ಕೆಎಸ್‌ಆರ್‌ಟಿಸಿ | ‘ನಮ್ಮ ಕಾರ್ಗೋ-ಟ್ರಕ್ ಸೇವೆ’ ಯೋಜನೆಗೆ ಚಾಲನೆ ನೀಡಿದ ರಾಮಲಿಂಗಾರೆಡ್ಡಿ

Date:

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ನೂತನವಾಗಿ ನಮ್ಮ ಕಾರ್ಗೋ- ‘ಟ್ರಕ್ ಸೇವೆ’ (ನಿಮ್ಮ ವಿಶ್ವಾಸ – ನಮ್ಮ ಕಾಳಜಿ) ಆರಂಭಿಸಿದ್ದು, ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಯೋಜನೆಗೆ ಚಾಲನೆ ನೀಡಿ 20 ನೂತನ ಟ್ರಕ್‌ಗಳಿಗೆ ಹಸಿರು ನಿಶಾನೆ ತೋರಿದರು.

ಈ ವೇಳೆ ಮಾತನಾಡಿದ ಅವರು, “ಮುಂದಿನ ಒಂದು ತಿಂಗಳಿನಲ್ಲಿ 100 ಟ್ರಕ್‌ಗಳನ್ನು, ಒಂದು ವರ್ಷದೊಳಗಾಗಿ 500 ಟ್ರಕ್‌ಗಳನ್ನು ಸೇರ್ಪಡೆ ಮಾಡಲಾಗುವುದು. ಪ್ರಸಕ್ತ ಪೀಣ್ಯದಲ್ಲಿರುವ ನಿಗಮದ ಬಸವೇಶ್ವರ ಬಸ್ ನಿಲ್ದಾಣವನ್ನು ಈ ನಮ್ಮ ಕಾರ್ಗೋ ಟ್ರಕ್ ಟರ್ಮಿನಲ್ ಆಗಿ ಪರಿವರ್ತನೆ ಮಾಡಲಾಗುವುದು. ಕಾರ್ಯಾಚರಣೆ ಹಾಗೂ ನಿರ್ವಹಣೆಗಾಗಿ ಘಟಕವನ್ನಾಗಿ ಬಳಸಿ, ಬಸ್ ನಿಲ್ದಾಣದಲ್ಲಿರುವ ಸ್ಥಳವನ್ನು ಸರ್ಕಾರಿ ಸಂಸ್ಥೆಗಳಿಗೆ ನೀಡಿ ವಾಣಿಜ್ಯ ಉಪಯೋಗಕ್ಕಾಗಿ ಬಳಸಲಾಗುವುದು” ಎಂದು ತಿಳಿಸಿದರು.

ನಿಗಮವು ಕೆ.ಎಂ.ಎಸ್ ಕೋಚ್ ಬಿಲ್ಡರ್ಸ್ ಪ್ರೈವೆಟ್ ಲಿಮಿಟೆಡ್ ಅವರೊಂದಿಗೆ ಒಡಂಬಡಿಕೆ ಮಾಡಿಕೊಂಡು ಎರಡು ತಿಂಗಳ ಅವಧಿಗೆ ಹಾಗೂ ಎಸ್.ಎಂ ಕಣ್ಣಪ್ಪ ಪ್ರೈವೆಟ್ ಲಿಮಿಟೆಡ್ ರವರಿಗೆ ತನ್ನ ಟ್ರಕ್ ಅನ್ನು ಒಂದು ತಿಂಗಳ ಅವಧಿಗೆ ಬಾಡಿಗೆಗೆ ನೀಡಿ ಸಾರಿಗೆ ವಲಯದಲ್ಲಿ ಮಹತ್ತರ ಪ್ರಗತಿಯ ಹೆಜ್ಜೆ ಇರಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಿಗಮವು ಸಾರ್ವಜನಿಕ ಸಾರಿಗೆಯಲ್ಲಿ ತನ್ನ ವಹಿವಾಟನ್ನು ಮತ್ತಷ್ಟು ಉತ್ತಮಪಡಿಸಲು 2021ರಲ್ಲಿ ನಮ್ಮ ಕಾರ್ಗೊ ಹೆಸರಿನಿಂದ ಲಾಜಿಸ್ಟಿಕ್ಸ್ ಸೇವೆಯನ್ನು ಪ್ರಾರಂಭಿಸಿದೆ.

