ಭ್ರಷ್ಟರ ಮೇಲೆ ಲೋಕಾಯುಕ್ತ ದಾಳಿ; ಕೋಟಿ ಕೋಟಿ ಸಂಪತ್ತು ವಶ, ಇಲ್ಲಿದೆ ಪೂರ್ಣ ವಿವರ

Date:

ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಆರು ಅಧಿಕಾರಿಗಳ ಮೇಲೆ 35 ಕಡೆ ಏಕಕಾಲಕ್ಕೆ ದಾಳಿ ನಡೆಸಿದ್ದು, ಶೋಧನಾ ಸಮಯದಲ್ಲಿ ಸಿಕ್ಕ ಅಕ್ರಮ ಆಸ್ತಿ ವಿವರವನ್ನು ಪತ್ರಿಕಾ ಪ್ರಕಟಣೆ ಮೂಲಕ ಲೋಕಾಯುಕ್ತ ಕಚೇರಿ ಹಂಚಿಕೊಂಡಿದೆ.

ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಬೆಂಗಳೂರು ನಗರ ಮತ್ತು ರಾಮನಗರ ಜಿಲ್ಲಾ ಲೋಕಾಯುಕ್ತ ಪೊಲೀಸ್ ಠಾಣೆಗಳಲ್ಲಿ ಒಟ್ಟು 06 ಸರ್ಕಾರಿ ಅಧಿಕಾರಿಗಳು ತಮ್ಮ ಬಲ್ಲ ಆದಾಯದ ಮೂಲಗಳಿಗಿಂತ ಹೆಚ್ಚು ಅಸಮತೋಲನ ಆಸ್ತಿಯನ್ನು ಹೊಂದಿದ್ದ ಬಗ್ಗೆ ಆರು ಪ್ರಕರಣಗಳು ದಾಖಲಾಗಿದ್ದವು.

ಅಧಿಕಾರಿ ಎಂ ಎಲ್ ನಾಗರಾಜ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಸ್ಕಾಂನ ಮುಖ್ಯ ಪ್ರಧಾನ ವ್ಯವಸ್ಥಾಪಕ ಎಂ ಎಲ್ ನಾಗರಾಜ್ ಅವರ ಮೇಲೆ ಕರ್ನಾಟಕ ಲೋಕಾಯುಕ್ತ, ಬೆಂಗಳೂರು ನಗರ ಪೊಲೀಸ್ ಠಾಣೆಯಲ್ಲಿ ನಾಲ್ಕು ಪ್ರಕರಣಗಳು ದಾಖಲಾಗಿವೆ. ಆರೋಪಿ ಸರ್ಕಾರಿ ನೌಕರರಿಗೆ ಸೇರಿದ ಒಟ್ಟು ಏಳು ಸ್ಥಳಗಳಲ್ಲಿ ಶೋಧನಾ ಕಾರ್ಯ ಕೈಗೊಳ್ಳಲಾಗಿದ್ದು, ಒಟ್ಟು ಸ್ಥಿರ ಆಸ್ತಿಯ ಅಂದಾಜು ಮೌಲ್ಯ- 13 ನಿವೇಶನಗಳು, 2 ವಾಸದ ಮನೆಗಳು, ಕೃಷಿ ಜಮೀನು- ಎಲ್ಲ ಸೇರಿ ಒಟ್ಟು ಮೌಲ್ಯ 5.35 ಕೋಟಿ ರೂ. ಆಗಿದೆ.

ಒಟ್ಟು ಚರಾಸ್ತಿಯ ಅಂದಾಜು ಮೌಲ್ಯ 6,77,200 ನಗದು, 16,44,000 ರೂ. ಬೆಲೆ ಬಾಳುವ ಚಿನ್ನಾಭರಣಗಳು, 13,50,000 ರೂ. ಬೆಲೆ ಬಾಳುವ ವಾಹನಗಳು, 11,19,206 ರೂ. ಬೆಲೆಬಾಳುವ ಗೃಹೋಪಯೋಗಿ ವಸ್ತುಗಳು. ಎಲ್ಲ ಸೇರಿ ಒಟ್ಟು ಮೌಲ್ಯ 63, 66, 804 ರೂ ಆಗಿದೆ. ಇವರ ಒಟ್ಟು ಆಸ್ತಿ ಮೌಲ್ಯ 6,37,12,926 ಆಗಿದೆ.

