ಬರ ಪರಿಹಾರ | ಕುಂಟು ನೆಪ ಬೇಡ, ಕೂಡಲೇ ರೈತರ ಖಾತೆಗೆ 2,000 ಹಣ ಹಾಕಿ: ಬೊಮ್ಮಾಯಿ ಆಗ್ರಹ

Date:

ರಾಜ್ಯ ಸರ್ಕಾರ ಬರ ಪರಿಹಾರ ನೀಡಲು ಆಧಾರ ಜೋಡಣೆಯ ಕುಂಟು ನೆಪ ಹೇಳುತ್ತಿದೆ. ಈಗಾಗಲೇ ಫ್ರೂಟ್ಸ್ ಸಾಫ್ಟವೇರ್ ನಲ್ಲಿ 69 ಲಕ್ಷ ರೈತರ ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆಯಾಗಿದ್ದು, ಮುಖ್ಯಮಂತ್ರಿಗಳು ಸರ್ಕಾರದ ಆರ್ಥಿಕ ದುಸ್ಥಿತಿ ಮರೆ ಮಾಚಲು ತಾಂತ್ರಿಕ ಕಾರಣ ನೆಪ ಹೇಳುತ್ತಿದ್ದಾರೆ. ಸರ್ಕಾರ ತಕ್ಷಣ ರೈತರ ಖಾತೆಗಳಿಗೆ 2000. ರೂ. ಹಣ ವರ್ಗಾವಣೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು.

ಬೆಂಗಳೂರಿನಲ್ಲಿ ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ರಾಜ್ಯದಲ್ಲಿ ಬಹುತೆಕ ತಾಲೂಕುಗಳು ಬರ ಎಂದು ಘೋಷಣೆ ಆಗಿದೆ. ಮುಂಗಾರು, ಹಿಂಗಾರು ವಿಫಲವಾಗಿದೆ. ರಾಜ್ಯ ಸರ್ಕಾರ ಬರ ನಿರ್ವಹಣೆಗೆ ಯಾವುದೇ ಹಣ ಬಿಡುಗಡೆ ಮಾಡಿಲ್ಲ. ಯಾವುದೇ ಕಾಮಗಾರಿ ಆರಂಭಿಸಿಲ್ಲ. ಆರು ತಿಂಗಳು ಕಳೆದರೂ ಯಾವುದೇ ಕೆಲಸ ಮಾಡದ ಸಿದ್ದರಾಮಯ್ಯ ಸರ್ಕಾರ ಈಗ ಆಧಾರ್ ಜೋಡಣೆಯ ನೆಪ ಹೇಳಿ ರೈತರಿಗೆ ವಂಚನೆ ಮಾಡುತ್ತಿದೆ” ಎಂದು ವಾಗ್ದಾಳಿ ನಡೆಸಿದರು.

“ಈ ವರ್ಷ ಬರಗಾಲದ ಹಿನ್ನೆಲೆಯಲ್ಲಿ ಆಹಾರ ಉತ್ಪಾದನೆ ಕಡಿಮೆಯಾಗಲಿದೆ ಎಂದು ಕೃಷಿ ಇಲಾಖೆ ವರದಿ ಹೇಳುತ್ತಿದೆ. ಹೀಗಿದ್ದಾಗೂ ಯಾವುದೇ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುತ್ತಿಲ್ಲ. ಮಾತೆತ್ತಿದರೆ ಕೇಂದ್ರ ಸರ್ಕಾರದ ಕಡೆ ಬೆರಳು ತೋರಿಸುತ್ತಾರೆ. ಹಿಂದೆ ಎಲ್ಲ ಸರ್ಕಾರಗಳು ಕೇಂದ್ರದ ದಾರಿ ಕಾಯದೇ ಮೊದಲು ಜನರ ಸಂಕಷ್ಟಕ್ಕೆ ಸ್ಪಂದಿಸುವ‌ ಕೆಲಸ ಮಾಡುತ್ತಿದ್ದವು. ಬೆಳಗಾವಿ ಅಸೆಂಬ್ಲಿ ಅಧಿವೇಶನಕ್ಕೆ ಮುಂಚೆ ರೈತರ ಬ್ಯಾಂಕ್ ಖಾತೆಗೆ ಪ್ರತಿ ಹೆಕ್ಟೇರ್ ಗೆ 2000 ರೂ. ಹಾಕುವುದಾಗಿ ಹೇಳಿದ್ದೀರಿ, ಈಗ ಆಧಾರ್ ಲಿಂಕ್ ಮಾಡುವುದಾಗಿ ಹೇಳುತ್ತಿದ್ದೀರಿ” ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈಗಾಗಲೇ ಫ್ರೂಟ್ಸ್ ಸಾಪ್ಟ್ ವೇರ್ ನಲ್ಲಿ ಸುಮಾರು 69 ಲಕ್ಷ ರೈತರ ಆಧಾರ್ ಲಿಂಕ್ ಆಗಿದೆ. ಅದನ್ನು ಮರೆ ಮಾಚಿ ಸರ್ಕಾರದ ಆರ್ಥಿಕ ದುಸ್ಥಿತಿ ಮರೆ ಮಾಚಲು ತಾಂತ್ರಿಕ ಕಾರಣ ಹೇಳುತ್ತಿದ್ದೀರಿ. ನಿಮಗೆ ರೈತರ ಬಗ್ಗೆ ಕಾಳಜಿ ಇದ್ದರೆ‌ ತಕ್ಷಣ 2000 ರೂ. ರೈತರ ಖಾತೆಗೆ ಜಮಾ ಮಾಡಬೇಕು. ರೈತರು ತಿರುಗಿ ಬಿದ್ದರೆ ಯಾವ ಸರ್ಕಾರವೂ ನಡೆಯುವುದು ಕಷ್ಟವಾಗಲಿದೆ” ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಹಿಂದೂ ರಾಷ್ಟ್ರ ಮಾಡುತ್ತೇವೆ, ತಾಕತ್ತಿದ್ದರೆ ಕಾಂಗ್ರೆಸ್ ತಡೀಲಿ:‌ ಪ್ರಮೋದ್ ಮುತಾಲಿಕ್ ಸವಾಲು

