ರಾಜ್ಯಾದ್ಯಂತ ಕೆಎಸ್‌ಆರ್‌ಟಿಸಿಯಿಂದ 259 ಹೊಸ ಮಾರ್ಗಗಳಲ್ಲಿ ಬಸ್‌ ಸೇವೆ

Date:

ಶಕ್ತಿ ಯೋಜನೆ ಜಾರಿ ಬಳಿಕ ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ಸಂಚರಿಸುವ ಪ್ರಯಾಣಿಕರ ಸಂಖ್ಯೆಯಲ್ಲಿ ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿಯು 259ಕ್ಕೂ ಅಧಿಕ ಹೊಸ ಹಾಗೂ ಹಳೆಯ ಮಾರ್ಗಗಳಲ್ಲಿ ಹೆಚ್ಚುವರಿ ಬಸ್‌ಗಳನ್ನು ಕಾರ್ಯಾಚರಣೆಗೊಳಿಸುತ್ತಿದೆ.

ಕೋವಿಡ್‌ ಸಂದರ್ಭದಲ್ಲಿ ಹಲವು ಮಾರ್ಗಗಳಲ್ಲಿ ಬಸ್‌ ಸೇವೆ ಸ್ಥಗಿತಗೊಳಿಸಲಾಗಿತ್ತು. ಇದರಿಂದ ಆ ಮಾರ್ಗದ ಜನರು ಬಸ್‌ ಸೇವೆಯಿಲ್ಲದೆ ತುಂಬಾ ತೊಂದರೆಗೀಡಾಗಿದ್ದರು. ಶಕ್ತಿ ಯೋಜನೆ ಜಾರಿ ಬಳಿಕ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದ್ದು, ಬಸ್‌ಗಳ ಕೊರತೆ ಉಂಟಾಗಿತ್ತು. ಅಲ್ಲದೇ ಬಸ್‌ ಸೇವೆಗೆ ಬೇಡಿಕೆ ಹೆಚ್ಚಾಗಿದೆ.

ಸಾರ್ವಜನಿರಿಂದ 404 ಮಾರ್ಗಗಳಲ್ಲಿ ಹೊಸದಾಗಿ ಬಸ್‌ಗಳನ್ನು ಓಡಿಸಲು ಕೆಎಸ್‌ಆರ್‌ಟಿಸಿಗೆ ಬೇಡಿಕೆಯಿತ್ತು. ಈ ಪೈಕಿ ಸದ್ಯ 259 ಮಾರ್ಗಗಳಲ್ಲಿ ಬಸ್‌ ಸೇವೆ ಒದಗಿಸಲಾಗಿದೆ. ವಿಭಾಗೀಯ ಮಟ್ಟದಲ್ಲಿ ಬಸ್‌ಗಳ ಕಾರ್ಯಾಚರಣೆಗೆ ಒಟ್ಟು 145 ಹೊಸ ಮಾರ್ಗಗಳನ್ನು ಗುರುತಿಸಲಾಗಿದೆ. ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ ಅಗತ್ಯವಿರುವ ಮಾರ್ಗಗಳಲ್ಲಿ ಬಸ್‌ಗಳನ್ನು ಓಡಿಸಲು ಕ್ರಮ ವಹಿಸಲಾಗುವುದು ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿಗಳು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೈಸೂರು ರಿಂಗ್‌ ರಸ್ತೆ ಬಸ್‌ ಸೌಲಭ್ಯ