ಅಧಿಕಾರಿ ಡಿ ಎಮ್ ಪದ್ಮನಾಭ

ಡಿ ಎಮ್ ಪದ್ಮನಾಭ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯಿತಿ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಜಿಲ್ಲೆ.

ಆರೋಪಿತ ಸರ್ಕಾರಿ ನೌಕರರಿಗೆ ಸೇರಿದ ಒಟ್ಟು 6 ಸ್ಥಳಗಳಲ್ಲಿ ಶೋಧನಾ ಕಾರ್ಯ ಕೈಗೊಳ್ಳಲಾಗಿದೆ. ಶೋಧನಾ ಸಮಯದಲ್ಲಿ ಒಟ್ಟು ಸ್ಥಿರಾಸ್ತಿಯ ಅಂದಾಜು ಮೌಲ್ಯ- 1 ಕೈಗಾರಿಕಾ ನಿವೇಶನ, 2 ವಾಸದ ಮನೆಗಳು. 8.18 ಎಕರೆ ಕೃಷಿ ಜಮೀನು ಮತ್ತು ಒಂದು ಫಾರ್ಮ್ ಹೌಸ್. ಎಲ್ಲ ಸೇರಿ ಒಟ್ಟು ಮೌಲ್ಯ 5.35 ಕೋಟಿ ರೂ. ಆಗಿದೆ.

ಒಟ್ಟು ಚರಾಸ್ತಿಯ ಅಂದಾಜು ಮೌಲ್ಯ ರೂ. 2,62,500 ನಗದು, ರೂ.17,24,304 ಬೆಲೆಬಾಳುವ ಚಿನ್ನಾಭರಣಗಳು, ರೂ.28,75,000 ಬೆಲೆಬಾಳುವ ವಾಹನಗಳು ಮತ್ತು ರೂ. 15,00,000 ಬೆಲೆಬಾಳುವ ಗೃಹೋಪಯೋಗಿ ವಸ್ತುಗಳು. ಎಲ್ಲ ಸೇರಿ ಒಟ್ಟು ಮೌಲ್ಯ 63,66,804. ಸ್ಥಿರ ಮತ್ತು ಚರಾಸ್ತಿಯ ಒಟ್ಟು ಮೌಲ್ಯ 5,98,66,804 ಆಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಡುದ್ವೇಷದ ಕತ್ತಲ ಯುಗದಲ್ಲಿ ಬೆಳ್ಳಂಬೆಳಕಿನ ತೀರ್ಪು

ಅಧಿಕಾರಿ ಎನ್ ಸತೀಶ್ ಬಾಬು

ಎನ್ ಸತೀಶ್ ಬಾಬು, ಅಧೀಕ್ಷಕ ಅಭಿಯಂತರರು, ಬಿಲ್ಡಿಂಗ್ ಸರ್ಕಲ್, ಲೋಕೋಪಯೋಗಿ ಇಲಾಖೆ, ಕೆ. ಆರ್. ಸರ್ಕಲ್, ಬೆಂಗಳೂರು.

ಆರೋಪಿ ಸರ್ಕಾರಿ ನೌಕರರಿಗೆ ಸೇರಿದ ಒಟ್ಟು 5 ಸ್ಥಳಗಳಲ್ಲಿ ಶೋಧನಾ ಕಾರ್ಯ ಕೈಗೊಳ್ಳಲಾಗಿದೆ. ಶೋಧನಾ ಸಮಯದಲ್ಲಿ ಒಟ್ಟು ಸ್ಥಿರಾಸ್ತಿಯ ಅಂದಾಜು ಮೌಲ್ಯ- 1 ನಿವೇಶನ, 2 ವಾಸದ ಮನೆಗಳು. 15 ಎಕರೆ ಕೃಷಿ ಜಮೀನು- ಎಲ್ಲ ಸೇರಿ ಒಟ್ಟು ಮೌಲ್ಯ 3,70,20,000 ಆಗಿದೆ.

