ಹುತಾತ್ಮ ಸಿಬ್ಬಂದಿಯ ಗುಂಪು ವಿಮಾ ಮೊತ್ತ 20 ಲಕ್ಷದಿಂದ 50 ಲಕ್ಷಕ್ಕೆ ಏರಿಕೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Date:

ಕರ್ತವ್ಯದ ಮೇಲಿದ್ದಾಗ ಹುತಾತ್ಮರಾಗುವ ಪೊಲೀಸ್ ಸಿಬ್ಬಂದಿಯ ಗುಂಪು ವಿಮಾ ಮೊತ್ತವನ್ನು 20 ಲಕ್ಷ ರೂ.ಗಳಿಂದ 50 ಲಕ್ಷ ರೂ.ಗಳಿಗೆ ಏರಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.

ಇಂದು ಪೊಲೀಸ್ ಸಂಸ್ಮರಣ ದಿನದ ಅಂಗವಾಗಿ ಮೈಸೂರು ರಸ್ತೆಯ ಹುತಾತ್ಮರ ಉದ್ಯಾನವನದಲ್ಲಿ ಹುತಾತ್ಮರಿಗೆ ಪುಷ್ಪಚಕ್ರ ಅರ್ಪಿಸಿ ನಮನ ಸಲ್ಲಿಸಿ ಮಾತನಾಡಿದರು.

ಪೊಲೀಸ್ ವ್ಯವಸ್ಥೆ ರಾಜ್ಯದ, ಸರ್ಕಾರದ ಘನತೆಯನ್ನು ಹೆಚ್ಚಿಸುವಂತೆ ಕೆಲಸ ಮಾಡುತ್ತದೆ. ಅಭಿವೃದ್ಧಿ ಮತ್ತು ಕಾನೂನು ಸುವ್ಯವಸ್ಥೆಗೆ ನೇರ ಸಂಬಂಧವಿದೆ. ಯಾವ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಮರ್ಪಕವಾಗಿರುತ್ತದೋ ಅಲ್ಲಿಗೆ ಬಂಡವಾಳ ಹೆಚ್ಚಾಗಿ ಬರುತ್ತದೆ. ಇದರಿಂದ ಉದ್ಯೋಗ ಸೃಷ್ಟಿ ಹೆಚ್ಚಾಗಿ, ಅಭಿವೃದ್ಧಿ ವೇಗ ಪಡೆದುಕೊಳ್ಳುತ್ತದೆ. ಇದರ ಪರಿಣಾಮ ನಾಡಿನ‌ ಜನರ ತಲಾ ಆದಾಯದ ಪ್ರಮಾಣವೂ ಹೆಚ್ಚಾಗುತ್ತದೆ. ಆದ್ದರಿಂದ ನಾಡಿನ ಕಾನೂನು ಸುವ್ಯವಸ್ಥೆಯನ್ನು ಪೊಲೀಸ್ ಇಲಾಖೆ ಕಟ್ಟು ನಿಟ್ಟಾಗಿ ನಿರ್ವಹಿಸಬೇಕು ಎಂದು‌ ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಂತ್ರಜ್ಞಾನ ಬೆಳೆದಂತೆ ಪೊಲೀಸ್ ವ್ಯವಸ್ಥೆ ಹೊಸ ಹೊಸ ಸವಾಲುಗಳಿಗೆ ಮುಖಾಮುಖಿ ಆಗುತ್ತದೆ. ಸೈಬರ್ ತಂತ್ರಜ್ಞಾನದ ಜತೆಗೇ ಸೈಬರ್ ಅಪರಾಧಗಳೂ ಹೆಚ್ಚಾಗುತ್ತಿವೆ. ಇದನ್ನು ಪರಿಣಾಮಕಾರಿಯಾಗಿ ತಡೆ ಹಿಡಿಯಬೇಕು ಎನ್ನುವ ಸೂಚನೆ ಮುಖ್ಯಮಂತ್ರಿಗಳು ನೀಡಿದರು.

ಸುಳ್ಳು ಸುದ್ದಿಗಳು, ಅಶಾಂತಿ ಸೃಷ್ಟಿಸುವ ಸುಳ್ಳುಗಳನ್ನು, ದ್ವೇಷ ಹರಡುವ ಸುಳ್ಳುಗಳನ್ನು ವ್ಯಾಪಕವಾಗಿ ಹರಡಲಾಗುತ್ತಿದೆ. ಸರ್ವರನ್ನೂ ಸಮಾನವಾಗಿ ಕಾಣುವ ಮತ್ತು ಸಮಾನವಾಗಿ ನಡೆಸಿಕೊಳ್ಳುವ ಜವಾಬ್ದಾರಿ ಸರ್ಕಾರ ಮತ್ತು ಪೊಲೀಸ್ ವ್ಯವಸ್ಥೆ ಮೇಲಿದೆ ಎಂದರು.

