ಕಾನೂನು ಗೌರವಿಸದ ಪೊಲೀಸ್ ಅಧಿಕಾರಿಗೆ ಸಹಾನುಭೂತಿ ಇಲ್ಲ: ಹೈಕೋರ್ಟ್

Date:

ನ್ಯಾಯಾಲಯ ನೀಡಿದ ಆದೇಶವನ್ನು ಗೌರವಿಸದೆ, ಆರೋಪಿಗೆ ನೀಡಲಾದ ಜಾಮೀನಿನ ಪ್ರತಿ ಹರಿದು, ನ್ಯಾಯಧೀಶರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿ ನ್ಯಾಯಾಂಗದ ಪ್ರತಿಷ್ಠೆಗೆ ಧಕ್ಕೆ ತಂದ ಪೊಲೀಸ್ ಅಧಿಕಾರಿಗೆ ನ್ಯಾಯಾಲಯದ ಸಹಾನುಭೂತಿ ಇಲ್ಲ. ಇನ್ಸ್‌ಪೆಕ್ಟರ್‌ ಹರೀಶ್‌ ವಿ ವಿರುದ್ಧದ ಕ್ರಿಮಿನಲ್ ಮೊಕದ್ದಮೆಗಳನ್ನು ರದ್ದುಗೊಳಿಸಲಾಗದು ಎಂದು ಹೈಕೋರ್ಟ್‌ ಹೇಳಿದೆ.

ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ತೊಡಗಿರುವ ನಾರಾಯಣಸ್ವಾಮಿ ಅವರು ಇನ್ಸ್‌ಪೆಕ್ಟರ್‌ ಹರೀಶ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದರು. ತಮ್ಮ ವಿರುದ್ಧ ಮೊಕದ್ದಮೆಯನ್ನು ಪ್ರಶ್ನಿಸಿ ಹರೀಶ್ ಅವರು 2021ರ ಜುಲೈ 30ರಂದು ಆನೇಕಲ್‌ನ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ ನಟರಾಜನ್ ಅವರು ಹರೀಶ್ ಅವರ ಅರ್ಜಿಯನ್ನು ವಜಾಗೊಳಿಸಿದ್ದಾರೆ.

ಏನಿದು ಪ್ರಕರಣ?
ಸಬ್ ಇನ್ಸ್‌ಪೆಕ್ಟರ್ ಹರೀಶ್ 2021ರಲ್ಲಿ ಬೆಂಗಳೂರಿನ ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ಆಗಿದ್ದರು. 2021ರ ಜುಲೈ 10ರಂದು ಪ್ರಕರಣವೊಂದರ ವಿಚಾರಣೆಗಾಗಿ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದ ನಾರಾಯಣಸ್ವಾಮಿ ಅವರನ್ನು ಹುಳಿಮಾವು ಪೊಲೀಸ್ ಠಾಣೆಗೆ ಇನ್ಸ್‌ಪೆಕ್ಟರ್ ಕರೆದೊಯ್ದಿದ್ದರು. ಬಳಿಕ, ಅವರನ್ನು ಬಂಧಿಸಿ, ಕೋರಮಂಗಲದಲ್ಲಿರುವ ಡಿಸಿಪಿ ಕಚೇರಿಗೆ ಕರೆತಂದಿದ್ದರು. ಅಲ್ಲಿ, ನ್ಯಾಯಾಲಯದ ಜಾಮೀನಿನ ಮೇಲೆ ನಾರಾಯಣಸ್ವಾಮಿ ಅವರನ್ನು ಬಿಡುಗಡೆ ಮಾಡಲಾಗಿತ್ತು ಎಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅದೇ ದಿನ ಸಂಜೆ 4 ಗಂಟೆ ಸುಮಾರಿಗೆ ನನ್ನನ್ನು ಬಂಧಿಸಲು ಹರೀಶ್ ಅವರು ಪೊಲೀಸ್ ಸಿಬ್ಬಂದಿಯೊಂದಿಗೆ ಡಿಸಿಪಿ ಕಚೇರಿಗೆ ಬಂದರು. ಸರ್ಜಾಪುರ ಪೊಲೀಸರು ದಾಖಲಿಸಿರುವ ಅಪರಾಧ ಪ್ರಕರಣದಲ್ಲಿ ದೂರುದಾರರಿಗೆ ಈಗಾಗಲೇ, ನಿರೀಕ್ಷಣಾ ಜಾಮೀನು ನೀಡಿರುವ ಬಗ್ಗೆ ವಕೀಲರು ಇನ್ಸ್‌ಪೆಕ್ಟರ್‌ ಹರೀಶ್‌ಗೆ ಮಾಹಿತಿ ನೀಡಿದರು. ಆದರೆ, ಜಾಮೀನು ಆದೇಶದ ಪ್ರತಿಯನ್ನು ಸ್ವೀಕರಿಸಿದ ಹರೀಶ್, ಅದನ್ನು ಹರಿದು ನೆಲದ ಮೇಲೆ ಎಸೆದಿದ್ದಾರೆ. ಅಲ್ಲದೇ, ತಮ್ಮ ಠಾಣೆಗೆ ನ್ಯಾಯಾಧೀಶರು ಎಂದು ಹೇಳಿಕೆ ನೀಡಿದ್ದಾರೆ. ಜಾಮೀನು ನೀಡಿದ ನ್ಯಾಯಾಧೀಶರನ್ನು ಅಸಭ್ಯ ಭಾಷೆಯಲ್ಲಿ ನಿಂದಿಸಿದ್ದಾರೆ. ದೂರುದಾರರಿಗೆ ತಾವು ಜಾಮೀನು ನೀಡಬೇಕೆ, ಹೊರತು ಯಾವುದೇ ನ್ಯಾಯಾಲಯವಲ್ಲ” ಎಂದು ನಾರಾಯಣಸ್ವಾಮಿ ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕೇಜ್ರಿವಾಲ್ ಬಂಧನ ಖಂಡಿಸಿ ಎಎಪಿ ಪ್ರತಿಭಟನೆ: ಬೆಂಬಲ ಕೋರಿ ‘ಜಾಗೃತ ಕರ್ನಾಟಕ’ಕ್ಕೆ ಪತ್ರ