ಒಟ್ಟು ಚರಾಸ್ತಿಯ ಅಂದಾಜು ಮೌಲ್ಯ- ರೂ. 9,00,000 ನಗದು, ರೂ. 64,62,400 ಬೆಲೆಬಾಳುವ ಚಿನ್ನಾಭರಣಗಳು, ರೂ.8,70,000 ಬೆಲೆಬಾಳುವ ವಾಹನಗಳು- ಎಲ್ಲ ಸೇರಿ ಒಟ್ಟು ಮೌಲ್ಯ 82,32,400 ಆಗಿದೆ. ಸ್ಥಿರ ಮತ್ತು ಚರಾಸ್ತಿಯ ಒಟು ಮೌಲ್ಯ- ರೂ. 4,52,52,400 ಆಗಿದೆ.

ಸೈಯದ್ ಮುನೀರ್ ಅಹಮದ್

ಸೈಯದ್ ಮುನೀರ್ ಅಹಮದ್, ಸಹಾಯಕ ಕಾರ್ಯಪಾಲಕ ಅಭಿಯಂತರರು (ಎ.ಇ.ಇ), ಕೆ.ಆರ್.ಐ.ಡಿ.ಎಲ್, ಪ್ರಭಾರ ಇ.ಇ., ಕೆ.ಆರ್.ಐ.ಡಿ.ಎಲ್ ಕಚೇರಿ, ರಾಮನಗರ ಜಿಲ್ಲೆ.

ಆರೋಪಿ ಸರ್ಕಾರಿ ನೌಕರರಿಗೆ ಸೇರಿದ ಒಟ್ಟು 6 ಸ್ಥಳಗಳಲ್ಲಿ ಶೋಧನಾ ಕಾರ್ಯ ಕೈಗೊಳ್ಳಲಾಗಿದೆ. ಶೋಧನಾ ಸಮಯದಲ್ಲಿ ಒಟ್ಟು ಸ್ಥಿರಾಸ್ತಿಯ ಅಂದಾಜು ಮೌಲ್ಯ- 2 ನಿವೇಶನಗಳು, ಒಟ್ಟು 7 ವಾಸದ ಮನೆಗಳು, ಕೃಷಿ ಜಮೀನು. ಎಲ್ಲ ಸೇರಿ ಒಟ್ಟು ಮೌಲ್ಯ- 4,10,58,968 ಆಗಿದೆ.

ಒಟ್ಟು ಚರಾಸ್ತಿಯ ಅಂದಾಜು ಮೌಲ್ಯ- ರೂ. 8,54,600 ನಗದು, ರೂ 73,47,330 ಬೆಲೆಬಾಳುವ ಚಿನ್ನಾಭರಣಗಳು, ರೂ.21,00,000 ಬೆಲೆ ಬಾಳುವ ವಾಹನಗಳು ಹಾಗೂ ರೂ. 35,00,000 ಬೆಲೆಬಾಳುವ ಗೃಹೋಪಯೋಗಿ ವಸ್ತುಗಳು. ಎಲ್ಲ ಸೇರಿ ಒಟ್ಟು ಮೌಲ್ಯ 1,38,01,930 ಆಗಿದೆ. ಸ್ಥಿರ ಮತ್ತು ಚರಾಸ್ತಿಯ ಒಟ್ಟು ಮೌಲ್ಯ 5,48,60,898 ಆಗಿದೆ.

ಅಧಿಕಾರಿ ಹೆಚ್ ಎಸ್ ಸುರೇಶ್

ಕರ್ನಾಟಕ ಲೋಕಾಯುಕ್ತ, ರಾಮನಗರ ಪೊಲೀಸ್ ಠಾಣೆಯಲ್ಲಿ 2 ಪ್ರಕರಣಗಳು ದಾಖಲಾಗಿರುತ್ತವೆ. ಹೆಚ್. ಎಸ್. ಸುರೇಶ್, ಸದಸ್ಯರು, ಚನ್ನೇನಹಳ್ಳಿ ಗ್ರಾಮ ಪಂಚಾಯಿತಿ, ತಾವರೆಕೆರೆ ಹೋಬಳಿ,
ಬೆಂಗಳೂರು ದಕ್ಷಿಣ ತಾಲ್ಲೂಕು, ಬೆಂಗಳೂರು ಜಿಲ್ಲೆ.