ಮೈಸೂರು ನಗರ ಬಸ್‌ ನಿಲ್ದಾಣದಿಂದ ಹೊರವರ್ತುಲ ರಸ್ತೆಯ ಸುತ್ತಮುತ್ತಲಿನ ಪ್ರದೇಶಗಳಿಗೆ ಕೆಎಸ್‌ಆರ್‌ಟಿಸಿ ಬಸ್‌ ಸೇವೆ ಆರಂಭವಾಗಿದೆ. ಈ ಬಗ್ಗೆ ಕೆಎಸ್‌ಆರ್‌ಟಿಸಿ ಮೈಸೂರು ನಗರ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್‌.ಟಿ.ವೀರೇಶ್‌ ಮಾತನಾಡಿ, ‘‘ಸಿಟಿ ಬಸ್‌ ನಿಲ್ದಾಣದಿಂದ ಕಲಾಮಂದಿರಕ್ಕೆ ಯಾವುದೇ ಬಸ್‌ ಇರಲಿಲ್ಲ. ಅಲ್ಲಿಗೆ ತೆರಳಬೇಕಾದರೆ ಜನರು ಮೆಟ್ರೋಪೋಲ್‌ ಸರ್ಕಲ್‌ ಬಳಿ ಇಳಿಯಬೇಕಾಗಿತ್ತು ಅಥವಾ ಸರಸ್ವತಿಪುರಂನ ಗೌರ್ನಮೆಂಟ್‌ ಪ್ರೆಸ್‌ ಬಳಿ ಇಳಿದು ನಡೆದುಕೊಂಡು ಹೋಗಬೇಕಾಗಿತ್ತು. ಈಗ ಅಲ್ಲಿಗೆ ಬಸ್‌ ಹೋಗುತ್ತದೆ. ಇದೇ ರೀತಿ ಹಲವು ಸ್ಥಳಗಳಿಗೆ ಬಸ್‌ಗಳು ಸಂಚಾರ ಮಾಡುವುದರಿಂದ ಜನರಿಗೆ ಅನುಕೂಲವಾಗಲಿದೆ,’’ ಎಂದು ಮಾಹಿತಿ ನೀಡಿದರು.

ಹೊಸ ಮಾರ್ಗಗಳು

ಮಾರ್ಗ- 1: ನಗರ ಬಸ್‌ ನಿಲ್ದಾಣ- ನಂಜು ಮಳಿಗೆ- ಪರಸಯ್ಯನ ಹುಂಡಿ-ದಟ್ಟಗಳ್ಳಿ- ಬೋಗಾದಿ- ಹಿನಕಲ್‌- ಕಲಾಮಂದಿರ- ಮೆಟ್ರೋಪೋಲ್‌ ಸರ್ಕಲ್‌- ನಗರಬಸ್‌ ನಿಲ್ದಾಣ.

ಮಾರ್ಗ -2: ನಗರಬಸ್‌ ನಿಲ್ದಾಣ-ಮೆಟ್ರೋಪೋಲ್‌ ಸರ್ಕಲ್‌- ಕಲಾಮಂದಿರ- ಹಿನಕಲ್‌- ಭಾರತ್‌ ಕ್ಯಾನ್ಸರ್‌ ಆಸ್ಪತ್ರೆ- ಮಣಿಪಾಲ್‌ ಆಸ್ಪತ್ರೆ- ಎಲ್‌ಐಸಿ ಸರ್ಕಲ್‌- ಹೈವೇ ವೃತ್ತ- ನಗರ ಬಸ್‌ ನಿಲ್ದಾಣ.

ಮಾರ್ಗ-3: ನಗರ ಬಸ್‌ ನಿಲ್ದಾಣ-ಹೈವೇ ವೃತ್ತ-ಎಲ್‌ಐಸಿ ಸರ್ಕಲ್‌- ಮಣಿಪಾಲ್‌ ಆಸ್ಪತ್ರೆ- ನಾರಾಯಣ ಹೃದಯಾಲಯ-ಸಾತಗಳ್ಳಿ ಬಸ್‌ ನಿಲ್ದಾಣ-ದೇವೇಗೌಡ ವೃತ್ತ- ನಜರಬಾದ್‌- ನಗರ ಬಸ್‌ ನಿಲ್ದಾಣ.

ಮಾರ್ಗ-4: ನಗರ ಬಸ್‌ ನಿಲ್ದಾಣ- ನಂಜು ಮಳಿಗೆ- ಪರಸಯ್ಯನ ಹುಂಡಿ- ನಂಜನಗೂಡು ರಸ್ತೆ ಜಂಕ್ಷನ್‌-ಉತ್ತನಹಳ್ಳಿ- ತಿ.ನರಸೀಪುರ ರಸ್ತೆ ಜಂಕ್ಷನ್‌- ದೇವೇಗೌಡ ವೃತ್ತ-ನಜರಬಾದ್‌- ನಗರ ಬಸ್‌ ನಿಲ್ದಾಣ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...