ಗ್ರಾ. ಪಂ.ಗೆ ಅಡಳಿತಾಧಿಕಾರಿಗಳ ನೇಮಕಕ್ಕೆ ಸದಸ್ಯರ ಆಕ್ರೋಶ, ನಾಳೆ ಫ್ರೀಡಂ ಪಾರ್ಕ್‌ನಲ್ಲಿ ಜನಾಧಿಕಾರ ಸಮಾವೇಶ

Date:

ಕರ್ನಾಟಕದಲ್ಲಿ ಅವಧಿ ಮುಗಿಯುತ್ತಿರುವ ಸಾವಿರಾರು ಗ್ರಾಮ ಪಂಚಾಯತಿಗಳಿಗೆ ಚುನಾವಣೆ ನಡೆಸದೆ ಆಡಳಿತಾಧಿಕಾರಿಗಳನ್ನು ನೇಮಿಸುವ ಸರ್ಕಾರದ ನಿರ್ಧಾರಕ್ಕೆ ಗ್ರಾಮ ಪಂಚಾಯತಿ ಸದಸ್ಯರ ಸಂಘಟನೆಗಳಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಜನವರಿ 29ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ “ಜನಾಧಿಕಾರ ಸಮಾವೇಶ” ಹಮ್ಮಿಕೊಂಡಿದೆ.

ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಜನವರಿ 16, 2026ರಂದು ಹೊರಡಿಸಿದ ಸುತ್ತೋಲೆಯಲ್ಲಿ (ಸಂಖ್ಯೆ: ಗ್ರಾಅವಂ 1003 ಗ್ರಾವಂಆ 2025) ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ರ ಸೆಕ್ಷನ್ 8(iii)ರ ಅಡಿಯ. ಅವಧಿ ಮುಗಿಯುತ್ತಿರುವ ಗ್ರಾಮ ಪಂಚಾಯತಿಗಳಿಗೆ ಜಿಲ್ಲಾಧಿಕಾರಿಗಳನ್ನು ಅಡಳಿತಾಧಿಕಾರಿಗಳನ್ನಾಗಿ ನೇಮಿಸುವಂತೆ ಸೂಚಿಸಲಾಗಿದೆ. 2020-25 ಅವಧಿಯ ಗ್ರಾಮ ಪಂಚಾಯತಿಗಳು ಜನವರಿ-ಮಾರ್ಚ್ 2026ರೊಳಗೆ ವಿವಿಧ ದಿನಾಂಕಗಳಲ್ಲಿ ಅವಧಿ ಮುಗಿಯಲಿವೆ. ಚುನಾವಣೆಗಳನ್ನು ತಕ್ಷಣ ನಡೆಸುವ ಸಾಧ್ಯತೆ ಇಲ್ಲದ ಕಾರಣ ಸರ್ಕಾರ ಈ ಕ್ರಮ ಕೈಗೊಂಡಿದೆ. ಸರ್ಕಾರದ ನಿರ್ಧಾರವನ್ನು ‘ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ಸದಸ್ಯರ ಮಹಾಒಕ್ಕೂಟ” ತೀವ್ರವಾಗಿ ಖಂಡಿಸಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ರಾಜ್ಯ ಪೊಲೀಸ್ ವ್ಯವಸ್ಥೆ ಕೆಡಲು ಕಾರಣರಾರು?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಡಳಿತಾಧಿಕಾರಿ ನೇಮಕದ ಬದಲು ಪ್ರಸ್ತುತ ಆಡಳಿತ ಸಮಿತಿಯನ್ನೇ ಮುಂದುವರಿಸಿ 6 ತಿಂಗಳುಗಳ ಕಾಲ ವಿಸ್ತರಣೆ ನೀಡಬೇಕೆಂದು ಗ್ರಾಮ ಪಂಚಾಯಿತಿ ಸದಸ್ಯರ ಮಹಾ ಒಕ್ಕೂಟ ಆಗ್ರಹಿಸಿದೆ. ಅಧಿನಿಯಮದ ಸೆಕ್ಷನ್ 8(1)(i)ರ ಪ್ರಕಾರ, ಚುನಾಯಿತ ಸದಸ್ಯರನ್ನೊಳಗೊಂಡ ಅಡಳಿತ ಸಮಿತಿಯನ್ನು ನೇಮಿಸುವ ಆಯ್ಕೆ ಇದ್ದರೂ ಸರ್ಕಾರ ಉಪಸೆಕ್ಷನ್ (ii)ಯಡಿ ಅಡಳಿತಾಧಿಕಾರಿ ನೇಮಕದ ಆಯ್ಕೆಯನ್ನು ಆರಿಸಿಕೊಂಡಿದೆ ಎಂದು ಸಂಘಟನೆ ಆಕ್ರೋಶ ವ್ಯಕ್ತಪಡಿಸಿದೆ.

2020ರಲ್ಲಿ ಕೋವಿಡ್ ಸಮಯದಲ್ಲಿ ಅಂದಿನ ವಿರೋಧಪಕ್ಷದ ನಾಯಕರಾಗಿದ್ದ ಸಿಎಂ ಸಿದ್ಧರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಹ ಇದೇ ಬೇಡಿಕೆ ಇಟ್ಟಿದ್ದನ್ನು ಸಂಘಟನೆ ಈ ಸಂದರ್ಭದಲ್ಲಿ ನೆನಪಿಸಿದೆ. ಈಗ ಅದೇ ಬೇಡಿಕೆ ಈಡೇರಿಸಬೇಕೆಂದು ಮಹಾ ಒಕ್ಕೂಟ ಒತ್ತಾಯಿಸಿದೆ.

ಹಾಗೆಯೇ, 2025-26ನೇ ಸಾಲಿನ 15ನೇ ಹಣಕಾಸು ಆಯೋಗದ ಅನುದಾನ ಮತ್ತು ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯ ಬಾಕಿ ಹಣವನ್ನು ತಕ್ಷಣ ಬಿಡುಗಡೆ ಮಾಡಬೇಕೆಂದು ಸಂಘಟನೆ ಆಗ್ರಹಿಸಿದೆ. ನಾಳೆ (ಜನವರಿ 29) ನಡೆಯಲಿರುವ ಜನಾಧಿಕಾರ ಸಮಾವೇಶದಲ್ಲಿ ಸಾವಿರಾರು ಗ್ರಾಮ ಪಂಚಾಯತಿ ಸದಸ್ಯರು ಮತ್ತು ನಾಗರಿಕರು ಭಾಗವಹಿಸಲಿದ್ದಾರೆ. ಸರ್ಕಾರ ತನ್ನ ನಿರ್ಧಾರವನ್ನು ಮರುಪರಿಶೀಲಿಸಿ ಪ್ರಜಾಪ್ರಭುತ್ವದ ತಳಮಟ್ಟದ ಆಡಳಿತವನ್ನು ಕಾಪಾಡಬೇಕೆಂದು ಸಂಘಟನೆ ಕೋರಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಸಂಘಟನೆಯ ರಾಜ್ಯಾಧ್ಯಕ್ಷರಾದ ಕಾಡಪೆಟ್ಟಿಹಳ್ಳಿ ಸತೀಶ್ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...