ಆರೋಪಿ ಸರ್ಕಾರಿ ನೌಕರರಿಗೆ ಸೇರಿದ ಒಟ್ಟು 6 ಸ್ಥಳಗಳಲ್ಲಿ ಶೋಧನಾ ಕಾರ್ಯ ಕೈಗೊಳ್ಳಲಾಗಿದೆ. ಶೋಧನಾ ಸಮಯದಲ್ಲಿ ಒಟ್ಟು ಸ್ಥಿರಾಸ್ತಿಯ ಅಂದಾಜು ಮೌಲ್ಯ- 16 ನಿವೇಶನಗಳು, 1 ವಾಸದ ಮನೆ. 7.6 ಎಕರೆ ಕೃಷಿ ಜಮೀನು. ಎಲ್ಲ ಸೇರಿ ಒಟ್ಟು ಮೌಲ್ಯ ರೂ. 21,27,70,150 ಆಗಿದೆ.

ಒಟ್ಟು ಚರಾಸ್ತಿಯ ಅಂದಾಜು ಮೌಲ್ಯ 11,97,610 ಆಗಿದೆ. ರೂ.2,11,26,250 ಬೆಲೆ ಬಾಳುವ ಚಿನ್ನಾಭರಣಗಳು, ರೂ 2,07,25.000 ಬೆಲೆಬಾಳುವ ವಾಹನಗಳು. ಎಲ್ಲ ಸೇರಿ ಒಟ್ಟು ಮೌಲ್ಯ ರೂ.4,30,48,860 ಆಗಿದೆ. ಇವರ ಒಟ್ಟು ಆಸ್ತಿ ಮೌಲ್ಯ ರೂ.25,58,19,010 ಆಗಿದೆ.

ಅಧಿಕಾರಿ ಮಂಜೇಶ್. ಬಿ

ಮಂಜೇಶ್. ಬಿ, ಸದಸ್ಯ ಕಾರ್ಯದರ್ಶಿ ಮತ್ತು ಜಂಟಿ ನಿರ್ದೇಶಕರು, ನಗರ ಮತ್ತು ಯೋಜನೆ, ಆನೇಕಲ್ ಯೋಜನಾ ಪ್ರಾಧೀಕಾರ, ಆನೇಕಲ್, ಬೆಂಗಳೂರು ಜಿಲ್ಲೆ.

ಆರೋಪಿ ಸರ್ಕಾರಿ ನೌಕರರಿಗೆ ಸೇರಿದ ಒಟ್ಟು 5 ಸ್ಥಳಗಳಲ್ಲಿ ಶೋಧನಾ ಕಾರ್ಯ ಕೈಗೊಳ್ಳಲಾಗಿದೆ. ಶೋಧನಾ ಸಮಯದಲ್ಲಿ ಒಟ್ಟು ಸ್ಥಿರಾಸ್ತಿಯ ಅಂದಾಜು ಮೌಲ್ಯ 11 ನಿವೇಶನಗಳು, 1 ವಾಸದ ಮನೆ. ಎಲ್ಲ ಸೇರಿ ರೂ. 1,20,00,000 ಆಗಿದೆ.

ಒಟ್ಟು ಚರಾಸ್ತಿಯ ಅಂದಾಜು ಮೌಲ್ಯ- ರೂ. 5,07,920 ನಗದು, ರೂ.35,97,000 ಬೆಲೆಬಾಳುವ ಚಿನ್ನಾಭರಣಗಳು, ರೂ. 77,16,000 ಬೆಲೆಬಾಳುವ ಗೃಹೋಪಯೋಗಿ ವಸ್ತುಗಳು, ಎಲ್ಲ ಸೇರಿ ಒಟ್ಟು ಮೌಲ್ಯ ರೂ.1,98,20,920 ಆಗಿದ್ದು, ಇವರ ಒಟ್ಟು ಮೌಲ್ಯ ರೂ.3,18,20,920 ಆಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...