ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹೆಸರು ಹೇಳಿ ಜನರಿಗೆ ಕೋಟ್ಯಂತರ ರೂ. ವಂಚನೆ: ದೂರು ದಾಖಲು

Date:

ಬೆಂಗಳೂರಿನಲ್ಲಿ ಜನರಿಗೆ ವಂಚನೆ ಮಾಡುವ ಜಾಲಗಳು ಹೆಚ್ಚಾಗಿ ಸಕ್ರಿಯವಾಗುತ್ತಿವೆ. ಇದೀಗ, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಆರ್‌ಬಿಐ ಹೆಸರು ಹೇಳಿಕೊಂಡು ಸಬ್ಸಿಡಿಯಲ್ಲಿ ಬ್ಯಾಂಕ್​ಗಳಿಂದ ಸಾಲ ಕೊಡಿಸುವುದಾಗಿ ಮಹಿಳೆಯೊಬ್ಬರು ನಂಬಿಸಿ ಹಲವರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನಲ್ಲಿ ನಡೆದಿದೆ.

ಬ್ಲೂ ವಿಂಗ್ಸ್ ಎಂಬ ಹೆಸರಿನ ನಕಲಿ ಟ್ರಸ್ಟ್ ಮಾಡಿಕೊಂಡು ಪವಿತ್ರಾ ಮತ್ತು ಆಕೆಯ ಗ್ಯಾಂಗ್ ಹಲವರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದೆ. ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಹೊಸೂರು ಮೂಲದ ಪವಿತ್ರ ವಿರುದ್ಧ ಸದ್ಯ ಆನೇಕಲ್, ಚಂದಾಪುರ, ಸೂರ್ಯನಗರ, ಹೊಸಕೋಟೆ ಅತ್ತಿಬೆಲೆಯಲ್ಲಿ ವಂಚನೆ ಪ್ರಕರಣ ಬಯಲಾಗಿದೆ.

ಪವಿತ್ರಾ, ಪ್ರವೀಣ್, ಯಲ್ಲಪ್ಪ, ಶೀಲ, ರುಕ್ಮಿಣಿ, ರಾಧ, ಮಮತಾ, ನೆಹರೂಜಿ, ಶರತ್ ಕುಮಾರ್, ಸತೀಶ್, ಮಂಜುಳಾ, ಆಲ್ಬರ್ಟ್ ಮಾರ್ಟಿನ್, ಹೇಮಲತಾ ಹಾಗೂ ಶಾಲಿನಿ ಎಂಬವರು ಆರೋಪಿಗಳು ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರೋಪಿಗಳು ಬ್ಲೂ ವಿಂಗ್ಸ್ ಎಂಬ ಹೆಸರಿನ ಟ್ರಸ್ಟ್ ಮಾಡಿಕೊಂಡು ಸಬ್ಸಿಡಿ ಸಾಲದ ಆಮಿಷವೊಡ್ಡಿ ಅಮಾಯಕರಿಗೆ ವಂಚಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಏನಿದು ಪ್ರಕರಣ?

ಆರೋಪಿಗಳು ತಾವು ಆರಂಭಿಸಿದ ಬ್ಲೂ ವಿಂಗ್ಸ್ ಎಂಬ ಹೆಸರಿನ ನಕಲಿ ಟ್ರಸ್ಟ್‌ಗೆ ಕೇಂದ್ರ ಸರ್ಕಾರದಿಂದ ₹17,000 ಕೋಟಿ ಹಣ ಬಂದಿದೆ. ನಿರ್ಮಲಾ ಸೀತಾರಾಮನ್ ಅವರು ನಮಗೆ ಹಣ ವರ್ಗಾವಣೆ ಮಾಡಿದ್ದಾರೆ. ಅಲ್ಲದೇ, ಕೇಂದ್ರ ಸಚಿವೆ ನಿರ್ಮಾಲಾ ಸೀತಾರಾಮನ್ ಅವರ ಸಹಿ ಇರುವ ನಕಲಿ ಕಾಪಿ ತೋರಿಸಿ ಚಂದಾಪುರ, ಅತ್ತಿಬೆಲೆ, ಹೊಸೂರು, ಧರ್ಮಪುರಿ ಸೇರಿದಂತೆ ಹಲವು ಕಡೆಗಳಲ್ಲಿ ನೂರಾರು ಜನರಿಗೆ ವಂಚಿಸಿದ್ದಾರೆ.

