ಮೇ 16, 17: ಲಿಂಗತ್ವ ಅಲ್ಪಸಂಖ್ಯಾತರ ಆಟೋಟ ಸ್ಪರ್ಧೆ, ಪ್ರತಿಭಟನೆ, ಸಾರ್ವಜನಿಕ ಸಭೆ

Date:

ಅಂತಾರಾಷ್ಟ್ರೀಯ ಲಿಂಗತ್ವ ಮತ್ತು ಲೈಂಗಿಕತೆ ಅಲ್ಪಸಂಖ್ಯಾತ ಸಮುದಾಯದ ಬಗೆಗಿನ ತಾರತಮ್ಯ, ಭಯ, ಅಸಹ್ಯಗಳ ವಿರೋಧಿ ದಿನಾಚರಣೆಯ ಪ್ರಯುಕ್ತ ಕರ್ನಾಟಕ ಒಂದೆಡೆ ಸಂಸ್ಥೆಯಿಂದ ಮೇ 16ರಂದು ಬೆಂಗಳೂರು ಹೆಬ್ಬಳದ ದಾಸರಹಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಕ್ರೀಡಾ ಕೂಟ ಹಮ್ಮಿಕೊಳ್ಳಲಾಗಿದೆ ಸಂಸ್ಥೆಯ ಪದಾಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರು ಪ್ರಸ್‌ಕ್ಲಬ್‌ ನಲ್ಲಿ ಗುರುವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸ್ಥೆಯ ಪದಾಧಿಕಾರಿಗಳು, ಅಂತಾರಾಷ್ಟ್ರೀಯ ಹೋಮೋಫೋಬಿಯಾ, ಬೈಫೋಬಿಯಾ ಮತ್ತು ಟ್ರಾನ್ಸ್‌ಫೋಬಿಯಾ (ಐ.ಡಿ.ಎ.ಎಚ್‌.ಒ.ಬಿ.ಐ.ಟಿ.) ವಿರೋಧಿ ದಿನವನ್ನು ವಿಶ್ವದ 130 ದೇಶಗಳಲ್ಲಿ ಮೇ 17ರಂದು ಆಚರಿಸಲಾಗುತ್ತದೆ. ಈ ಪ್ರಯುಕ್ತ ಲಿಂಗತ್ವ ಮತ್ತು ಲೈಂಗಿಕತೆ ಅಲ್ಪಸಂಖ್ಯಾತ ಸಮುದಾಯದ ಮೇಲೆ ನಡೆಯುತ್ತಿರುವ ಹಿಂಸೆ, ತಾರತಮ್ಯ ಮತ್ತು ದೌರ್ಜನ್ಯಗಳ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಈ ಸಮುದಾಯದ ಬಗ್ಗೆ ಸಮಾಜದಲ್ಲಿರುವ ಭಯ, ತಾರತಮ್ಯ, ಅಸಹ್ಯ ಭಾವನೆಗಳನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಈ ಕ್ರೀಡಾ ಕೂಟವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ನಮ್ಮ ಸಮುದಾಯದ ಮಹಿಳೆಯರು, ಮಕ್ಕಳು, ಯುವಕರು ಮತ್ತು ಲೈಂಗಿಕ ಕಾರ್ಮಿಕರು ಕ್ರೀಡಾ ಕೂಟದಲ್ಲಿ ಭಾಗವಹಿಸಲಿದ್ದಾರೆ. ಕುಂಟೆ ಬಿಲ್ಲೆ, ಚೌಕಬಾರ, ಅಣೆಜಲ್ಲು, ಕ್ರಿಕೆಟ್‌ ಮತ್ತು ಕಬ್ಬಡ್ಡಿ ಮೊದಲಾದ ಆಟೋಟ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಲವು ಹೋರಾಟ ಪ್ರತಿಭಟನೆ ನಡೆಸಿದರೂ ನಮ್ಮ ಸಮುದಾಯದ ಸಬಲೀಕರಣ ಆಗುತ್ತಿಲ್ಲ. ಈ ನಿಟ್ಟಿನಲ್ಲಿ ಸರಕಾರದ ಗಮನ ಸೆಳೆಯಲು ಮೇ 17ರಂದು ಬೆಳಗ್ಗೆ 10 ಗಂಟೆಗೆ ಬೆಂಗಳೂರು ಬೆನ್ಸನ್‌ ಟೌನ್‌ ಐಎಸ್‌ಐನಲ್ಲಿ ಸಾರ್ವಜನಿಕ ಸಭೆ ಹಮ್ಮಿಕೊಳ್ಳಲಾಗಿದೆ. ಈ ಸಭೆಯಲ್ಲಿ ಅಂತರ್ ಲಿಂಗಿ, ಲಿಂಗತ್ವ ಮತ್ತು ಲೈಂಗಿಕ ಅಲ್ಪಸಂಖ್ಯಾತ ಸಮುದಾಯದ ಪ್ರಸ್ತುತ ಸ್ಥಿತಿಗತಿಗಳು, ಸವಾಲುಗಳು ಮತ್ತು ಪರಿಹಾರಗಳು ವಿಚಾರದಲ್ಲಿ ಚರ್ಚೆ ನಡೆಯಲಿದೆ ಎಂದರು.

ಸಾರ್ವಜನಿಕ ಸಭೆಯಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್‌.ಎನ್‌.ಮುಕುಂದರಾಜ್‌, ಬೆಂಗಳೂರು ನಗರ ಸಿವಿಲ್‌ ನ್ಯಾಯಾಲಯದ ಹಿರಿಯ ಸರ್ಕಾರಿ ಅಭಿಯೋಜಕ ಭಾಗ್ಯಲಕ್ಷ್ಮೀ, ಪತ್ರಕರ್ತ ರವೀಂದ್ರ ಭಟ್ಟ, ನಿಮ್ಹಾನ್ಸ್‌ ಜಂಟಿ ಕಾರ್ಯದರ್ಶಿ ಡಾ. ಕಣ್ಮಣಿ, ಬಂಜಾರ ಅಕಾಡೆಮಿ ಅಧ್ಯಕ್ಷ ಅಲಿಕ್ವಾಜ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಸಾರ್ವಜನಿಕ ಸಭೆಯ ಬಳಿಕ ಸಂಜೆ 3 ಗಂಟೆಯಿಂದ 5 ಗಂಟೆಯವರೆಗೆ ಬೆಂಗಳೂರು ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನಾ ಸಭೆ ಹಮ್ಮಿಕೊಳ್ಳಲಾಗಿದೆ. ಪ್ರತಿಭಟನಾ ಸಭೆಯಲ್ಲಿ ನಮ್ಮ ಸಮುದಾಯದ ಬೇಡಿಕೆಗಳನ್ನು ಸರಕಾರಕ್ಕೆ ಸಲ್ಲಿಸಲಾಗುವುದು ಎಂದು ಅವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ರಕ್ಷಿತಾ, ಆಬಿದಾ ಬೇಗಂ, ಮೋನಿಕಾ, ಪ್ರಕಾಶ್‌, ರಾಕೇಶ್‌ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...