ಲೋಕಸಭಾ ಚುನಾವಣೆ | ಮತದಾನ ಮಾಡಿದವರಿಗೆ ಜ್ಯೂಸ್, ತಿಂಡಿ ನೀಡಲು ಮುಂದಾದ ಹೋಟೆಲ್‌ಗಳು

Date:

ಇನ್ನೇನು ಕೆಲವೇ ದಿನಗಳಲ್ಲಿ ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದ  ಮತದಾನ ನಡೆಯಲಿದೆ. ಈ ಬಾರಿ ಮತದಾನದ ಪ್ರಮಾಣವನ್ನು ಹೆಚ್ಚಳ ಮಾಡುವ ಉದ್ದೇಶದಿಂದ ಬೃಹತ್ ಬೆಂಗಳೂರು ಹೊಟೇಲ್ ಸಂಘದಲ್ಲಿ (ಬಿಬಿಎಚ್‌ಎ) ಸದಸ್ಯತ್ವ ಹಿಂದಿರುವ ಹೋಟೆಲ್‌ಗಳು ಮತದಾನ ಮಾಡಿದ ಎಲ್ಲರಿಗೂ ತಾಜಾ ಹಣ್ಣಿನ ರಸ, ಲಡ್ಡು ಹಾಗೂ ಪಾನೀಯಗಳನ್ನು ನೀಡಲು ನಿರ್ಧರಿಸಿವೆ.

ಏ.26ರಂದು (ಶುಕ್ರವಾರ) ಬೆಂಗಳೂರು ನಗರ ಸೇರಿದಂತೆ ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ ನಡೆಯಲಿದೆ. ಪ್ರಜಾಪ್ರಭುತ್ವದಲ್ಲಿ ನಾಗರೀಕರಿಗಿರುವ ಬಹುಮುಖ್ಯವಾದ ಹಕ್ಕು ಮತದಾನ. ಆದ್ದರಿಂದ ಎಲ್ಲರೂ ಮತದಾನ ಮಾಡುವುದರ ಮೂಲಕ ಸದ್ಬಳಕೆ ಮಾಡಬೇಕು.

ಕಳೆದ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ನಗರದಲ್ಲಿ ಕೇವಲ 54% ಮತದಾನವಾಗಿದೆ. ಹೆಚ್ಚು ಯುವಕರು, ವಿದ್ಯಾವಂತರನ್ನು ಹೊಂದಿರುವ ಬೆಂಗಳೂರು ನಗರದಲ್ಲಿ ಇಷ್ಟೊಂದು ಕಡಿಮೆ ಪ್ರಮಾಣದಲ್ಲಿ ಮತದಾನವಾಗಿರುವುದು ಸಮಂಜಸವಲ್ಲ. ಹಾಗಾಗಿ, ಈ ಬಾರಿ ಅರ್ಹ ವಿದ್ಯಾರ್ಥಿ, ವಿದ್ಯಾರ್ಥಿನಿಯರು, ಯುವಕರು ಸೇರಿದಂತೆ ಎಲ್ಲ ನಾಗರಿಕರೂ ಕೂಡ ಮತಗಟ್ಟೆಗೆ ಬಂದು ಮತ ಚಲಾಯಿಸುವಂತೆ ಜಾಗೃತಿ ಮೂಡಿಸಬೇಕು” ಎಂದು ಹೋಟೆಲ್‌ ಸಂಘ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾವು ಹೋಟೆಲ್ ಮಾಲೀಕರು ಹೋಟೆಲ್‌ಗಳಲ್ಲಿ ಮತದಾನದ ಜಾಗೃತಿ ಮೂಡಿಸುವ ಪೋಸ್ಟರ್‌ಗಳನ್ನು ಹಾಕಲಿದ್ದೇವೆ. ಮತದಾನದ ದಿನದಂದು ಗ್ರಾಹಕರಲ್ಲಿ ಮತದಾನ ಮಾಡಿರುವಿರಾ ಎಂದು ಕೇಳಲಿದ್ದೇವೆ. ಕಳೆದ ಬಾರಿ ಚುನಾವಣೆಯ ದಿನದಂದು ಮತದಾನ ಮಾಡಿ ಬಂದವರಿಗೆ ಬಹಳಷ್ಟು ಹೋಟೆಲ್‌ಗಳಲ್ಲಿ ಉಚಿತ ಹಾಗೂ ರಿಯಾಯಿತಿ ದರದಲ್ಲಿ ತಿಂಡಿ-ತಿನಿಸು, ಪಾನೀಯಗಳನ್ನು ನೀಡಿ ಪ್ರೋತ್ಸಾಹಿಸಿದ್ದೇವೆ. ಈ ಬಾರಿಯೂ ಕೆಲವು ಹೋಟೆಲ್‌ಗಳಲ್ಲಿ ಅದೇ ರೀತಿಯ ಪ್ರೋತ್ಸಾಹ ನೀಡುವ ಕೆಲಸ ನಡೆಯಲಿದೆ” ಎಂದಿದೆ.

