ಬೆಂಗಳೂರಿನಲ್ಲಿ ನೀರಿಗೆ ಹಾಹಾಕಾರ; ಕೆ.ಆರ್ ಪುರದಲ್ಲಿ 15 ದಿನಕ್ಕೊಮ್ಮೆ ಕಾವೇರಿ ನೀರು

Date:

ಅಕಾಲಿಕ ಮಳೆಯ ಹಿನ್ನೆಲೆ, ರಾಜ್ಯದೆಲ್ಲೆಡೆ ಬರಗಾಲದ ಛಾಯೆ ಮೂಡಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅಂತರ್ಜಲ ಮಟ್ಟ ಕುಸಿದಿದ್ದು, ಹಲವೆಡೆ ನೀರಿಗೆ ಹಾಹಾಕಾರ ಶುರುವಾಗಿದೆ. ಕೆ.ಆರ್‌ ಪುರ ವಿಧಾನಸಭಾ ಕ್ಷೇತ್ರದ ಹಲವೆಡೆ ನೀರಿನ ಕೊರತೆ ಎದುರಾಗಿದೆ. ಇತ್ತಕಡೆ ಅಂತರ್ಜಲ ಮಟ್ಟ ಕುಸಿದಿದ್ದರೇ, ಮತ್ತೊಂದೆಡೆ ಕಾವೇರಿ ನೀರು 15 ದಿನಕ್ಕೊಮ್ಮೆ ಬರುತ್ತಿದೆ.

ನೀರಿನ ಸಮಸ್ಯೆ ತಲೆದೂರಿದ ಬೆನ್ನಲ್ಲೇ, ಇತ್ತಕಡೆ ಟ್ಯಾಂಕರ್ ನೀರಿನ ದರ ದುಪ್ಪಟ್ಟಾಗಿದೆ. ನೀರಿನ ಸಮಸ್ಯೆಯಿಂದಾಗಿ ಹಲವು ಜನ ಬಾಡಿಗೆದಾರರಿಗೆ ಸಮಸ್ಯೆ ಎದುರಾಗಿದೆ.

ನೀರಿನ ಕೊರತೆಯಿಂದಾಗಿ ಬಾಡಿಗೆದಾರರಿಗೆ ಸಮಸ್ಯೆ ಎದುರಾಗಿದ್ದು, ಟ್ಯಾಂಕರ್ ಮೂಲಕ ನೀರು ಹಾಕಿಸಿಕೊಳ್ಳುವಂತಹ ಸ್ಥಿತಿ ಎದುರಾಗಿದೆ. ಅಲ್ಲದೇ, ಅಂತರ್ಜಲ ಕುಸಿದು ಕೊಳವೆ ಬತ್ತಿದ ಮನೆಗಳಲ್ಲಿ ನೀರಿನ ಸಮಸ್ಯೆ ಹೆಚ್ಚಳವಾಗಿದೆ. ಇಂತಹ ಸಮಯದಲ್ಲಿ ಹೆಚ್ಚಿನ ಹಣ ಖರ್ಚು ಮಾಡಿ ಟ್ಯಾಂಕರ್ ನೀರು ಹಾಕಿಸಿಕೊಳ್ಳುವಂತಹ ಸ್ಥಿತಿ ಇದೆ. ಇದೀಗ, ಟ್ಯಾಂಕರ್ ಬೆಲೆ ₹500-₹900 ವರೆಗೂ ಇದ್ದು, ಎರಡು, ಮೂರು ಮನೆ ಬಾಡಿಗೆ ಕೊಟ್ಟ ಮಾಲೀಕರು ಎರಡು ದಿನಕ್ಕೊಮ್ಮೆ ಟ್ಯಾಂಕರ್‌ ನೀರು ಹಾಕಿಸಬೇಕಾಗಿದೆ. ಹೀಗಾಗಿ, ಹೆಚ್ಚಿನ ಹಣ ನೀಡಲು ಮನೆಯ ಮಾಲೀಕರು ಬಾಡಿಗೆದಾರರಿಗೆ ತಿಳಿಸುತ್ತಿದ್ದಾರೆ. ಅಲ್ಲದೇ, ನೀರಿನ ಸಮಸ್ಯೆಯಿಂದ ಇದ್ದ ಮನೆ ಖಾಲಿ ಮಾಡಿ ಬೇರೆ ಪ್ರದೇಶಗಳಿಗೆ ಜನರು ತೆರಳುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಂಗಳೂರಿನ ಎಚ್‌ಎಎಲ್‌, ವಿಜ್ಞಾನ ನಗರ, ವಿಜಿನಾಪುರ, ಕೆ.ಆರ್‌.ಪುರ, ದೇವಸಂದ್ರ, ಎ.ನಾರಾಯಣಪುರದ, ರಾಮಮೂರ್ತಿ ನಗರ, ಹೊರಮಾವು ಸೇರಿದಂತೆ ನಾನಾಕಡೆ ಕಾವೇರಿ ನೀರಿನ ಸಮಸ್ಯೆ ಇದೆ.

ನಗರದಲ್ಲಿ ಅಪಾರ್ಟ್‌ಮೆಂಟ್‌ಗಳ ಸಂಖ್ಯೆ ಹೆಚ್ಚಿದೆ. ಟ್ಯಾಂಕರ್‌ ನೀರು ದುಬಾರಿಯಾಗಿರುವ ಹಿನ್ನೆಲೆ, ವಸತಿ ಸಮುಚ್ಚಯಗಳಲ್ಲಿ ಮೆಂಟೇನೆನ್ಸ್‌ ದರ ಹೆಚ್ಚಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಅಗರಬತ್ತಿ ಕಂಟೈನರ್‌ನಲ್ಲಿ ₹17 ಲಕ್ಷ ಮೌಲ್ಯದ ಚಿನ್ನದ ತುಂಡು ಕಳ್ಳಸಾಗಣೆ

“ನೀರಿನ ಸಮಸ್ಯೆ ತುಂಬಾ ಹೆಚ್ಚಳವಾಗಿದೆ. ಕಾವೇರಿ ನೀರು ಸರ್ಮಪಕವಾಗಿ ಪೂರೈಕೆಯಾಗುತ್ತಿಲ್ಲ. 15 ದಿನಕ್ಕೊಮ್ಮೆ ನೀರು ಬಿಡಲಾಗುತ್ತಿದೆ. ಸ್ವಲ್ಪ ಸಮಯವೇ ನೀರನ್ನು ಬಿಡುತ್ತಿದ್ದಾರೆ. ಅಂತರ್ಜಲ ಮಟ್ಟ ಸಂಪೂರ್ಣವಾಗಿ ಕುಸಿದಿದೆ. ಕೊಳವೆ ಬಾವಿ 1,200 ಅಡಿ ಕೊರೆದರು ನೀರು ಸಿಗುತ್ತಿಲ್ಲ. ಹೀಗಾಗಿ, ಎಲ್ಲ ವಾರ್ಡ್‌ಗಳಲ್ಲೂ ಜನರು ಟ್ಯಾಂಕರ್‌ ನೀರನ್ನು ಅವಲಂಬಿಸುವಂತಾಗಿದೆ” ಎಂದು ಸ್ಥಳೀಯ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...