ವಂಚಕಿ
ಆರೋಪಿ ಪವಿತ್ರಾ

ಈ ಹಣವನ್ನು ಟ್ರಸ್ಟ್ ಮೂಲಕ ಸಬ್ಸಿಡಿಯಲ್ಲಿ ಸಾಲ ವಿತರಿಸುತ್ತೇವೆ. ಅಮೆರಿಕದಿಂದಲೂ ನಮ್ಮ ಟ್ರಸ್ಟ್‌ಗೆ ಹಣ ಸಂದಾಯ ಆಗಿದೆ. ಆ ಹಣವನ್ನು ಲೋನ್ ಮೂಲಕ ನಿಮಗೆ ಕೊಡುತ್ತೇವೆ. ₹10 ಲಕ್ಷ ಸಾಲ ಪಡೆದರೆ ₹5 ಲಕ್ಷ ಮಾತ್ರ ವಾಪಸ್ ಕಟ್ಟಿದರೆ ಸಾಕು. ₹5 ಲಕ್ಷ ನಿಮಗೆ ಸಬ್ಸಿಡಿಯಾಗಿ ಸಿಗುತ್ತದೆ. ಆದರೆ, ನೀವು ಲೋನ್ ಪಡೆಯಬೇಕು ಎಂದರೆ ಮುಂಚಿತವಾಗಿ ಹಣ ಕಟ್ಟಬೇಕು ಎಂದು ನಂಬಿಸಿ ನಯವಂಚಕರ ತಂಡ ಹಣ ಪಡೆದು ವಂಚಿಸಿದೆ ಎಂದು ದೂರಲಾಗಿದೆ.

ಮಹಿಳೆಯರನ್ನು ಕೇಂದ್ರೀಕರಿಸಿ ಕಾರ್ಯಾಚರಿಸಿದ ವಂಚಕರ ತಂಡ ನೂರಾರು ಮಹಿಳೆಯರಿಂದ ಈ ರೀತಿ ಹಣ ವಸೂಲಿ ಮಾಡಿದೆ. ಅಲ್ಲದೇ, ಕಂತೆ ಕಂತೆ ಹಣದ ನೋಟುಗಳ ವಿಡಿಯೋಗಳನ್ನ ಕಳುಹಿಸಿ ಜನರನ್ನು ಮರುಳು ಮಾಡಿದೆ. ಇದನ್ನು ನಂಬಿದ ಜನರು ಲಕ್ಷಾಂತರ ರೂಪಾಯಿ ಹಣ ನೀಡಿದ್ದಾರೆ. ಕೆಲವರು ಸಾಲ ಮಾಡಿ ಹಣ ನೀಡಿದ್ದಾರೆ. 2019ರಿಂದ ನಿರಂತರವಾಗಿ ಐದು ಸಾವಿರದಿಂದ ಇಪ್ಪತ್ತೈದು ಸಾವಿರ ರೂ.ವರೆಗೆ ಮಹಿಳೆಯರು ಈ ಟ್ರಸ್ಟ್‌ಗೆ ಹಣ ಕಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಈ ಸುದ್ದಿ ಓದಿದ್ದೀರಾ? ಪ್ರೀತಿಸಿದ ಯುವತಿಗೆ ಮತ್ತೊಬ್ಬನೊಂದಿಗೆ ವಿವಾಹೇತರ ಸಂಬಂಧ; ಮನನೊಂದ ಯುವಕ ಆತ್ಮಹತ್ಯೆ

ತಿಂಗಳುಗಳು ಕಳೆದರೂ ಲೋನ್ ಬಾರದೆ ಇದ್ದಾಗ ವಂಚಕಿ ಪವಿತ್ರಾಳ ಕಳ್ಳಾಟ ಬಯಲಾಗಿದೆ. ಸಾಲದ ಸುಳಿಗೆ ಸಿಲುಕಿದ ಅಮಾಯಕ ಜನರು ಬೀದಿಪಾಲಾಗಿದ್ದಾರೆ. ಚಂದಾಪುರ, ಅತ್ತಿಬೆಲೆ, ಹೊಸೂರು, ಧರ್ಮಪುರಿ ಸೇರಿದಂತೆ ಹಲವು ಕಡೆಗಳಲ್ಲಿ ಈಕೆ ವಂಚನೆ ಮಾಡಿದ್ದು, ನೂರಾರು ಮಂದಿಗೆ ಮಹಿಳೆ ವಂಚಿಸಿದ್ದಾಳೆ.

ಪ್ರಕರಣ ಸಂಬಂಧ ಸೂರ್ಯನಗರ, ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪವಿತ್ರ, ಪ್ರವೀಣ್, ಯಲ್ಲಪ್ಪ, ಶೀಲ, ರುಕ್ಮಿಣಿ, ರಾಧ, ಮಮತಾ, ನೆಹರೂಜಿ, ಶರತ್ ಕುಮಾರ್, ಸತೀಶ್, ಮಂಜುಳಾ, ಆಲ್ಬರ್ಟ್ ಮಾರ್ಟಿನ್, ಹೇಮಲತಾ, ಶಾಲಿನಿ ವಿರುದ್ಧ ಪ್ರಕರಣ ದಾಖಲಾಗಿದೆ.

ಆನೇಕಲ್, ಚಂದಾಪುರ, ಸೂರ್ಯನಗರ, ಹೊಸಕೋಟೆ, ಅತ್ತಿಬೆಲೆಯಲ್ಲಿ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿಗಳ ವಿರುದ್ಧ ಸೂರ್ಯನಗರ, ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...