ಅಪಹರಣ ಪ್ರಕರಣ | ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು​​; ಹಾಸನಕ್ಕೆ ತೆರಳದಂತೆ ಸೂಚನೆ

Date:

ಪ್ರಜ್ವಲ್ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾರೆ ಎನ್ನಲಾದ ಸಂತ್ರಸ್ತೆಯನ್ನು ಅಪಹರಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ಅವರಿಗೆ ಹೈಕೋರ್ಟ್‌ ನಿರೀಕ್ಷಣಾ ಜಾಮೀನು ನೀಡಿದೆ.

ಕೆ.ಆರ್.ನಗರದ ನಿವಾಸಿಯ ಅಪಹರಣ ಪ್ರಕರಣದಲ್ಲಿ ಆರೋಪಿಯಾಗಿರುವ ಭವಾನಿ ರೇವಣ್ಣ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿರುವ ಹೈಕೋರ್ಟ್‌, ನಿರೀಕ್ಷಣಾ ಜಾಮೀನು ನೀಡಿದೆ. ಜೊತೆಗೆ, ಭವಾನಿ ರೇವಣ್ಣ ಅವರು ಮೈಸೂರು, ಹಾಸನ ಜಿಲ್ಲೆ ಪ್ರವೇಶಿಸದಂತೆ ಷರತ್ತು ವಿಧಿಸಿ ಆದೇಶ ಹೊರಡಿಸಿದೆ.

ಪೊಲೀಸರ 85 ಪ್ರಶ್ನೆಗಳಿಗೆ ಭವಾನಿ ರೇವಣ್ಣ ಅವರು ಉತ್ತರಿಸಿದ್ದಾರೆ. ಹೀಗಾಗಿ, ತನಿಖೆಗೆ ಅವರು ಸಹಕರಿಸಿಲ್ಲ ಎಂಬ ವಾದ ಒಪ್ಪಲಾಗುವುದಿಲ್ಲ ಎಂದು ಕೋರ್ಟ್‌ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪೊಲೀಸರಿಗೆ ಬೇಕಾದಂತಹ ಉತ್ತರ ಕೊಡಬೇಕೆಂದಿಲ್ಲ. ಸಂತ್ರಸ್ತ ಮಹಿಳೆಗೆ ಊಟ, ಬಟ್ಟೆ ಕೊಟ್ಟಿಲ್ಲವೆಂಬ ವಾದವನ್ನೂ ಒಪ್ಪಲಾಗುವುದಿಲ್ಲ. ಯಾಕೆಂದರೆ, ಸ್ವತಃ ಸಂತ್ರಸ್ತ ಮಹಿಳೆಯೇ ಭವಾನಿ ರೇವಣ್ಣ ಬಟ್ಟೆ ಊಟ ಕಳುಹಿಸಿದ್ದರೆಂದು ಹೇಳಿದ್ದಾರೆ ಎಂದು ನ್ಯಾ. ಕೃಷ್ಣ ಎಸ್​ ದೀಕ್ಷಿತ್ ಅವರಿದ್ದ ಏಕಸದಸ್ಯ ಪೀಠ ಹೇಳಿದೆ.

ಮೇ 30ರಂದು ಭವಾನಿ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್, ಅವರಿಗೆ ಮಧ್ಯಂತರ ಜಾಮೀನು ನೀಡಿತ್ತು. ಅಲ್ಲದೆ, ಜಾಮೀನು ಅರ್ಜಿಯ ವಿಚಾರಣೆಯ ತೀರ್ಪು ಬರುವವರೆಗೆ ಮಧ್ಯಂತರ ಜಾಮೀನು ಅರ್ಜಿಯ ಅವಧಿಯನ್ನು ಮುಂದುವರಿಸಬೇಕೆಂದು ಸೂಚಿಸಿತ್ತು. ಜೂನ್ 15ರಂದು ಭವಾನಿ ರೇವಣ್ಣನವರ ಜಾಮೀನು ಅರ್ಜಿಯ ವಿಚಾರಣೆಯು ಮುಕ್ತಾಯಗೊಂಡಿದ್ದು, ತೀರ್ಪನ್ನು ಜೂನ್ 18ರಂದು ಪ್ರಕಟಿಸುವುದಾಗಿ ತಿಳಿಸಿತ್ತು. ಇದೀಗ, ಜಾಮೀನು ನೀಡಿ ಆದೇಶ ಹೊರಡಿಸಿದೆ.

ಏನಿದು ಪ್ರಕರಣ?

ಭವಾನಿ ರೇವಣ್ಣನವರ ಪತಿ, ಮಾಜಿ ಸಚಿವ ಎಚ್.ಡಿ. ರೇವಣ್ಣ ಹಾಗೂ ಅವರ ಪುತ್ರ – ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ  ಇಬ್ಬರೂ ತಮಗೆ ಲೈಂಗಿಕ ಕಿರುಕುಳ ನೀಡಿದ್ದರೆಂದು ಕೆಆರ್ ನಗರದ ಮಹಿಳೆಯೊಬ್ಬರು ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು.

ಪ್ರಜ್ವಲ್​ ರೇವಣ್ಣ ಅವರದ್ದು ಅಂತ ಬಿಡುಗಡೆಯಾಗಿರುವ ಅಶ್ಲೀಲ ವಿಡಿಯೋದಲ್ಲಿ ನನ್ನ ತಾಯಿಯ ಚಿತ್ರವೂ ಇದ್ದು, ಇದೀಗ ಅವರು ಕಣ್ಮರೆಯಾಗಿದ್ದಾರೆ ಎಂದು ಮೇ 2ರ ತಡರಾತ್ರಿ ಮೈಸೂರಿನ ಕೆಆರ್​​ ನಗರ ಠಾಣೆಯಲ್ಲಿ ಸಂತ್ರಸ್ತೆ ಪುತ್ರ ದೂರು ನೀಡಿದ್ದರು. ಹೆಚ್​.ಡಿ ರೇವಣ್ಣ, ಭವಾನಿ ರೇವಣ್ಣ ಹಾಗೂ ಭವಾನಿ ರೇವಣ್ಣ ಸಂಬಂಧಿ ಬಾಬು ವಿರುದ್ಧ ದೂರು ದಾಖಲಾಗಿದೆ.