ನಿಗಮದ ವತಿಯಿಂದ ನೂತನ ನಮ್ಮ ಕಾರ್ಗೋ ಟ್ರಕ್ ಸೇವೆಗಳಿಗೆ 20 ಸರಕು ಸಾಗಣೆ ವಾಹನಗಳ ಮೂಲಕ ಚಾಲನೆ ನೀಡಲಾಗಿದೆ. ಇದರಡಿಯಲ್ಲಿ ನಿಗಮದ ಮಾರ್ಗಗಳು ಕಾರ್ಯಾಚರಣೆಯಲ್ಲಿರುವ ಸ್ಥಳಗಳಿಗೆ ನಿಗಮದ ಬಸ್‌ಗಳಿಂದ ಪಾರ್ಸಲ್‌ಗಳನ್ನು ಸಾಗಿಸಲಾಗುತ್ತಿದೆ. ಈ ಯೋಜನೆಯನ್ನು ಮತ್ತೊಂದು ಹಂತಕ್ಕೆ ಅಭಿವೃದ್ಧಿಪಡಿಸುವ ಸಲುವಾಗಿ ಜಿಪಿಎಸ್ ಅಳವಡಿಕೆಯೊಂದಿಗೆ ನವೀನ ಬ್ರಾಂಡ್ ‘ನಮ್ಮ ಕಾರ್ಗೋ-ಟ್ರಕ್ ಸೇವೆ’ಗಳನ್ನು ಈಗ ಪರಿಚಯಿಸುತ್ತಿದೆ ಎಂದು ನಿಗಮ ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಬಿಎಂಟಿಸಿ | ಮಾದಾವರದಿಂದ ನೈಸ್ ರಸ್ತೆ ಮಾರ್ಗವಾಗಿ ಎಲೆಕ್ಟ್ರಾನಿಕ್ ಸಿಟಿಗೆ ಸಾರಿಗೆ