ದೂರುದಾರರನ್ನು ಠಾಣೆಗೆ ಕರೆದುಕೊಂಡು ಹೋಗಿ ರಿವಾಲ್ವರ್‌ನಿಂದ ಬೆದರಿಸಿ ‘ಎನ್‌ಕೌಂಟರ್‌’ನಲ್ಲಿ ಮುಗಿಸಿ ಶವವನ್ನು ಹೂಳುವುದಾಗಿ ಬೆದರಿಕೆ ಹಾಕಿದ್ದಾರೆ.

ಇದೇ ವೇಳೆ, ಸ್ಥಳದಲ್ಲಿದ್ದ ಇಬ್ಬರು ವಕೀಲರು ಹರೀಶ್ ಅವರ ವರ್ತನೆಯನ್ನು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾರೆ. ಆರೋಪಿ ಪೊಲೀಸ್ ಅಧಿಕಾರಿ ನ್ಯಾಯಾಲಯದ ವಿರುದ್ಧ ಅಸಭ್ಯವಾಗಿ ವರ್ತಿಸಿದ ಘಟನೆಗೆ ಪ್ರತ್ಯಕ್ಷದರ್ಶಿಗಳು ಮತ್ತು ದೂರುದಾರ ನಾರಾಯಣಸ್ವಾಮಿ ಅವರಾಗಿದ್ದಾರೆ. ಹಾಗಾಗಿ, ಅರ್ಜಿದಾರರು ವಿಚಾರಣೆಗೆ ಹೋಗಬೇಕಾಗುತ್ತದೆ ಎಂದು ನ್ಯಾಯಾಲಯವು ಹೇಳಿದೆ.

ಆರೋಪಿಗೆ ನೀಡಲಾದ ನಿರೀಕ್ಷಣಾ ಜಾಮೀನಿನ ಪ್ರತಿಯನ್ನು ಹರಿದು ನೆಲದ ಮೇಲೆ ಎಸೆದು, ಜಾಮೀನು ನೀಡಿದ ಸೆಷನ್ಸ್ ನ್ಯಾಯಾಧೀಶರನ್ನು ನಿಂದಿಸಿ ನ್ಯಾಯಾಂಗದ ಪ್ರತಿಷ್ಠೆಗೆ ಧಕ್ಕೆ ತಂದ ಆರೋಪದ ಮೇಲೆ ಇನ್ಸ್‌ಪೆಕ್ಟರ್ ಹರೀಶ್ ವಿ ವಿರುದ್ಧದ ಕ್ರಿಮಿನಲ್ ಮೊಕದ್ದಮೆಗಳನ್ನು ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ.

“ಅರ್ಜಿದಾರರು ಪೊಲೀಸ್ ಅಧಿಕಾರಿಯಾಗಿ ನ್ಯಾಯಾಲಯದ ಆದೇಶವನ್ನು ದೂಷಿಸಿದ್ದಾರೆ. ನ್ಯಾಯಾಲಯದ ಆದೇಶವನ್ನು ಹರಿದು ಹಾಕಿದ್ದಾರೆ ಮತ್ತು ಅದನ್ನು ನೆಲದ ಮೇಲೆ ಎಸೆದು ಸೆಷನ್ಸ್ ನ್ಯಾಯಾಧೀಶರನ್ನು ನಿಂದಿಸಿದ್ದಾರೆ. ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ ಸೆಷನ್ಸ್ ನ್ಯಾಯಾಧೀಶರನ್ನು ಹೊಲಸು ಭಾಷೆಯಲ್ಲಿ ನಿಂದಿಸಿದ್ದಾರೆ. ಅಂತಹ ಪೋಲೀಸ್ ಅಧಿಕಾರಿಯನ್ನು ಕಾನೂನು ಪ್ರಕಾರ ವಿಚಾರಣೆಗೆ ಒಳಪಡಿಸಿ ಶಿಕ್ಷಿಸಲಾಗುವುದು. ಪೊಲೀಸ್ ಇಲಾಖೆಯು ಅವರ ವಿರುದ್ಧ ಇಲಾಖಾ ವಿಚಾರಣೆಯನ್ನು ನಡೆಸಬೇಕು. ಕಾನೂನಿನ ಬಗ್ಗೆ ಗೌರವವಿಲ್ಲದ ಇಂತಹ ವ್ಯಕ್ತಿಗೆ ನ್ಯಾಯಾಲಯವು ಯಾವುದೇ ಸಹಾನುಭೂತಿ ತೋರಿಸಲು ಸಾಧ್ಯವಿಲ್ಲ. ಅವರ ವಿರುದ್ಧದ ಕ್ರಿಮಿನಲ್ ಮೊಕದ್ದಮೆಗಳನ್ನು ರದ್ದುಗೊಳಿಸಲು ಇದು ಯೋಗ್ಯವಾದ ಪ್ರಕರಣವಲ್ಲ” ಎಂದು ನ್ಯಾಯಮೂರ್ತಿ ಕೆ.ನಟರಾಜನ್ ಅವರು ಹರೀಶ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...