ಕೆಐಎ | ಈ ತಿಂಗಳು ಅಂತ್ಯದೊಳಗೆ ಇಂದಿರಾ ಕ್ಯಾಂಟೀನ್ ತಲೆ ಎತ್ತುವ ಸಾಧ್ಯತೆ?

Date:

ದೇಶದಲ್ಲೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ವಿಮಾನ ನಿಲ್ದಾಣಗಳ ಪೈಕಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವೂ ಒಂದು. ಈ ವಿಮಾನ ನಿಲ್ದಾಣದಲ್ಲಿ ಹೋಟೆಲ್ ಮತ್ತು ರೆಸ್ಟೋರೆಂಟ್​ಗಳಿವೆ. ಆದರೆ, ಇಲ್ಲಿ ದೊರಕುವ ಆಹಾರಗಳ ದರ ಜನಸಾಮಾನ್ಯರಿಗೆ ನಿಲುಕದ್ದಾಗಿವೆ. ದುಬಾರಿ ಬೆಲೆಯ ಆಹಾರವನ್ನು ಬಡ ಕಾರ್ಮಿಕರು ಕೊಳ್ಳಲು ಅಸಾಧ್ಯವಾಗಿದೆ. ಕ್ಯಾಬ್‌ ಚಾಲಕರಿಗೂ ಇದು ಕಷ್ಟವಾಗಿದೆ. ಈ ಹಿನ್ನೆಲೆ, ಕಡಿಮೆ ಬೆಲೆಯಲ್ಲಿ ಗುಣಮಟ್ಟದ ಆಹಾರ ಒದಗಿಸಲು ರಾಜ್ಯ ಸರ್ಕಾರ ಕೆಐಎನಲ್ಲಿ 2 ಇಂದಿರಾ ಕ್ಯಾಂಟೀನ್​ಗಳನ್ನು ತೆರೆಯಲು ತೀರ್ಮಾನಿಸಿದೆ. ಈ ತಿಂಗಳು ಅಂತ್ಯದೊಳಗೆ ಇಂದಿರಾ ಕ್ಯಾಂಟೀನ್ ತಲೆ ಎತ್ತುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

ವಿಮಾನ ನಿಲ್ದಾಣದ ಸಿಬ್ಬಂದಿ, ಚಾಲಕರು ಮತ್ತು ಕಾರ್ಮಿಕರು ವಿಮಾನ ನಿಲ್ದಾಣದಲ್ಲಿ ಇಂದಿರಾ ಕ್ಯಾಂಟೀನ್ ಪ್ರಾರಂಭಿಸುವಂತೆ ಮನವಿ ಮಾಡಿದ್ದರು. ಕಾರ್ಮಿಕರ ಬೇಡಿಕೆಗೆ ಸ್ಪಂದಿಸಿದ ರಾಜ್ಯ ಸರ್ಕಾರ ಇಂದಿರಾ ಕ್ಯಾಂಟೀನ್ ಸ್ಥಾಪನೆಗೆ ಮುಂದಾಗಿದೆ. ಟರ್ಮಿನಲ್ -1ನ ಮುಂಭಾಗದ ಪಾರ್ಕಿಂಗ್ ಏರಿಯಾದಲ್ಲಿ ಇಂದಿರಾ ಕ್ಯಾಂಟೀನ್ ಪ್ರಾರಂಭಿಸಲಾಗುತ್ತಿದೆ.

“ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಅವರ ನಿರ್ದೇಶನದಂತೆ ದೇವನಹಳ್ಳಿ ವಿಮಾನ ನಿಲ್ದಾಣದ ಆವರಣದಲ್ಲಿ ಇಂದಿರಾ ಕ್ಯಾಂಟೀನ್ ಸ್ಥಾಪನೆ ಕಾರ್ಯವನ್ನು ತೀವ್ರಗತಿಗೊಳಿಸಲಾಗಿದ್ದು, ಟೆಂಡರ್ ಕರೆಯಲಾಗಿದೆ” ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆರೋಗ್ಯಾಧಿಕಾರಿಗಳು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಇಂದಿರಾ ಕ್ಯಾಂಟೀನ್‌ನಲ್ಲಿ ಪ್ರತಿದಿನ ಸುಮಾರು 2,000 ಮಂದಿ ಉಪಾಹಾರ, ಮಧ್ಯಾಹ್ನ ಮತ್ತು ರಾತ್ರಿಯ ಊಟವನ್ನು ಸೇವನೆ ಮಾಡಬಹುದು ಎಂದು ಮುಖ್ಯ ಆರೋಗ್ಯ ಅಧಿಕಾರಿ ಸಿರಾಜ್ ಅಹ್ಮದ್ ಮದನಿ ಅವರು ಹೇಳಿದ್ದಾರೆ.

ವಿಮಾನ ನಿಲ್ದಾಣದ ಪಾರ್ಕಿಂಗ್ ಏರಿಯಾ ಸಂಖ್ಯೆ 7ರಲ್ಲಿ ಇಂದಿರಾ ಕ್ಯಾಂಟೀನ್ ಅನ್ನು ಸ್ಥಾಪಿಸಲಾಗುತ್ತಿದೆ. ಇದರಿಂದ ಕೆಳ, ಮಧ್ಯಮ ವರ್ಗದವರು ಅಥವಾ ದುಬಾರಿ ಆಹಾರವನ್ನು ಪಡೆಯಲು ಸಾಧ್ಯವಾಗದ ಕಾರ್ಮಿಕರಿಗೆ ಸಹಾಯವಾಗಲಿದೆ. ಕ್ಯಾಂಟೀನ್‌ನಲ್ಲಿ ಅಗ್ಗದ ದರದಲ್ಲಿ ಆರೋಗ್ಯಕರ ಆಹಾರವನ್ನು ಸೇವನೆ ಮಾಡಬಹುದಾಗಿದೆ.

