ಕೆಐಎ | 3 ಪ್ರತ್ಯೇಕ ಪ್ರಕರಣಗಳಲ್ಲಿ ₹6.8 ಕೋಟಿ ಮೌಲ್ಯದ 9.3 ಕೆಜಿ ಚಿನ್ನ ವಶ; 6 ಮಂದಿ ಬಂಧನ

Date:

ರಾಜ್ಯ ರಾಜಧಾನಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳ್ಳ ಸಾಗಾಣೆ ಮಾಡಲಾಗುತ್ತಿದ್ದ ಪ್ರತ್ಯೇಕ ಮೂರು ಪ್ರಕರಣಗಳಲ್ಲಿ ಕಸ್ಟಮ್ಸ್‌ ಅಧಿಕಾರಿಗಳು ಬರೋಬ್ಬರಿ ₹6.8 ಕೋಟಿ ಮೌಲ್ಯದ 9.3 ಕೆಜಿ ಚಿನ್ನವನ್ನು ವಶಪಡಿಸಿಕೊಂಡು, 6 ಮಂದಿಯನ್ನು ಬಂಧಿಸಿದ್ದಾರೆ.

ಬಂಧಿತರ ಪೈಕಿ ಇಬ್ಬರು ತಮಿಳುನಾಡು ಮತ್ತು ನಾಲ್ವರು ಉತ್ತರ ಭಾರತದವರು ಎಂದು ಗುರುತಿಸಲಾಗಿದೆ.

ಮೊದಲ ಪ್ರಕರಣದಲ್ಲಿ, ಬೆಂಗಳೂರು ಏರ್​ಪೋರ್ಟ್​ಗೆ ಮಲೇಷ್ಯಾದಿಂದ ಬಂದಿಳಿದ ನಾಲ್ವರು ಪ್ರಯಾಣಿಕರನ್ನು ತಪಸಾಣೆ ನಡೆಸಿದಾಗ ಒಳ ಉಡುಪಿನಲ್ಲಿ ಅಡಗಿಸಿಟ್ಟುಕೊಂಡಿದ್ದ ಪೇಸ್ಟ್ ರೂಪದ 2.632 ಕೆ.ಜಿ ಚಿನ್ನ ಪತ್ತೆಯಾಗಿತ್ತು. ಚಿನ್ನವನ್ನು ವಶಕ್ಕೆ ಪಡೆದ ಕಸ್ಟಮ್ಸ್‌ ಅಧಿಕಾರಿಗಳು ನಾಲ್ವರನ್ನು ಬಂಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2.632 ಕೆ.ಜಿ ಚಿನ್ನದ ಮೌಲ್ಯ ಬರೋಬ್ಬರಿ ₹1.42 ಕೋಟಿ ಆಗಿದೆ. ಚಿನ್ನದ ಜತೆಗೆ ₹73.7 ಲಕ್ಷ ಮೌಲ್ಯದ 3,510 ಇ-ಸಿಗರೇಟ್​​ಗಳನ್ನೂ ವಶಪಡಿಸಿಕೊಳ್ಳಲಾಗಿದೆ.

ಇನ್ನು ಎರಡನೇ ಪ್ರಕರಣದಲ್ಲಿ, ಮಲೇಶಿಯಾದ ಕೌಲಲಾಂಪುರದಿಂದ ಬೆಂಗಳೂರಿಗೆ ಬಂದ ಇಬ್ಬರನ್ನು ಬಂಧಿಸಿ, ಆರೋಪಗಳಿಂದ 2.854 ಕೆಜಿ ಚಿನ್ನ ವಶಪಡಿಸಿಕೊಂಡಿದ್ದಾರೆ. ಈ ಆರೋಪಿಗಳು ಚಿನ್ನದ ಪೇಸ್ಟ್ ಅನ್ನು ತಮ್ಮ ಸಾಕ್ಸ್​ನಲ್ಲಿ ಅಡಗಿಸಿಟ್ಟುಕೊಂಡಿದ್ದರು. ಈ ಚಿನ್ನದ ಮೌಲ್ಯ ₹1.55 ಕೋಟಿ ರೂಪಾಯಿ ಎಂದು ತಿಳಿದು ಬಂದಿದೆ.

ಈ ಸುದ್ದಿ ಓದಿದ್ದೀರಾ? ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹೆಸರು ಹೇಳಿ ಜನರಿಗೆ ಕೋಟ್ಯಂತರ ರೂ. ವಂಚನೆ: ದೂರು ದಾಖಲು

3ನೇ ಪ್ರಕರಣದಲ್ಲಿ ಶಾರ್ಜಾದಿಂದ ಬಂದ ವಿಮಾನದಲ್ಲಿ ಲಗೇಜ್ ಕ್ಯಾಬಿನ್​ನಲ್ಲಿ ಅಡಗಿಸಿಟ್ಟಿದ್ದ 3.75 ಕೆಜಿ ಚಿನ್ನವನ್ನು ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ. ಲಗೇಜ್ ಪರಿಶೀಲಿಸುತ್ತಿದ್ದ ಅವಧಿಯಲ್ಲಿ ಈ ಚಿನ್ನವನ್ನು ಕ್ಯಾಬಿನ್​ನಲ್ಲೇ ಬಿಟ್ಟು ಹೋಗಿರುವುದು ಬೆಳಕಿಗೆ ಬಂದಿದೆ. 3.75 ಕೆಜಿ ಗಟ್ಟಿ ಚಿನ್ನ ಪತ್ತೆಯಾಗಿದ್ದು, ಇದರ ವಾರಸುದಾರರ ಪತ್ತೆ ಕಾರ್ಯ ನಡೆಯುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...