ಕೈ ಹಿಡಿಯದ ಕಮಲ ಶಾಸಕರು: ಹಲವು ಕ್ಷೇತ್ರಗಳ ಗೊಂದಲಕ್ಕೆ ಬಹುತೇಕ ತೆರೆ

Date:

  • ಮೊದಲ ಪಟ್ಟಿಯಲ್ಲಿ ಹಾಲಿ, ಮಾಜಿ ಶಾಸಕರಿಗೆ ಕೈ ಟಿಕೆಟ್
  • ಫಲ ನೀಡಿದ ಯಡಿಯೂರಪ್ಪ, ಅಮಿತ್‌ ಶಾ ಸಂಧಾನ

ಕಳೆದ ಕೆಲವು ದಿನಗಳಿಂದ ಬಿಜೆಪಿ ಹಾಲಿ ಶಾಸಕರು ಕೈ ಹಿಡಿಯುತ್ತಾರೆ ಎಂಬ ಗಾಳಿ ಸುದ್ದಿ ಹರಡಿತ್ತು. ಆದರೆ, ಇವರ್ಯಾರು ಕಾಂಗ್ರೆಸ್‌ ಸೇರದ ಹಿನ್ನಲೆಯಲ್ಲಿ ಮಾಜಿ ಶಾಸಕರಿಗೆ ಟಿಕೆಟ್‌ ಘೋಷಣೆ ಮಾಡಿದೆ.

ಬಿಜೆಪಿ ಹಾಲಿ ಶಾಸಕರಾದ ಹಿರಿಯೂರಿನ ಕೆ ಪೂರ್ಣಿಮಾ ಶ್ರೀನಿವಾಸ್‌, ಹೊಸದುರ್ಗ ಕ್ಷೇತ್ರದ ಶಾಸಕ ಗೂಳಿಹಟ್ಟಿ ಡಿ ಶೇಖರ್ ಮತ್ತು ಗೋವಿಂದರಾಜ ನಗರದ ಶಾಸಕ ವಿ ಸೋಮಣ್ಣ ಅವರು ಬಿಜೆಪಿ ತೊರೆದು ಕಾಂಗ್ರೆಸ್‌ ಸೇರುತ್ತಾರೆ ಎಂಬ ಮಾತುಗಳು ಕೇಳಿ ಬಂದಿತ್ತು.

ಆದರೆ, ಯಡಿಯೂರಪ್ಪ ಹಾಗೂ ಅಮಿತ್‌ ಶಾ ನಡೆಸಿದ ರಾಜಿ ಸಂಧಾನದಿಂದ ಇವರ್ಯಾರು ಕೈ ಹಿಡಿಯದೇ, ಬಿಜೆಪಿಯಲ್ಲಿಯೇ ಉಳಿದುಕೊಂಡಿದ್ದರಿಂದ ಕೈ ನಾಯಕರು ಈ ಕ್ಷೇತ್ರಗಳಿಗೆ ತಮ್ಮ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳೆದ ವಾರ ಬಿಜೆಪಿ ಎಂಎಲ್ಸಿ ಸ್ಥಾನ ತೊರೆದು ಕಾಂಗ್ರೆಸ್‌ ಸೇರಿದ್ದ ಪುಟ್ಟಣ್ಣ ಅವರಿಗೆ ರಾಜಾಜಿನಗರದ ಟಿಕೆಟ್‌ ಘೋಷಣೆ ಮಾಡಿದ್ದು, ಇಲ್ಲಿ ಆಕಾಂಕ್ಷಿಯಾಗಿದ್ದ ಭವ್ಯ ನರಸಿಂಹಮೂರ್ತಿ ಸೇರಿದಂತೆ ಹಲವರಿಗೆ ನಿರಾಸೆಯಾಗಿದೆ.

ಇನ್ನು ಕೆ ಆರ್‌ ಪೇಟೆ ಶಾಸಕ ನಾರಾಯಣ ಗೌಡ ಅವರೂ ಕೂಡ ಕಾಂಗ್ರೆಸ್‌ ಸೇರುವ ಮಾತುಗಳು ಕೇಳಿಬಂದಿದ್ದರೂ, ಜೆಡಿಎಸ್ ನ ದೇವರಾಜ್ ಕಾಂಗ್ರೆಸ್ ಸೇರುತ್ತಿರುವ ಹಿನ್ನೆಲೆಯಲ್ಲಿ ಈ ಕ್ಷೇತ್ರಕ್ಕೆ ಟಿಕೆಟ್‌ ಘೊಷಣೆ ಮಾಡಿಲ್ಲ.

ಗುರುಮಿಠಕಲ್‌ ಕ್ಷೇತ್ರದಲ್ಲಿ ಬಿಜೆಪಿಯು ಬಾಬುರಾವ್‌ ಚಿಂಚನಸೂರು ಅವರಿಗೆ ಟಿಕೆಟ್ ನಿರಾಕರಿಸಿದ ಕಾರಣಕ್ಕೆ ವಿಧಾನಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿ, ಕಾಂಗ್ರೆಸ್‌ ಸೇರಿದ ಬಾಬುರಾವ್‌ ಚಿಂಚನಸೂರು ಕ್ಷೇತ್ರಕ್ಕೂ ಟಿಕೆಟ್‌ ಘೋಷಣೆ ಆಗಿಲ್ಲ.

ಇನ್ನು ಹಲವು ನಾಯಕರು ಜೆಡಿಎಸ್‌ ಮತ್ತು ಬಿಜೆಪಿ ತೊರೆದು ಕಾಂಗ್ರೆಸ್ ಸೇರುವ ಸಾಧ್ಯತೆ ಇರುವುದರಿಂದ ಕೆಲವು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡದೇ ಕಾದು ನೋಡುವ ತಂತ್ರವನ್ನು ಕೈ ನಾಯಕರು ಅನುಸರಿಸಿದ್ದಾರೆ ಎನ್ನಲಾಗಿದೆ.

a1b8f011336c8b30aec8eb65b1fdef709a9ae9be2d3f6e92a0d93ac3d2ff3a42?s=150&d=mp&r=g
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...