ಸಾಕ್ಷಿ ಹೇಳದಂತೆ ಸಂತ್ರಸ್ತೆಯನ್ನು ತಡೆಯಲು ಅಪಹರಿಸಲಾಗಿದೆ ಎಂಬ ಆರೋಪಗಳು ಕೇಳಿಬಂದಿವೆ. ಈ ಕೆಲಸವನ್ನು ರೇವಣ್ಣನವರೇ ಮಾಡಿಸಿದ್ದಾರೆಂದು ಹೇಳಲಾಗಿತ್ತು. ಅಲ್ಲದೇ, ರೇವಣ್ಣ ಅವರಿಗೆ ಸೇರಿದೆ ಎನ್ನಲಾದ ಫಾರ್ಮ್ ಹೌಸ್ ಒಂದರಲ್ಲಿ ಸಂತ್ರಸ್ಥೆಯನ್ನು ಪೊಲೀಸರು ರಕ್ಷಿಸಿದ್ದರು. ಅಪಹರಣಕ್ಕೆ ಬಳಸಲಾಗಿದ್ದ ಕಾರು ಭವಾನಿ ರೇವಣ್ಣನವರದ್ದು ಎಂದು ತನಿಖೆಯಲ್ಲಿ ತಿಳಿದುಬಂದಿದೆ.

ರೇವಣ್ಣ ಅವರ ಕುಮ್ಮಕ್ಕಿನಿಂದಲೇ ಮಹಿಳೆಯರ ಅಪಹರಣವಾಗಿದೆ. ಜೊತೆಗೆ, ಭವಾನಿ ರೇವಣ್ಣನವರ ಕಾರಿನ ಚಾಲಕ ಅಜಿತ್ ಎಂಬಾತನೂ ಭವಾನಿಯವರ ಸೂಚನೆಯ ಮೇರೆಗೆ ಅಪಹರಣದಲ್ಲಿ ಭಾಗಿಯಾಗಿದ್ದ ಎಂಬ ಆರೋಪಗಳು ಕೇಳಿಬಂದಿದ್ದವು.

ಪ್ರಕರಣದ ತನಿಖೆ ನಡೆಸುತ್ತಿರುವ ಎಸ್​ಐಟಿ ಅಧಿಕಾರಿಗಳು ಈಗಾಗಲೇ ಆರೋಪಿ ಬಾಬು ಅನ್ನು ಬಂಧಿಸಿದ್ದಾರೆ. ಪ್ರಕರಣದ ಮೊದಲ ಆರೋಪಿಯಾಗಿರುವ ಮಾಜಿ ಸಚಿವ ಹೆಚ್​ಡಿ ರೇವಣ್ಣ ಅವರನ್ನು ಎಸ್​ಐಟಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡು, ವಿಚಾರಣೆ ನಡೆಸಿದ್ದರು. ಹೆಚ್​ಡಿ ರೇವಣ್ಣ ಅವರಿಗೆ ಜನಪ್ರತಿನಿಧಿಗಳ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಸದ್ಯ ಹೆಚ್​ಡಿ ರೇವಣ್ಣ ಜಾಮೀನಿನ ಮೇಲೆ ಹೊರಗಡೆ ಇದ್ದಾರೆ.

ಈ ಸುದ್ದಿ ಓದಿದ್ದೀರಾ? ಜೂನ್ 22ರವರೆಗೂ ರಾಜ್ಯದ ಹಲವೆಡೆ ಮಳೆ ಸಾಧ್ಯತೆ; ಹವಾಮಾನ ಇಲಾಖೆ

ಇದೇ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರೂ ಕೂಡ ಎಸ್​ಐಟಿ ಅಧಿಕಾರಿಗಳ ವಿಚಾರಣೆಗೆ ಹಾಜರಾಗಬೇಕು. ಈ ಸಂಬಂಧ ಎಸ್​ಐಟಿ ಭವಾನಿ ರೇವಣ್ಣ ಅವರಿಗೆ ಎರಡೆರಡು ನೋಟಿಸ್​ ನೀಡಿತ್ತು.

ನೋಟಿಸ್​ ನೀಡುತ್ತಿದ್ದಂತೆ ಭವಾನಿ ರೇವಣ್ಣ ಅವರು ವಿಚಾರಣಾ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ಆದರೆ, ನ್ಯಾಯಾಲಯ ನೀರಿಕ್ಷಣಾ ಜಾಮೀನು ಅರ್ಜಿ ತಿರಸ್ಕತಿಸಿತ್ತು. ಹೀಗಾಗಿ, ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು.

ಹೈಕೋರ್ಟ್​​ನ ಏಕ ಸದಸ್ಯ ಪೀಠ ಈ ಹಿಂದೆ ಭವಾನಿ ರೇವಣ್ಣ ಅವರಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿ ಆದೇಶ ಕಾಯ್ದಿರಿಸಿತ್ತು. ಇದೀಗ, ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಭವಾನಿ ರೇವಣ್ಣ ಅವರಿಗೆ ನಿರೀಕ್ಷಣಾ ಜಾಮೀನು ನೀಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...