“ಮತದಾನ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ನಾವೂ ಮತದಾನ ಮಾಡಿ ಇತರರಿಗೂ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು. ಇದು ನಮ್ಮೆಲ್ಲರ ಜವಾಬ್ದಾರಿಯಾಗಿದೆ” ಎಂದು ಹೇಳಿದೆ.

ಇನ್ನು ಹೋಟೆಲ್‌ಗಳಲ್ಲಿ ಉಚಿತ ಆಹಾರವನ್ನು ಪಡೆಯಲು ಮತದಾನ ಮಾಡಿ ಬಂದವರು ತಮ್ಮ ತೋರು ಬೆರಳುಗಳ ಮೇಲೆ ಅಳಿಸದೇ ಶಾಹಿಯನ್ನು ಅಥವಾ ಮತದಾನ ಮಾಡಿ ಬಂದ ಗುರುತು ತೋಡಿಸುವುದು. ನಗರದಲ್ಲಿ ಹೆಚ್ಚಿನ ಮತದಾರರನ್ನು ಉತ್ತೇಜಿಸಲು ಹೋಟೆಲ್‌ ಸಂಘ ಮಾಡಲಾಗುತ್ತಿದೆ.

ನಗರದಾದ್ಯಂತ ಹಲವಾರು ಹೋಟೆಲ್‌ಗಳು ಮತದಾನದ ಕೊನೆಯ ವಾರದಲ್ಲಿ ಮತದಾನದ ಮಹತ್ವದ ಕುರಿತು ಪೋಸ್ಟರ್‌ಗಳನ್ನು ಹಾಕಲಿದ್ದು, ಬೆಂಗಳೂರಿಗರಲ್ಲಿ ಜಾಗೃತಿ ಮೂಡಿಸಲಿದೆ ಎಂದು ಬಿಬಿಎಚ್‌ಎ ಅಧ್ಯಕ್ಷ ಪಿ ಸಿ ರಾವ್ ಗುರುವಾರ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಬರೋಬ್ಬರಿ ₹67.5 ಕೋಟಿಗೆ ಸೇಲ್ ಆದ ಕೋರಮಂಗಲದ ನಿವೇಶನ

“ಬೆಂಗಳೂರು ಕೋಟಿಗಟ್ಟಲೆ ವಿದ್ಯಾವಂತ ಯುವಕರನ್ನು ಹೊಂದಿದೆ. ದೇಶದ ಪ್ರಾಥಮಿಕ ಐಟಿ ಕೇಂದ್ರವಾಗಿದೆ. ಆದರೆ, ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆಯಲ್ಲಿ ನಗರದಲ್ಲಿ ಕೇವಲ ಶೇ 54ರಷ್ಟು ಮತದಾನವಾಗಿತ್ತು. ಈ ಬಾರಿ ಲೋಕಸಭಾ ಚುನಾವಣೆಯಿದ್ದು, ಮತ ಚಲಾಯಿಸುವುದು ನಿರ್ಣಾಯಕವಾಗಿದೆ” ಎಂದು ತಿಳಿಸಿದರು.

“ಮತದಾನವು ನಮ್ಮ ನಗರದ ಸಾಮಾಜಿಕ ಪ್ರಜ್ಞೆಯನ್ನು ಪ್ರತಿಬಿಂಬಿಸುತ್ತದೆ. ಭಾರತದ ಪ್ರಮುಖ ಮೆಟ್ರೋಪಾಲಿಟನ್ ನಗರವಾಗಿ, ಹೋಟೆಲ್ ಮಾಲೀಕರು ನಮ್ಮ ಜನರು ಹೆಚ್ಚು ಜಾಗೃತರಾಗಿದ್ದಾರೆ. ಚುನಾವಣಾ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಾರೆ ಎಂದು ಖಚಿತಪಡಿಸಿಕೊಳ್ಳಲು ಬಯಸುತ್ತಾರೆ”ಎಂದು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...