ಈ ಸುದ್ದಿ ಓದಿದ್ದೀರಾ? ಜಯದೇವ ಆಸ್ಪತ್ರೆ ನಿರ್ದೇಶಕ ಅವಧಿ ಅಂತ್ಯ: ರಾಜಕೀಯದಲ್ಲಿ ಆಸಕ್ತಿಯಿಲ್ಲ ಎಂದ ಡಾ.ಮಂಜುನಾಥ್

ಚಾಲಕರ ಮನವಿಗೆ ಸ್ಪಂದಿಸಿದ ಸರ್ಕಾರ

2023ರ ಜುಲೈ 27ರಂದು ಕ್ಯಾಬ್ ಚಾಲಕರು ಬಂದ್​ಗೆ ಕರೆ ನೀಡಿದ್ದರು. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಮಧ್ಯಸ್ಥಿಕೆಯಿಂದ ಬಂದ್ ಹಿಂಪಡೆಯಲಾಗಿತ್ತು. 2023ರ ಜುಲೈ 24 ರಂದು ಚಾಲಕರ ಸಂಘಗಳ ಒಕ್ಕೂಟದೊಂದಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಭೆ ನಡೆಸಿದ್ದರು. ಸಚಿವರ ಭರವಸೆ ಮೇರೆಗೆ ಬಂದ್ ವಾಪಸ್ ಪಡೆಯಲಾಗಿತ್ತು. ಈ ಸಂದರ್ಭದಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಬೇಕೆಂದು ಮನವಿ ಸಲ್ಲಿಸಿದ್ದರು.

ಪ್ರತಿದಿನ ಸಾವಿರಾರು ಚಾಲಕರು ವಿಮಾನ ನಿಲ್ದಾಣಕ್ಕೆ ಬರುತ್ತಾರೆ. ಸಾವಿರಾರು ಜನರೂ ಸಹ ಆಗಮಿಸುತ್ತಾರೆ. ಈಗ ಇರುವ ಹೋಟೆಲ್​ಗಳಲ್ಲಿ ಎಲ್ಲರೂ ಊಟ ತಿಂಡಿ ಮಾಡಲು ಸಾಧ್ಯವಿಲ್ಲ. ಬಡ ಮತ್ತು ಮಧ್ಯಮ ವರ್ಗದ ಜನರ ಹಿತದೃಷ್ಟಿಯಿಂದ ಇಂದಿರಾ ಕ್ಯಾಂಟೀನ್ ಆರಂಭಿಸುವಂತೆ ಚಾಲಕರು ಬೇಡಿಕೆ ಇಟ್ಟಿದ್ದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ್ದ ಸಚಿವರು, ಕ್ಯಾಂಟೀನ್ ತೆರೆಯುವ ಭರವಸೆ ನೀಡಿದ್ದರು.

ವಿಮಾನ ನಿಲ್ದಾಣದ ಆವರಣದಲ್ಲಿ ಕೈಗೆಟುಕುವ ದರದ ಆಹಾರಕ್ಕಾಗಿ ಓಲಾ, ಉಬರ್ ಮತ್ತು ಇತರ ಖಾಸಗಿ ಟ್ಯಾಕ್ಸಿ ಚಾಲಕರು ಪರದಾಡುತ್ತಿರುತ್ತಾರೆ. ಇದನ್ನು ಗಮನದಲ್ಲಿಟ್ಟುಕೊಂಡು ಈ ಉಪಕ್ರಮವನ್ನು ಕೈಗೊಳ್ಳುವಂತೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಬಿಬಿಎಂಪಿ ಮುಂದೆ ಪ್ರಸ್ತಾಪವಿಟ್ಟಿದ್ದರು. ಇದಕ್ಕೆ ಡಿ.ಕೆ ಶಿವಕುಮಾರ್ ಅವರು ಸ್ಪಂದನೆ ನೀಡಿದ್ದರು. ಇದರಂತೆ ಇಂದಿರಾ ಕ್ಯಾಂಟೀನ್ ಅನ್ನು ವಿಮಾನ ನಿಲ್ದಾಣದಲ್ಲಿ ಸ್ಥಾಪನೆ ಮಾಡಲಾಗುತ್ತಿದೆ.

ಹೊಸ ಆಹಾರ ಪಟ್ಟಿ

ಇಂದಿರಾ ಕ್ಯಾಂಟೀನ್​ಗಳಲ್ಲಿ ನೀಡಲಾಗುತ್ತಿರುವ ಆಹಾರಗಳ ಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದ್ದು, ಹೊಸ ಆಹಾರವನ್ನು ಪರಿಚಯಿಸಲು ಸರ್ಕಾರ ತೀರ್ಮಾನ ಮಾಡಿದೆ.

ಹೊಸ ಮೆನುವಿನಲ್ಲಿ ರಾಗಿ ಮುದ್ದೆ, ಇಡ್ಲಿ, ಮಂಗಳೂರು ಬನ್ಸ್, ಬಿಸಿ ಬೇಳೆ ಬಾತ್, ಪಲಾವ್, ಖಾರಬಾತ್, ಪೊಂಗಲ್, ಬ್ರೆಡ್ ಜಾಮ್, ಚೌಚೌ ಬಾತ್ ಸೇರಿದಂತೆ ಹಲವು ಖಾದ್ಯಗಳು ನಿಗದಿ ಪಡಿಸಲಾದ ದಿನಗಳಲ್ಲಿ ಲಭ್ಯವಾಗಲಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...