ಗುಪ್ತಚರ ಇಲಾಖೆ ವೈಫಲ್ಯ

“ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರು ಕರಸೇವಕರ ಕುರಿತು ನೀಡಿರುವ ಹೇಳಿಕೆಯಂತೆ ತಮ್ಮ ಇಲಾಖೆಗೆ ಯಾವುದೇ ಮಾಹಿತಿ ಇಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಅವರು ಹೇಳಿರುವುದು ಗುಪ್ತಚರ ಇಲಾಖೆ ಸಂಪೂರ್ಣ ವಿಫಲವಾಗಿರುವುದು ಸ್ಪಷ್ಟವಾಗಿದೆ” ಎಂದರು.

“ಒಬ್ಬ ಎಂಎಲ್ಸಿಗೆ ಇರುವ ಮಾಹಿತಿ ಗೃಹ ಇಲಾಖೆಗೆ ಮಾಹಿತಿ ಇಲ್ಲ ಎಂದರೆ ಇಂಟ್ಲಿಜೆನ್ಸ್ ವಿಫಲವಾಗಿದೆ.‌ ಗೃಹ ಸಚಿವರು ಅಗತ್ಯ ಬಿದ್ದರೆ ಅವರನ್ನು ಕರೆದು ಮಾತನಾಡುತ್ತೇನೆ ಎಂದು ಹೇಳಿದ್ದಾರೆ. ಹರಿಪ್ರಸಾದ್ ಪ್ರಚೋದನಾತ್ಮಕವಾಗಿ ಹೇಳಿಕೆ ನೀಡಿದ್ದು, ಬೇರೆಯವರು ಮಾಡಿದ್ದರೆ ಇಷ್ಟೊತ್ತಿಗೆ ಬಂಧಿಸುತ್ತಿದ್ದರು” ಎಂದು ಹೇಳಿದರು.

“ಬಿಜೆಪಿಯವರು ಕಾನೂನು ಸುವ್ಯವಸ್ಥೆ ಹಾಳು ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ಇವರ ಅವಧಿಯಲ್ಲಿ ಅಪರಾಧ ಪ್ರಕರಣ ಹೆಚ್ಚಾಗಿವೆ. ಮಹಿಳೆಯರ ಮೇಲೆ ದೌರ್ಜನ್ಯ, ಅಕ್ರಮ ಸಾರಾಯಿ ದಂಧೆ, ಇಸ್ಪೀಟ್ ಅಡ್ಡೆಗಳು ಅವ್ಯಾಹತವಾಗಿ ನಡೆಯುತ್ತಿವೆ. ಈ ವರ್ಷ ಅಪರಾಧ ಪ್ರಕರಣಗಳು ಹೆಚ್ಚಾಗಿವೆ. ಆದರೆ, ಅಪರಾಧ ಪತ್ತೆಹಚ್ಚುವ ಕಾರ್ಯ ಕಡಿಮೆಯಾಗಿದೆ ಎಂಬ ವರದಿ‌ ಇದೆ. ಅಂದರೆ, ಅಪರಾಧ ಪತ್ತೆ ಹಚ್ಚುವಲ್ಲಿ ಗೃಹ ಇಲಾಖೆ ವಿಫಲವಾಗಿದೆ. ಗೃಹ ಇಲಾಖೆ ಮುಖ್ಯಸ್ಥರಾಗಿ ಪರಮೇಶ್ವರ್ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

“ಸಿಎಂ ಸಿದ್ದರಾಮಯ್ಯ ಯಾವುದೇ ಅನುಮಾನದ ಮಾತುಗಳಿಗೆ ಉತ್ತರ ಕೊಡುವುದಿಲ್ಲ ಅಂತ ಹೇಳಿದ್ದಾರೆ. ಹರಿಪ್ರಸಾದ್ ಯಾವ ಆಧಾರದಲ್ಲಿ ಈ ರೀತಿಯ ಹೇಳಿಕೆ ನೀಡಿದ್ದಾರೆ ಅನ್ನುವುದನ್ನು ಕರೆದು ವಿಚಾರಣೆ ಮಾಡಬೇಕು. ಅದನ್ನು ಬಿಟ್ಟು ಗೊಂದಲ ಸೃಷ್ಟಿಸುವ ಕೆಲಸ ಮಾಡಬಾರದು” ಎಂದರು.