ನೂತನ ಸೇವೆಯ ಪ್ರಮುಖ ಅಂಶಗಳು

  • ಗ್ರಾಹಕರ ಸರಕುಗಳನ್ನು ರಾಜ್ಯ ವ್ಯಾಪ್ತಿಯಲ್ಲಿ ಸುರಕ್ಷಿತ, ವೇಗ ಹಾಗೂ ವಿಶ್ವಾಸಾರ್ಹವಾಗಿ ಸಾಗಿಸಲಾಗುವುದು.
  • ಈ ಟ್ರಕ್‌ಗಳು ಮುಚ್ಚಲಾದ ಕಂಟೈನರ್ ಮಾದರಿಯಲ್ಲಿದೆ.
  • ನಿಗಮವು ಬಲವಾದ ನೆಟ್ವರ್ಕ್ ವ್ಯವಸ್ಥೆಯನ್ನು ಹೊಂದಿದ್ದು, ಟ್ರಕ್ ಟ್ರ್ಯಾಕಿಂಗ್ ಸೌಲಭ್ಯದೊಂದಿಗೆ ವಿಶ್ವಾಸಾರ್ಹ ಸಿಬ್ಬಂದಿಗಳ ಮುಖೇನ ಗ್ರಾಹಕರ ಸರಕುಗಳನ್ನು ಸುರಕ್ಷಿತವಾಗಿ ಸರಿಯಾದ ಸಮಯಕ್ಕೆ ಸಾಗಿಸಲಿದೆ.
  • ಈ ನೂತನ ಸರಕು ಸಾಗಣೆ ವ್ಯವಸ್ಥೆಯನ್ನು ಆಸಕ್ತ ಗ್ರಾಹಕರಿಗೆ ಕರಾರು ಒಪ್ಪಂದಕ್ಕೆ ಒಳಪಟ್ಟು ಒದಗಿಸಲಿದೆ.
  • ಈ ಲಾಜಿಸ್ಟಿಕ್ ಸೇವೆಗಳಿಂದ ನಿಗಮ ಹಾಗೂ ಸೌಲಭ್ಯ ಪಡೆಯುವ ಸಂಸ್ಥೆಗಳ ನಡುವೆ ಒಡನಾಟ ವರ್ಧನೆಯಾಗಲಿದೆ.
  • ಟ್ರಕ್ ಸೇವೆಯು ಬೆಂಗಳೂರು, ಮೈಸೂರು, ತುಮಕೂರು, ಹಾಸನ, ಮಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ಕೋಲಾರ, ದಾವಣಗೆರೆಯಿಂದ ಕರ್ನಾಟಕ ರಾಜ್ಯದ ನಾನಾ ಸ್ಥಳಗಳಿಗೆ ಲಭ್ಯವಿರುತ್ತದೆ.
  • ನಿಗಮವು ಗ್ರಾಹಕರುಗಳ ಅಗತ್ಯತೆಗನುಗುಣವಾಗಿ ಟ್ರಕ್ ಸೇವೆ ಒದಗಿಸಲಿದ್ದು, ಇಚ್ಛೆಯುಳ್ಳ ಆಸಕ್ತ ಗ್ರಾಹಕರು ತಮ್ಮ ಅಗತ್ಯತೆಗಳ ಮಾಹಿತಿ / ವಿವರಗಳನ್ನು ಒದಗಿಸುವಂತೆ ಕೋರಿದೆ.
  • ಹೆಚ್ಚಿನ ಮಾಹಿತಿಗಾಗಿ ಕಾಲ್ ಸೆಂಟರ್ ಸಂಖ್ಯೆ: 080-26252625 ಅಥವಾ ಇ-ಮೇಲ್ ವಿಳಾಸ: logistics@ksrtc.org ಸಂಪರ್ಕಿಸುವಂತೆ ಕೋರಿದೆ.

ಈ ನೂತನ ಟ್ರಕ್ ಸೇವೆಗಳಿಗೆ ನಿಗದಿಪಡಿಸಿರುವ ದರ

  • 1 ರಿಂದ 100 ಕಿ.ಮೀ ವರೆಗೆ ಕನಿಷ್ಠ ಕಿ.ಮೀ ಇದ್ದು, ಪ್ರತಿ ಕಿ.ಮೀ ದರ ₹50 ಇದೆ. ಗರಿಷ್ಠ 12 ಗಂಟೆ ಅವಧಿಗೆ ₹5,000 ಕನಿಷ್ಠ ದರವಿದೆ.
  • 1 ರಿಂದ 200 ಕಿ.ಮೀ ವರೆಗೆ ಪ್ರತಿ ಕಿ.ಮೀಗೆ ₹40 ದರವಿದ್ದು, ಕನಿಷ್ಠ 200 ಕಿ.ಮೀಗೆ 24 ಗಂಟೆ (ನಿರ್ಗಮನದ ಸಮಯದಿಂದ 24 ಗಂಟೆ ಅವಧಿ) ₹8000 ದರವಿದೆ.
  • 200 ಕಿ.ಮೀ ಮೇಲ್ಪಟ್ಟ ಹೆಚ್ಚುವರಿ ಕಿ.ಮೀ ಗೆ ಅಂದರೆ ಪ್ರತಿ ಕಿ.ಮೀಗೆ ₹35 ಇದ್ದು, ಕಾರ್ಯಾಚರಣೆಯ ಕಿ.ಮೀ ಮೇಲೆ ದರವಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...