲೋಕಾಯುಕ್ತ ವರದಿಯಲ್ಲಿ ಕುಮಾರಸ್ವಾಮಿ ಅವರನ್ನು ಆರೋಪಮುಕ್ತ ಮಾಡಲಾಗಿದೆ. ವಿಭಾಗೀಯ ಪೀಠದ ಮುಂದಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲೂ ಕುಮಾರಸ್ವಾಮಿಯನ್ನು ಪ್ರತಿವಾದಿಯನ್ನಾಗಿಸಲಾಗಿಲ್ಲ. ನ್ಯಾಯಾಂಗ ನಿಂದನೆ ಅರ್ಜಿಯಲ್ಲೂ ಅವರನ್ನು ಆರೋಪಿಯನ್ನಾಗಿಸಲಾಗಿಲ್ಲ. ತಮ್ಮ ವಾದವನ್ನು ಮಂಡಿಸಲು ಅವಕಾಶವೇ ಸಿಕ್ಕಿಲ್ಲ. ಹೀಗಾಗಿ, ಹಾಲಿ ಅರ್ಜಿಯಲ್ಲಿ ತಮ್ಮನ್ನು ಆರೋಪಿಯನ್ನಾಗಿಸಲು ಕೋರಿ ಅರ್ಜಿ ಸಲ್ಲಿಸಲಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದೇಶವನ್ನಾಳುವ ಪ್ರಧಾನಿ ಮೋದಿ ಬಡ ಮುಸ್ಲಿಮರ ಪರವೇ?

ಬಸವರಾಜು ಅವರು “ವಿಭಾಗೀಯ ಪೀಠದ ಮುಂದಿದ್ದ ಪಿಐಎಲ್‌ನಲ್ಲಿ ಹಲವು ಮಂದಿಯನ್ನು ಪ್ರತಿವಾದಿಗಳನ್ನಾಗಿಸಲಾಗಿತ್ತು. ನ್ಯಾಯಾಲಯದ ಸೂಚನೆ ಆಧರಿಸಿ ಎಲ್ಲರನ್ನೂ ಕೈಬಿಡಲಾಗಿತ್ತು. ಆನಂತರ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸುವಾಗ ರಿಜಿಸ್ಟ್ರಿ ಆಕ್ಷೇಪಿಸಿದ್ದರಿಂದ ಕುಮಾರಸ್ವಾಮಿ ಮತ್ತಿತರರ ಹೆಸರನ್ನು ಕೈಬಿಡಲಾಗಿತ್ತೇ ವಿನಾ ಉದ್ದೇಶಪೂರ್ವಕವಾಗಿಯಲ್ಲ. ಆರೋಪಿಯಾಗಿ ಕುಮಾರಸ್ವಾಮಿ ಅವರು ಪ್ರಕರಣದಲ್ಲಿ ಭಾಗಿಯಾಗುವುದು ಸಮಂಜಸವಾಗಿದೆ” ಎಂದು ವಿವರಿಸಿದರು.

ಮಾರ್ಚ್‌ 28ರಂದು ಸುಪ್ರೀಂ ಕೋರ್ಟ್‌ ನ್ಯಾಯಾಂಗ ನಿಂದನೆ ಅರ್ಜಿ ಸಂಬಂಧ ಹೈಕೋರ್ಟ್‌ ಎಡತಾಕಲು ಕುಮಾರಸ್ವಾಮಿ ಅವರಿಗೆ ಸೂಚಿಸಿತ್ತು. ಇದರ ಆಧಾರದಲ್ಲಿ ಕುಮಾರಸ್ವಾಮಿ ಅವರು ಹೈಕೋರ್ಟ್‌ಗೆ ಮಧ್ಯಂತರ ಅರ್ಜಿ ಸಲ್ಲಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲ್ಯಾಣ ಕರ್ನಾಟಕ | 3 ವರ್ಷ, 5,100 ಪ್ರಕರಣ; ಮಹಿಳೆಯರ ನಾಪತ್ತೆ ಹಿಂದೆ ಕಳ್ಳಸಾಗಣೆಯ ಕರಿನೆರಳು?!

ನಾಪತ್ತೆಯಾದ ಪ್ರತಿ ಜೀವವೂ ಮರಳಿ ತನ್ನ ಮನೆ ಸೇರುವಂತಾಗಲು ಮತ್ತು ಮುಂದಿನ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಉದ್ದಿಮೆ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ರಸರೆಕ್ಷನ್: ಇಂದ್ರಿಯಗಳ ಮೂಲಕ ಒಂದು ಶತಮಾನದ ಸಿನೆಮಾ ಪಯಣ ಬಿಡಿಸಿಡುವ ಚಿತ್ರ

'ರಸರೆಕ್ಷನ್' ಸಿನಿಮಾ ಅಂತಿಮವಾಗಿ ಹೇಳುವುದೇನೆಂದರೆ ಬದುಕು ಎಷ್ಟೇ ದೀರ್ಘವಾಗಿದ್ದರೂ, ಕನಸುಗಳಿಲ್ಲದಿದ್ದರೆ ಅದು...

ಹಾಸನ ಮಣ್ಣಿನ ಹೆಣ್ಣು ದನಿಗಳು | ಉಡುಪು ಉದ್ಯಮದಲ್ಲಿ ಜಿಲ್ಲೆಯ ಕುಶಲೆಯರು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...