“ಕರಸೇವಕ ಶ್ರೀಕಾಂತ ಪೂಜಾರಿ ವಿರುದ್ದ ಎಷ್ಟೇ ಪ್ರಕರಣ ಇರಲಿ ಅವು‌ ಕೋರ್ಟ್ ನಲ್ಲಿ ವಿಚಾರಣೆ ಹಂತದಲ್ಲಿವೆ. ಆದರೆ, ಈ ಸಂದರ್ಭದಲ್ಲಿ 32 ವರ್ಷಗಳ ಹಿಂದಿನ ಕರಸೇವೆಯ ಆರೋಪದ ಪ್ರಕರಣದಲ್ಲಿ ಬಂಧಿಸುವ ಉದ್ದೇಶವೇನಿತ್ತು. ಹುಬ್ಬಳ್ಳಿಯಲ್ಲಿ ಗಡಿಪಾರು ಆದವರು ಇದ್ದಾರೆ. ಇವರೊಬ್ಬರ ಮೇಲೆ ಏಕೆ ಈ ಸಂದರ್ಭದಲ್ಲಿ ಕ್ರಮ ಕೈಗೊಂಡಿದ್ದಾರೆ ಎಂದು ಪ್ರಶ್ನಿಸಿದರು.

“ಆರೋಪಿಗಳ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಅವರು ವಿತಂಡ ವಾದ ಮಾಡುವುದರಲ್ಲಿ ನಿಸ್ಸೀಮರು. ಅವರಿಗೆ ಹರಿಪ್ರಸಾದ್ ಮೇಲೆ ನಂಬಿಕೆ ಇಲ್ಲ. ಆದರೆ, ವಿತಂಡ ವಾದ ಮಾಡುವುದೇ ಅವರ ಸ್ವಭಾವ‌” ಎಂದು ಹರಿಹಾಯ್ದರು.

ಕಾಂಗ್ರೆಸ್ ನಿಂದ ರಾಜಕಾರಣ

“ರಾಮ ಮಂದಿರ ನಿರ್ಮಾಣ ಮಾಡುವುದರಲ್ಲಿ ಹಿಂದೂ ಮುಸ್ಲಿಮರು ಸೇರಿದಂತೆ ಯಾವುದೇ ಸಾಮಾನ್ಯ ಜನರು ರಾಜಕಾರಣ ಮಾಡುತ್ತಿಲ್ಲ.‌ ತಲೆ‌ಕೆಡಿಸಿಕೊಂಡಿಲ್ಲ. ಕಾಂಗ್ರೆಸ್ ‌ನವರು ಮಾತ್ರ ರಾಜಕಾರಣ ಮಾಡುತ್ತಿದ್ದಾರೆ. ರಾಮಮಂದಿರ ಉದ್ಘಾಟನೆಗೆ ಕೇವಲ ಪ್ರಧಾನಿ ಮೋದಿ ಒಬ್ಬರೇ ಹೊಗುತ್ತಿಲ್ಲ. ರಾಮ ಮಂದಿರಕ್ಕಾಗಿ ಯಾರು ಸೇವೆ, ಸಹಾಯ ಮಾಡಿದ್ದಾರೊ ಅವರನ್ನು ರಾಮ ಮಂದಿರ ಸಮಿತಿಯವರು ಕರೆದಿದ್ದಾರೆ. ಕಾಂಗ್ರೆಸ್ ನವರು ಅದರಲ್ಲಿ ರಾಜಕಾರಣ ಮಾಡುತ್ತಿದ್ದಾರೆ” ಎಂದರು.

ಗುಜರಾತಿನ ಸೋಮನಾಥ ಮಂದಿರ ಉದ್ಘಾಟನೆಗೆ ಅಂತಿನ ಪ್ರಧಾನಿ ಜವಾಹರಲಾಲ್ ನೆಹರು ಭಾಗವಹಿಸದಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ಸೋಮನಾಥ ಮಂದಿರ ಅತ್ಯಂತ ಅದ್ಬುತ ಮಂದಿರ ಆಗಿನ ಪ್ರಧಾನಿ ಜವಾಹರ ಲಾಲ್ ನೆಹರು ಹೋಗಿರಲಿಲ್ಲ. ಹಾಗಾಗಿ ಗೃಹ ಸಚಿವರಾಗಿದ್ದ ವಲ್ಲಭಬಾಯಿ ಪಟೇಲರು ಹೋಗಿದ್ದರು. ಈಗಿನ ಪ್ರಧಾನಿಗಳು ಆಸ್ತಿಕರಿದ್ದಾರೆ. ರಾಮನ ಭಕ್ತರಿದ್ದಾರೆ‌. ಹೀಗಾಗಿ ಅವರು ಉದ್ಘಾಟನೆ ಮಾಡುತ್ತಿದ್ದಾರೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...