ಬೆಂಗಳೂರು | ಜಯನಗರದಲ್ಲಿ ನಾಳೆ ಸಾರ್ವಜನಿಕರಿಗಾಗಿ ‘ಮಸೀದಿ ದರ್ಶನ’ ಕಾರ್ಯಕ್ರಮ

Date:

ಮಸೀದಿ ಎಂದರೇನು? ಮಸೀದಿ, ಮದ್ರಸಾಗಳಿಗೆ ಇರುವ ವ್ಯತ್ಯಾಸ ಏನು? ಮಸೀದಿ ಒಳಗಡೆ ಏನೆಲ್ಲ ಇರುತ್ತೆ? ಮುಸ್ಲಿಮರ ಪ್ರಾರ್ಥನೆ ಹೇಗಿರುತ್ತದೆ? ಮಸೀದಿಯಲ್ಲಿ ಮುಸ್ಲಿಮರು ಯಾವ ದೇವರಿರುತ್ತಾರೆ? ಇಂತಹ ನೂರಾರು ಪ್ರಶ್ನೆಗಳು ಮುಸ್ಲಿಮೇತರರಲ್ಲಿ ಇರುವುದು ಸಹಜ. ಮಸೀದಿ ಬಗ್ಗೆ ಹೆಚ್ಚಿನ ಜನರಿಗೆ ಯಾವುದೇ ಸ್ಪಷ್ಟ ಪರಿಕಲ್ಪನೆ ಇರುವುದಿಲ್ಲ. ಕೇವಲ ಮುಸ್ಲಿಮರಿಗಷ್ಟೇ ಆ ಕೇಂದ್ರವು ಸೀಮಿತವಾಗಿರುತ್ತದೆ ಅನ್ನುವ ಭಾವನೆ ಇದೆ.

ಹೀಗಾಗಿ, ಮಸೀದಿಯ ಬಗ್ಗೆ ತಿಳಿದುಕೊಳ್ಳಲು ಎಲ್ಲ ಧರ್ಮೀಯರಿಗೂ ಅವಕಾಶ ಕಲ್ಪಿಸಲಾಗಿದ್ದು, ಬೆಂಗಳೂರಿನ ಜಯನಗರದಲ್ಲಿ ನಾಳೆ(ಫೆ.17) ಸಾರ್ವಜನಿಕರಿಗಾಗಿ ‘ಮಸೀದಿ ದರ್ಶನ’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಮಸೀದಿ ದರ್ಶನ ಸಂಘಟಕರು ಮಾಹಿತಿ ನೀಡಿದ್ದಾರೆ.

ಯಾವಾಗ ಕಾರ್ಯಕ್ರಮ?
‘ಮಸೀದಿ ದರ್ಶನ’ ಅನ್ನುವ ಈ ವಿಶಿಷ್ಟ ಕಾರ್ಯಕ್ರಮವು ಫೆ.17ರ ಶನಿವಾರದಂದು ಬೆಳಗ್ಗೆ 11ರಿಂದ ಸಂಜೆ 8 ಗಂಟೆಯವರೆಗೆ ನಡೆಯಲಿದೆ. ಸಂಜೆ 4ರಿಂದ 8ರವರೆಗೆ ‘ಮೀಡಿಯಾ ಸೆಷನ್’ ಇರಲಿದೆ. ಈ ಸಂದರ್ಭ ಸಾಯಂಕಾಲ, ಸೂರ್ಯಾಸ್ತ ಹಾಗೂ ರಾತ್ರಿಯ ನಮಾಝ್ ಹಾಗೂ ಆಝಾನ್ ಕೂಗುವುದನ್ನು ಹತ್ತಿರದಿಂದ ನೋಡಬಹುದಾಗಿದೆ.‌ ಈ ಕಾರ್ಯಕ್ರಮದ ವೇಳೆ ಇಸ್ಲಾಮಿಕ್ ವಸ್ತು ಪ್ರದರ್ಶನ, ಸಂವಾದಗಳನ್ನು ನಡೆಸಬಹುದಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

WhatsApp Image 2024 02 16 at 9.01.04 PM

ಯಾರೆಲ್ಲ ಭಾಗವಹಿಸಬಹುದು?
‘ಮಸೀದಿ ದರ್ಶನ’ ಕಾರ್ಯಕ್ರಮದಲ್ಲಿ ಯಾವುದೇ ಮುಸ್ಲಿಮೇತರ ಧರ್ಮೀಯ ಪುರುಷ ಹಾಗೂ ಮಹಿಳೆಯರು ಭಾಗವಹಿಸಬಹುದಾಗಿದೆ.

ಸ್ಥಳ ಎಲ್ಲಿ?

‘ಮಸೀದಿ ದರ್ಶನ’ ಕಾರ್ಯಕ್ರಮವು ಬೆಂಗಳೂರಿನ ಜಯನಗರದ ಬನ್ನೇರುಘಟ್ಟ ಮುಖ್ಯ ರಸ್ತೆ(ಶ್ರೀ ಜಯದೇವ ಆಸ್ಪತ್ರೆಯ ಹತ್ತಿರ)ಯಲ್ಲಿರುವ ಬಿಲಾಲ್ ಮಸೀದಿಯಲ್ಲಿ ನಡೆಯಲಿದೆ.

Location Map Link ಇಲ್ಲಿದೆ: ಮಸೀದಿಯ ಹೆಸರಿನ ಮೇಲೆ ಕ್ಲಿಕ್ ಮಾಡಿ

ಬಿಲಾಲ್ ಮಸೀದಿ, ಬನ್ನೇರುಘಟ್ಟ ಮುಖ್ಯ ರಸ್ತೆ(ಶ್ರೀ ಜಯದೇವ ಆಸ್ಪತ್ರೆಯ ಹತ್ತಿರ), ಜಯನಗರ, ಬೆಂಗಳೂರು

363

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...