ಕಲ್ಯಾಣ ಕರ್ನಾಟಕದ 1,008 ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭ

Date:

ಪೂರ್ವ ಪ್ರಾಥಮಿಕ ಹಂತದಲ್ಲಿಯೆ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡಬೇಕು ಮತ್ತು ಆರಂಭದಲ್ಲಿಯೇ ಮಕ್ಕಳು ಕಲಿಕೆಯಿಂದ ಹಿಂದುಳಿಯಬಾರದೆಂಬ ಉದ್ದೇಶದಿಂದ ರಾಜ್ಯ ಸರಕಾರವು ಪ್ರಸಕ್ತ ವರ್ಷದಿಂದ ಕಲಬುರಗಿ ವಿಭಾಗದ ಆಯ್ದ 1,008 ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ (ಎಲ್‌ಕೆಜಿ, ಯುಕೆಜಿ) ತರಗತಿಗಳನ್ನು ಪ್ರಾರಂಭಿಸಲು ಅನುಮತಿ ನೀಡಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಕಲಬುರಗಿ ವಿಭಾಗದ ಹೆಚ್ಚುವರಿ ಆಯುಕ್ತ ಡಾ.ಆಕಾಶ ಎಸ್‌ ತಿಳಿಸಿದ್ದಾರೆ.

“ಬೀದರ ಜಿಲ್ಲೆಯಲ್ಲಿ 98, ಬಳ್ಳಾರಿ 119, ಕಲಬುರಗಿ 234, ಕೊಪ್ಪಳ 131, ರಾಯಚೂರ 190, ವಿಜಯನಗರ 142 ಹಾಗೂ ಯಾದಗಿರಿ  94 ಸೇರಿ ಒಟ್ಟು ಕಲಬುರಗಿ ವಿಭಾಗದ 1,008 ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಶಾಲೆ ಆರಂಭಿಸಲಾಗುವುದು. ಕಲ್ಯಾಣ ಕರ್ನಾಟಕ ಪ್ರಾಧೇಶಿಕ ಅಭಿವೃದ್ಧಿ ಮಂಡಳಿ ಅಕ್ಷರ ಆವಿಷ್ಕಾರ ಕಾರ್ಯಕ್ರಮದ ಮೂಲಕ ಕೈಜೋಡಿಸಿದೆ” ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜ್ಯದಲ್ಲಿಈಗಾಗಲೇ ಸರಕಾರಿ ಮತ್ತು ಖಾಸಗಿ ಶಾಲೆಗಳಲ್ಲಿಎಲ್‌ ಕೆಜಿ-ಯುಕೆಜಿ ತರಗತಿಗಳು ನಡೆಯುತ್ತಿವೆ. ಅಲ್ಲಿ ದಾಖಲಾದ ಮಕ್ಕಳ ವಿವರಗಳನ್ನು ಅವಲೋಕಿಸಿದರೆ ಕಲ್ಯಾಣ ಕರ್ನಾಟಕ ವಿಭಾಗದ ಸಂಖ್ಯೆ ಕಡಿಮೆ ಇದೆ ಎಂಬುದು ಅಂಕಿ-ಸಂಖ್ಯೆಯಿಂದ ಗೊತ್ತಾಗುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಂಗಳೂರು ವಿಭಾಗದಲ್ಲಿ 3,073 ಶಾಲೆಗಳಲ್ಲಿ ಅತಿ ಹೆಚ್ಚು 1,71,523 ಮಕ್ಕಳು ಪ್ರವೇಶ ಪಡೆದರೆ, ಕಲಬುರಗಿ ವಿಭಾಗದಲ್ಲಿ 967 ಶಾಲೆಗಳಲ್ಲಿ 32,805 ಅತಿ ಕಡಿಮೆ ಮಕ್ಕಳು ಪ್ರವೇಶ ಪಡೆದಿದ್ದಾರೆ. ಧಾರವಾಡ ವಿಭಾಗದಲ್ಲಿ 1,102 ಶಾಲೆಗಳಲ್ಲಿ 48,805 ಮಕ್ಕಳು ಮತ್ತು ಮೈಸೂರು ವಿಭಾಗದಲ್ಲಿ 1,099 ಶಾಲೆಗಳಲ್ಲಿ 57,569 ಮಕ್ಕಳು ಎಲ್‌ ಕೆಜಿ-ಯುಕೆಜಿ ಪ್ರವೇಶ ಪಡೆದಿದ್ದಾರೆ.