ಈ ಸುದ್ದಿ ಓದಿದ್ದೀರಾ? ಇಸ್ರೋದ ಮಾನವಸಹಿತ ಗಗನಯಾನದ ಮೊದಲ ಹಾರಾಟ ಪರೀಕ್ಷೆ ಯಶಸ್ವಿ

ಆದ್ದರಿಂದ ಸುಳ್ಳು ಸುದ್ದಿ ಹರಡುವವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು. ಸುಳ್ಳು ಮತ್ತು ದ್ವೇಷದ ಸುದ್ದಿಗಳು ನಾಡಿನ ಜಿಡಿಪಿಗೆ ಮಾರಕ. ಅಶಾಂತಿಯ ಪರಿಣಾಮವಾಗಿ ಜನರ ತಲಾ ಆದಾಯಕ್ಕೂ ಧಕ್ಕೆಯಾಗುತ್ತದೆ. ಆದ್ದರಿಂದ ಸುಳ್ಳು ಸುದ್ದಿ ಹರಡುವ ಜಾಲ ತಾಣಗಳು ಮತ್ತು ಅವನ್ನು ನಿರ್ವಹಿಸುತ್ತಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.

ಮಹಿಳೆ, ಮಕ್ಕಳು ಮತ್ತು ಹಿರಿಯ ನಾಗರಿಕರ ಸುರಕ್ಷತೆ ಮತ್ತು ಭದ್ರತೆಗೆ ಹೆಚ್ಚಿನ ರಕ್ಷಣೆ ಕೊಡುವ ಅಗತ್ಯವಿದೆ. ಸುಗಮ ಸಂಚಾರ ವ್ಯವಸ್ಥೆ ಇನ್ನಷ್ಟು ಪರಿಣಾಮಕಾರಿಯಾಗಬೇಕು. ಹೀಗಾಗಿ ಹೆಚ್ಚುವರಿ ಪೊಲೀಸ್ ಹುದ್ದೆ ಸೃಷ್ಟಿಸಿದ್ದೇವೆ. ಹೆಚ್ಚುವರಿ ಮಹಿಳಾ ಮತ್ತು ಸಂಚಾರ ಠಾಣೆಗಳನ್ನು ಆರಂಭಿಸಿದ್ದೇವೆ. ಹೊಸ ವಾಹನ ಖರೀದಿಗೆ 100 ಕೋಟಿ ರೂಪಾಯಿಗಳನ್ನು ನೀಡಲಾಗುವುದು ಎಂದರು.

2125 ಪೊಲೀಸ್ ವಸತಿ ಗೃಹಗಳನ್ನು ನಿರ್ಮಿಸಲು 450 ಕೋಟಿ ನೀಡಲಾಗುವುದು. ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳ ಆರೋಗ್ಯ ಭಾಗ್ಯಕ್ಕಾಗಿ 100 ಕೋಟಿ ರೂ ಒದಗಿಸಲಾಗಿದೆ. ನಿವೃತ್ತ ಸಿಬ್ಬಂದಿಯ ಆರೋಗ್ಯ, ಚಿಕಿತ್ಸೆಗಾಗಿ ನಿಶ್ಚಿತ ಠೇವಣಿ ಇಡಲಾಗಿದೆ. ಪೊಲೀಸ್ ಸಿಬ್ಬಂದಿಯ ಮಕ್ಕಳ ಶಿಕ್ಷಣಕ್ಕಾಗಿ 7 ಜಿಲ್ಲೆಗಳಲ್ಲಿ 7 ಪೊಲೀಸ್ ಪಬ್ಲಿಕ್ ಶಾಲೆ ಆರಂಭಿಸಲಾಗುತ್ತಿದೆ. ಇವುಗಳ ಮೂಲಕ ಗುಣಮಟ್ಟದ ಶಿಕ್ಷಣ ನೀಡಲು ನಮ್ಮ ಸರ್ಕಾರ ಬದ್ದವಾಗಿದೆ. ಪೊಲೀಸ್ ಕ್ಯಾಂಟೀನ್‌ಗಳನ್ನು ಆರಂಭಿಸಲಾಗುತ್ತಿದೆ ಎಂದರು.

ಗೃಹ ಮಂತ್ರಿ ಜಿ. ಪರಮೇಶ್ವರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾದ ಅಲೋಕ್ ಮೋಹನ್ ಮತ್ತು ಪೊಲೀಸ್ ಇಲಾಖೆಯ ನಾನಾ ವಿಭಾಗಗಳ ಮುಖ್ಯಸ್ಥರು ಪುಷ್ಪ ನಮನ ಸಲ್ಲಿಸಿದರು.

ಕಳೆದ ಒಂದು ವರ್ಷದಲ್ಲಿ ದೇಶದಾದ್ಯಂತ ಹುತಾತ್ಮರಾದ ಎಲ್ಲಾ ರಕ್ಷಣಾ ಸಿಬ್ಬಂದಿ ಮತ್ತು ಅಧಿಕಾರಿಗಳನ್ನು ಸ್ಮರಿಸಿ ನಮನ ಸಲ್ಲಿಸಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...