ಮೆಟ್ರೋ ಕಾಮಗಾರಿ | ಏಪ್ರಿಲ್ 1ರಿಂದ ‘ಒಂದು ವರ್ಷ’ ಈ ರಸ್ತೆಯಲ್ಲಿ ಸಂಚಾರ ಬಂದ್

Date:

ಬೆಂಗಳೂರಿನ ಲಕ್ಕಸಂದ್ರ ಸುರಂಗ ಮಾರ್ಗ, ಮೆಟ್ರೋ ನಿಲ್ದಾಣದ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆ, ಬನ್ನೇರುಘಟ್ಟ ಮುಖ್ಯರಸ್ತೆಯ ‘ಮೈಕೋ ಸಿಗ್ನಲ್‌ನಿಂದ ಆನೆಪಾಳ್ಯ ಜಂಕ್ಷನ್‌’ ನಡುವೆ ವಾಹನ ಸಂಚಾರವನ್ನು ಏಪ್ರಿಲ್ 1ರಿಂದ ಒಂದು ವರ್ಷದ ಅವಧಿಗೆ ಮುಚ್ಚಲಾಗುವುದು ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌) ಮಾಹಿತಿ ನೀಡಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಬಿಎಂಆರ್‌ಸಿಎಲ್, “ಲಕ್ಕಸಂದ್ರ ಸುರಂಗ ಮೆಟ್ರೋ ನಿಲ್ದಾಣದ ದಕ್ಷಿಣ ಭಾಗದ ಪ್ರವೇಶ ಕಾಮಗಾರಿಯ ನಿರ್ಮಾಣಕ್ಕೆ ಅನುಕೂಲವಾಗುವಂತೆ, ಬನ್ನೇರುಘಟ್ಟ ಮುಖ್ಯರಸ್ತೆಯಲ್ಲಿ ಉತ್ತರ ದಿಕ್ಕಿನ ಮಾರ್ಗವನ್ನು ಮೈಕೋ ಸಿಗ್ನಲ್‌ನಿಂದ ಆನೆಪಾಳ್ಯ ಜಂಕ್ಷನ್‌ವರೆಗೆ ಸಂಚಾರ ನಿರ್ಬಂಧಿಸಲಾಗಿದೆ” ಎಂದು ಹೇಳಿದೆ.

“ಈ ಸಂಬಂಧ ಬನ್ನೇರುಘಟ್ಟ ಮುಖ್ಯರಸ್ತೆಯಲ್ಲಿ ಡೈರಿ ಸರ್ಕಲ್ ಕಡೆಯಿಂದ ಚಲಿಸುವ ವಾಹನಗಳು ಆನೆಪಾಳ್ಯ ಜಂಕ್ಷನ್ ಕಡೆಗೆ ಚಲಿಸಬೇಕಾದ ವಾಹನಗಳು ಮೈಕೋ ಸಿಗ್ನಲ್‌ನಲ್ಲಿ ಬಲಕ್ಕೆ ತಿರುಗಿ ಭೋಷ್ ಲಿಂಕ್ ರಸ್ತೆಯ ಮೂಲಕ ಆಡುಗೋಡಿ ಸಿಗ್ನಲ್ ತಲುಪಿ ಎಡಕ್ಕೆ ತಿರುಗಿ ಚಲಿಸಬೇಕು” ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಆನೆಪಾಳ್ಯ ಜಂಕ್ಷನ್‌ನಿಂದ ಡೈರಿ ಸರ್ಕಲ್ ಕಡೆಗೆ ಚಲಿಸುವ ವಾಹನ ಸಂಚಾರದಲ್ಲಿ ಯಾವುದೇ ವ್ಯತ್ಯಯವಿರುವುದಿಲ್ಲ. ಡೈರಿ ಸರ್ಕಲ್‌ನಿಂದ ಶಾಂತಿನಗರ ಕಡೆಗೆ ಚಲಿಸುವ ವಾಹನಗಳು ವಿಲ್ಸನ್ ಗಾರ್ಡನ್‌ 7ನೇ ಮುಖ್ಯ ರಸ್ತೆಯಲ್ಲಿ ಎಡಕ್ಕೆ ತಿರುವು ತೆಗೆದುಕೊಳ್ಳಬೇಕು” ಎಂದು ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಸೈಬರ್ ವಂಚನೆ | ಭಾರತದವರನ್ನು ಬಳಸಿಕೊಂಡು ಭಾರತೀಯರಿಗೆ ಮೋಸ: ಕಾಂಬೋಡಿಯಾದಲ್ಲಿ ಸಿಕ್ಕಿಬಿದ್ದಿರುವ 5,000 ಭಾರತೀಯರು

ತುರ್ತಾಗಿ ಮೆಟ್ರೋ ಕಾಮಗಾರಿ

ನಗರದ ಮಹದೇವಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಕೆ.ಆರ್.ಪುರಂ ಮೆಟ್ರೋ ಸ್ಟೇಷನ್ ನಿಲ್ದಾಣದ ಬಳಿ ತುರ್ತಾಗಿ ಮೆಟ್ರೋ ಕಾಮಗಾರಿ ಕೈಗೊಳ್ಳಲಾಗಿದೆ. ಈ ಕಾಮಗಾರಿಯೂ ಮಾರ್ಚ್ 29 ರಿಂದ ಏಪ್ರಿಲ್ 1ವರಗೆ ನಡೆಯುತ್ತಿದೆ. ಹಾಗಾಗಿ, ಸಿಟಿ ಕಡೆ ಹಾಗೂ ಹೆಬ್ಬಾಳ ಕಡೆಗೆ ಹೋಗುವ ರಸ್ತೆಯ ಅರ್ಧ ಭಾಗ ಮುಚ್ಚಲಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸ್ ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...