ಏಪ್ರಿಲ್ 14ರ ಮಧ್ಯರಾತ್ರಿಯಿಂದ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಲಾರಿ ಮುಷ್ಕರ

Date:

ಡಿಸೇಲ್ ಬೆಲೆ ಏರಿಕೆಯನ್ನು ಖಂಡಿಸಿ, ಇತರೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಏಪ್ರಿಲ್ 14ರ ಮಧ್ಯರಾತ್ರಿಯಿಂದಲೇ ಲಾರಿ ಮುಷ್ಕರ ನಡೆಯಲಿದೆ. ಸಂಚಾರ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುವುದು ಎಂದು ರಾಜ್ಯ ಲಾರಿ ಮಾಲೀಕರ ಮತ್ತು ಏಜೆಂಟರ ಸಂಘ ಹೇಳಿದೆ.

2024ರ ಜೂನ್‌ನಲ್ಲಿ ರಾಜ್ಯ ಸರ್ಕಾರವು ಡಿಸೇಲ್ ದರವನ್ನು ಮೂರು ರೂಪಾಯಿ ಏರಿಸಿತ್ತು. ಈಗ ಮತ್ತೆ ಎರಡು ರೂಪಾಯಿ ಹೆಚ್ಚಿಸಿದೆ. ಈ ಏರಿಕೆಯನ್ನು ಹಿಂಪಡೆಯುವವರೆಗೂ ನಮ್ಮ ಮುಷ್ಕರ ನಿಲ್ಲದು ಎಂದು ಸಂಘಟನೆಗಳು ತಿಳಿಸಿದೆ. ಇದರೊಂದಿಗೆ ಇನ್ನೂ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಸಂಘ ಆಗ್ರಹಿಸಿದೆ.

ಇದನ್ನು ಓದಿದ್ದೀರಾ? ರಾಯಚೂರು | ಲಾರಿ ಮಾಲೀಕರ ಸಂಘದ ಮುಷ್ಕರಕ್ಕೆ ಕರವೇ ಬೆಂಬಲ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿರುವ ಸಂಘದ ಅಧ್ಯಕ್ಷ ಜಿ ಆರ್ ಷಣ್ಮುಖಪ್ಪ, “ಈ ಮುಷ್ಕರಕ್ಕೆ ಜಲ್ಲಿ, ಗ್ಯಾಸ್ ಟ್ಯಾಂಕ್, ಮರಳು ಸಾಗಣೆ ವಾಹನಗಳ ಮಾಲೀಕರ ಸಂಘ ಸೇರಿ ಒಟ್ಟು 69 ಸಂಘಟನೆಗಳು ಬೆಂಬಲ ನೀಡಿದೆ. ಇದರಿಂದಾಗಿ ರಾಜ್ಯದಲ್ಲಿ ಸುಮಾರು 700 ಗೂಡ್ಸ್ ಕಚೇರಿಗಳು ಬಂದ್ ಆಗಲಿದೆ. ಈಗಾಗಲೇ ಕಾರ್ಖಾನೆ, ಕೈಗಾರಿಕೆ, ಕಂಪನಿಗಳಿಗೆ ಮುಷ್ಕರದ ಬಗ್ಗೆ ಪತ್ರ ಬರೆಯಲಾಗಿದೆ” ಎಂದು ತಿಳಿಸಿದ್ದಾರೆ.

ಡಿಸೇಲ್ ಮಾತ್ರವಲ್ಲ ಪೆಟ್ರೋಲ್, ಟೋಲ್ ದರಗಳ ಪರಿಷ್ಕರಣೆ ಮಾಡಬೇಕು ಎಂಬುದು ನಮ್ಮ ಆಗ್ರಹ. ನಮ್ಮ ಮುಷ್ಕರಕ್ಕೆ ನಮ್ಮ ರಾಜ್ಯ ಮಾತ್ರವಲ್ಲ ಹೊರ ರಾಜ್ಯದ ಲಾರಿ ಮಾಲೀಕರು ಕೂಡಾ ಬೆಂಬಲ ಸೂಚಿಸಿದ್ದಾರೆ. ಪೆಟ್ರೋಲ್ ಬಂಕ್ ಸಂಘಟನೆಗಳ ಬೆಂಬಲವೂ ಇದೆ. ಸುಮಾರು ಆರು ಲಕ್ಷಕ್ಕೂ ಹೆಚ್ಚು ಲಾರಿಗಳು ರಸ್ತೆಗಳಿಯದು. ಹೊರ ರಾಜ್ಯದಿಂದ ಬರುವ ಲಾರಿಗಳನ್ನು ತಡೆಯಲಾಗುವುದು ಎಂದು ಷಣ್ಮುಖಪ್ಪ ಹೇಳಿದ್ದಾರೆ.

ಗಡಿ ಚೆಕ್‌ಪೋಸ್ಟ್‌ಗಳನ್ನು ರದ್ದು ಮಾಡಬೇಕು. ರಾಜ್ಯದಲ್ಲಿ ಟೋಲ್ ಸಂಗ್ರಹ ಮಾಡಬಾರದು. ವಾಹನಗಳ ಸಾಮರ್ಥ್ಯ ಅರ್ಹತಾ ಪತ್ರ (ಫಿಟ್‌ನೆಸ್ ಸರ್ಟಿಫಿಕೆಟ್) ನವೀಕರಣಕ್ಕೆ ಶುಲ್ಕವನ್ನು ಹೆಚ್ಚು ಮಾಡಿ ಕೇಂದ್ರ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಯನ್ನು ರಾಜ್ಯ ಸರ್ಕಾರ ಜಾರಿ ಮಾಡಬಾರದು. ರಾಜ್ಯದ ಪ್ರಮುಖ ನಗರಗಳಿಗೆ ಸರಕು ಸಾಗಣೆ ವಾಹನಗಳ ಪ್ರವೇಶಕ್ಕೆ ಕೇವಲ ಐದು ಗಂಟೆ ಅವಕಾಶ ನೀಡಿರುವುದನ್ನು ತೆಗೆದುಹಾಕಬೇಕು ಎಂಬುದು ರಾಜ್ಯ ಲಾರಿ ಮಾಲೀಕರ ಮತ್ತು ಏಜೆಂಟರ ಸಂಘದ ಬೇಡಿಕೆಯಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...