ಇನ್ನು ಅಂಗನವಾಡಿಗಳಲ್ಲಿ 6 ತಿಂಗಳಿನಿಂದ 6 ವರ್ಷ ವರೆಗಿನ ಮಕ್ಕಳ ದಾಖಲಾತಿ ಪ್ರಮಾಣ ನೋಡಿದಾಗ ಬೆಂಗಳೂರು ವಿಭಾಗದಲ್ಲಿ ಶೇ.40.94, ಧಾರವಾಡ ವಿಭಾಗದಲ್ಲಿ ಶೇ.61.61, ಮೈಸೂರು ವಿಭಾಗದಲ್ಲಿ ಶೇ.34.48 ಹಾಗೂ ಕಲಬುರಗಿ ವಿಭಾಗದಲ್ಲಿಅತಿ ಹೆಚ್ಚು ಶೇ.70.93 ರಷ್ಟು ಮಕ್ಕಳು ಅಂಗನವಾಡಿ ಕೇಂದ್ರದ ಮೇಲೆ ಅವಲಂಬಿತರಾಗಿದ್ದಾರೆ. ಪೂರ್ವ ಪ್ರಾಥಮಿಕ ತರಗತಿ ಪ್ರಾರಂಭದಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಂಗನವಾಡಿ ಮೇಲಿನ ಹೊರೆ ಸಹ ತಪ್ಪಲಿದೆ ಎಂದರು.

ಕೇಂದ್ರ ಅನುದಾನದ ನಿರೀಕ್ಷೆ:

“ಪೂರ್ವ ಪ್ರಾಥಮಿಕ ಶಿಕ್ಷಣ ಹಂತದಲ್ಲಿ ಗುಣಾತ್ಮಕ ಶಿಕ್ಷಣ ಮತ್ತು ಕ್ರಿಯಾತ್ಮಕ ಚಟುವಟಿಕೆ ಸೇರಿ ಇನ್ನಿತರ ಮಾನದಂಡ ಅಧರಿಸಿ ಕೇಂದ್ರ ಸರಕಾರವು ಅಂತಹ ಪೂರ್ವ ಪ್ರಾಥಮಿಕ ಶಾಲೆಗಳಿಗೆ ಪ್ರೊಜೆಕ್ಟ್ ಅಪ್ರೂವಲ್‌ ಬೋರ್ಡ್‌ನಿಂದ ಅನುಮೋದನೆ ನೀಡಿ ಹೆಚ್ಚಿನ ಅನುದಾನ ನೀಡುತ್ತದೆ. ಆ ಮೂಲಕ ರಾಜ್ಯದ ಮಕ್ಕಳಿಗೆ ಗುಣಮಟ್ಟದ ಪ್ರಾಥಮಿಕ ಶಿಕ್ಷಣ ದೊರೆಯಲು ಸಹಕಾರಿಯಾಗುವುದಲ್ಲದೆ ರಾಜ್ಯ ಸರಕಾರದ ಜೊತೆ ಕೇಂದ್ರ ಸರಕಾರ ಅನುದಾನ ಸಹ ಬರಲಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೂರು ಪ್ರಕರಣಗಳು ಮತ್ತು ‘ಮಾನವಂತ’ ಮಾಧ್ಯಮಗಳು

ಪೂರ್ವ ಪ್ರಾಥಮಿಕ ಹಂತಕ್ಕೆ ಶಾಲಾ ಹಂತದಲ್ಲಿಯೇ ನಿಯಮಾನುಸಾರ ಅತಿಥಿ ಶಿಕ್ಷಕರ ಮತ್ತು ಮಕ್ಕಳ ಪಾಲನೆಗೆ ಆಯಾ ನೇಮಕ ಮಾಡಿಕೊಳ್ಳಲಾಗುತ್ತದೆ” ಎಂದು ಮಾಹಿತಿ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...